ಲೋನ್‌ ಆ್ಯಪ್‌ ಸುಳಿಯಲ್ಲಿ ಕರಾವಳಿಯ ಯುವತಿಯರು!


Team Udayavani, Mar 8, 2022, 8:25 AM IST

loan

ಮಂಗಳೂರು: ಸುಲಭದಲ್ಲಿ ಸಾಲ ನೀಡುತ್ತೇವೆಂದು ಹೇಳಿ ಈಗಾಗಲೇ ಕೆಲವು ಯುವಕರ ಬದುಕನ್ನೇ ಕಸಿದುಕೊಂಡಿರುವ “ಲೋನ್‌ ಆ್ಯಪ್‌’ಗಳ ಸುಳಿಯಲ್ಲಿ ಕರಾವಳಿ ಭಾಗದ ಕೆಲವು ಯುವತಿಯರು ಕೂಡ ಸಿಲುಕಿರುವುದು ಬೆಳಕಿಗೆ ಬಂದಿದೆ.

ತುರ್ತು ಅಗತ್ಯಕ್ಕಾಗಿ ಆ್ಯಪ್‌ ಮೂಲಕ ಸಾಲ ಪಡೆದು ಸಕಾಲದಲ್ಲಿ ಮರುಪಾವತಿಸಲು ಸಾಧ್ಯವಾಗದವರು ಮಾತ್ರವಲ್ಲದೆ, ಮರುಪಾವತಿ ಮಾಡಿದವರು ಕೂಡ ಹಿಂಸೆ ಅನುಭವಿಸುತ್ತಿದ್ದಾರೆ.

ಯುವತಿಯೋರ್ವಳು ಕುಟುಂಬದ ತುರ್ತು ಅಗತ್ಯಕ್ಕಾಗಿ “ಲೋನ್‌ ಆ್ಯಪ್‌’ ಮೂಲಕ 8,000 ರೂ. ಪಡೆದುಕೊಂಡಿದ್ದು ಬಳಿಕ ಮರುಪಾವತಿ ಮಾಡಿದ್ದರು. ಆದರೂ ಕೆಲವು ದಿನಗಳ ಅನಂತರ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಲಾಗಿದೆ. ಬಳಿಕ ಆಕೆಯ ಫೋಟೋವನ್ನು ಪಡೆದು ಅಶ್ಲೀಲವಾಗಿ ಎಡಿಟ್‌ ಮಾಡಿ ಆಕೆಯ ಗೆಳೆಯರು, ಸಂಬಂಧಿಕರು, ಪಕ್ಕದ ಮನೆಯವರಿಗೆ ಕಳುಹಿಸಲಾಗಿದೆ. ಇದನ್ನು ತಿಳಿದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ. ಆಕೆಗೆ ಬರುತ್ತಿದ್ದ ವಾಟ್ಸ್‌ಆ್ಯಪ್‌ಕರೆಗೆ ವಾಪಸ್‌ ಕರೆ ಮಾಡಿದರೆ ಅದು ಯಾವುದೋ ಓರ್ವಳು ಮಹಿಳೆಗೆ ಸಂಪರ್ಕ ಆಗುತ್ತಿದೆ. ಆಕೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾಳೆ. ಕಿರುಕುಳಕ್ಕೊಳಗಾದ ಯುವತಿ ಸದ್ಯ ಸಿಮ್‌ ಬದಲಾಯಿಸಿದ್ದಾಳೆ. ಆದರೆ ಈಗ ಆಕೆಯ ಸಹೋದರಿಗೆ ನಿರಂತರ ಕರೆ ಮಾಡಿ ಕಿರುಕುಳ ನೀಡಲಾಗುತ್ತಿದೆ. ಇದೇ ರೀತಿ ಮತ್ತೋರ್ವಳು ಯುವತಿಯೂ ತೊಂದರೆಗೀಡಾಗಿದ್ದಾರೆ. ದ.ಕ.,ಉಡುಪಿ ಜಿಲ್ಲೆಯಲ್ಲಿ ಇಂತಹ ಹಲವು ಪ್ರಕರಣಗಳು ನಡೆದಿರುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಂಗಳೂರಿನಲ್ಲಿ ಮತ್ತೆ 3 ಪ್ರಕರಣ
ಕಳೆದ ಜನವರಿಯಲ್ಲಿ ಸುರತ್ಕಲ್‌ನ ಓರ್ವ ಯುವಕ ಲೋನ್‌ ಆ್ಯಪ್‌ ಸುಳಿಗೆ ಬಿದ್ದು ಅನಾಹುತ ಮಾಡಿಕೊಂಡಿದ್ದ. ಇದೀಗ ಮತ್ತೆ ಮೂವರು ಯುವಕರು ತೊಂದರೆಗೆ ಸಿಲುಕಿರುವುದು ಬೆಳಕಿಗೆ ಬಂದಿದೆ. ಅವರಿಗೆ ಪೊಲೀಸ್‌ ಇಲಾಖೆಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗಿದ್ದು ಸದ್ಯ ಮಾನಸಿಕವಾಗಿ ಸುಧಾರಿಸಿಕೊಳ್ಳುತ್ತಿದ್ದಾರೆ.

