ಮತದಾನ ಜಾಗೃತಿಗಾಗಿ ಉದ್ಯೋಗ ತೊರೆದು ಬೈಕ್‌ ಏರಿದ ಯುವಕ


Team Udayavani, Mar 23, 2019, 6:40 AM IST

23-march-6.jpg

ಮಹಾನಗರ : ದೇಶಾದ್ಯಂತ ಚುನಾವಣಾ ಕಾವು ಏರುತ್ತಿದೆ. ಅಭ್ಯರ್ಥಿಗಳಿಗೆ ಗೆಲುವಿನ ಚಿಂತೆಯಾದರೆ ಅಧಿಕಾರಿಗಳಿಗೆ ಎಲ್ಲರಲ್ಲೂ ಮತದಾನ ಮಾಡಿ ಸುವ ಹೊಣೆ. ಈ ನಡುವೆ ಸರಕಾರ, ಜಿಲ್ಲಾಡಳಿತ ಮತದಾನ ಜಾಗೃತಿ ಕುರಿತಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಕೆಲಸಕ್ಕೆ ಬೆಂಗಳೂರು ಮೂಲದ ಯುವಕ ಸಾಥ್‌ ನೀಡುತ್ತಿದ್ದಾನೆ.

43 ವರ್ಷದ ಬಸವರಾಜು ಎಸ್‌. ಕಲ್ಲುಸಕ್ಕರೆ ಅವರು ತನ್ನ ಎವೆಂಜರ್‌ ಬೈಕ್‌ನಲ್ಲಿ ಮತದಾನ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಸಂಚಾರ ಆರಂಭಿಸಿದ್ದಾರೆ. ಬೆಂಗಳೂರಿನಿಂದ ಆರಂಭಗೊಂಡ ಇವರ ಪ್ರಯಾಣ ಈಗಾಗಲೇ 21 ಜಿಲ್ಲೆಗಳನ್ನು ಮುಗಿಸಿದ್ದು, 22ನೇ ಜಿಲ್ಲೆಯಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಬಸವರಾಜು ಎಸ್‌. ಕಲ್ಲು ಸಕ್ಕರೆ ಅವರು ಮಾರ್ಗಮಧ್ಯೆ ಸಿಗುವ ಸರಕಾರಿ ಶಾಲೆ, ಕಾಲೇಜು, ಮತ್ತು ಗ್ರಾಮ ಪಂಚಾಯಿತ್‌ ಗಳಿಗೆ ಭೇಟಿ ನೀಡಿ ಮತದಾನ ಜಾಗೃತಿಯೊಂದಿಗೆ, ಕನ್ನಡ ಬಳಸಿ, ಕನ್ನಡ ಶಾಲೆ ಉಳಿಸಿ ,ರಕ್ತದಾನ ಮಾಡಿ, ಗಿಡ ನೆಡಿ ಮೊದಲಾದವುಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಇಲ್ಲಿಯವರೆಗೆ 4,000 ಕಿ.ಮೀ. ಕ್ರಮಿಸಿರುವ ಬಸವರಾಜ್‌ ಅವರು ಮತದಾನ ಜಾಗೃತಿಗಾಗಿ ಉತ್ತಮ ವೇತನವಿದ್ದ ಉದ್ಯೋಗವನ್ನು ತೊರೆದಿದ್ದಾರೆ. ಗುರುವಾರ ಉಡುಪಿಗೆ ತೆರಳಿರುವ ಇವರು ಶುಕ್ರವಾರ ಮಂಗಳೂರಿನಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಇಲ್ಲಿಂದ ಧರ್ಮಸ್ಥಳಕ್ಕೆ ತೆರಳಿ ಬಳಿಕ ಬಾಕಿ ಇರುವ ಎಂಟು ಜಿಲ್ಲೆಗಳಿಗೆ ಪ್ರಯಾಣ ಬೆಳಸಲಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ  ದೊರೆತು 70 ವರ್ಷಗಳೇ ಕಳೆದಿವೆ. ಆದರೆ ಈವರೆಗೆ ಶೇ.50- 60ರಷ್ಟು ಮತದಾನ ಆಗುತ್ತಿದೆ. ಶೇ. 100ರಷ್ಟು ಮತದಾನವಾಗಬೇಕು ಎಂಬುದು ನನ್ನ ಉದ್ದೇಶ. ಆ ಕಾರಣಕ್ಕಾಗಿ ನಾನು ಉದ್ಯೋಗ ತೊರೆದು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ತೊಡಗಿದ್ದೇನೆ ಎಂದು ಹೇಳುತ್ತಾರೆ ಬಸವರಾಜ್‌.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.