ಚೀನ ಲಿಂಕ್‌; ಕೇಂದ್ರ ಗುಪ್ತಚರ ಸಂಸ್ಥೆಗಳಿಂದ ತನಿಖೆ
ಲೋನ್‌ ಆ್ಯಪ್‌ ಚೀನದ ಲಿಂಕ್‌ ಇರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಕರಾವಳಿ ಭಾಗದಲ್ಲಿ ನಡೆದಿರುವ ಲೋನ್‌ ಆ್ಯಪ್‌ ಪ್ರಕರಣಗಳ ಮಾಹಿತಿಯನ್ನು ಕೇಂದ್ರ ಗುಪ್ತಚರ ಸಂಸ್ಥೆಗಳು ಪಡೆದುಕೊಂಡಿವೆ. ಇದರಲ್ಲಿ ಕಳೆದ ಜನವರಿಯಲ್ಲಿ ಸುರತ್ಕಲ್‌ನಲ್ಲಿ ಲೋನ್‌ ಆ್ಯಪ್‌ನವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಯುವಕನ ಪ್ರಕರಣದ ವರದಿಯೂ ಸೇರಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಫೋಟೋ, ಸಂದೇಶಕ್ಕೆ ಹೆದರಬೇಡಿ
ಹಲವಾರು ಲೋನ್‌ ಆ್ಯಪ್‌ಗ್ಳು ಚಾಲ್ತಿಯಲ್ಲಿವೆ. ಯಾರೂ ಅವುಗಳ ಮೂಲಕ ಸಾಲ ಪಡೆಯಬಾರದು. ಈಗಾಗಲೇ ಕಿರುಕುಳ ಅನುಭವಿಸುತ್ತಿದ್ದರೆ ಕೂಡಲೇ ಸಿಮ್‌ಕಾರ್ಡ್‌ ಬದಲಾಯಿಸಬೇಕು. ಹೊಸ ನಂಬರನ್ನು ತೀರಾ ಆಪ್ತರಿಗೆ ಮಾತ್ರ ನೀಡಬೇಕು. ದುಡುಕಿ ಅನಾಹುತ ಮಾಡಿಕೊಳ್ಳುವ ಅಗತ್ಯವಿಲ್ಲ. ಎಡಿಟ್‌ ಮಾಡಿದ ಫೊಟೊ, ಬೆದರಿಕೆಯ ಸಂದೇಶಗಳನ್ನು ನಿರ್ಲಕ್ಷಿಸಿ. ಪೊಲೀಸರಿಗೆ ಮಾಹಿತಿ ನೀಡಿದರೆ ಸೂಕ್ತ ಕಾನೂನು ಪ್ರಕ್ರಿಯೆ ನಡೆಸಲು ಅನುಕೂಲವಾಗುತ್ತದೆ. ಮಾಹಿತಿಯನ್ನು ಗೌಪ್ಯವಾಗಿಡುತ್ತೇವೆ. ಈಗಾಗಲೇ ಕೆಲವು ಆ್ಯಪ್‌ಗ್ಳನ್ನು ಸರಕಾರ ನಿಷೇಧಿಸಿದೆ.
– ಹರಿರಾಂ ಶಂಕರ್‌, ಡಿಸಿಪಿ ಮಂಗಳೂರು

ಟಾಪ್ ನ್ಯೂಸ್

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.