ಪಡಿಕಲ್ಲು: ತೋಡಿಗೆ ತಾತ್ಕಾಲಿಕ ಕಟ್ಟ ರಚನೆ

ಬೇಸಗೆಯಲ್ಲಿ ತುಂಬುತ್ತಿದೆ ನೀರ ಸೆಲೆ  ಅನೇಕ ಕುಟುಂಬಗಳಿಗೆ ಪ್ರಯೋಜನ

Team Udayavani, Jan 3, 2022, 5:14 PM IST

ಪಡಿಕಲ್ಲು: ತೋಡಿಗೆ ತಾತ್ಕಾಲಿಕ ಕಟ್ಟ ರಚನೆ

ಸುಬ್ರಹ್ಮಣ್ಯ: ಮಳೆಗಾಲದಲ್ಲಿ ಸಾಕಷ್ಟು ಮಳೆ ಸುರಿದರೂ ಬೇಸಗೆಯಲ್ಲಿ ನೀರಿಗೆ ಹಾಹಾಕಾರ ಪಡುವ ಸ್ಥಿತಿ ಹೆಚ್ಚಿನ ಕಡೆಗಳಲ್ಲಿ ಕಾಣುತ್ತೇವೆ. ಆದರೆ ಇಲ್ಲಿ ಹಾಗಲ್ಲ. ಸ್ಥಳೀಯರೇ ತೋಡಿಗೆ ತಾತ್ಕಾಲಿಕ ಕಟ್ಟ ನಿರ್ಮಿಸಿ ಬೇಸಗೆ ಇಡೀ ಕೃಷಿ ತೋಟಕ್ಕೆ ನೀರು ಹರಿಸುವ ಮಹತ್ಕಾರ್ಯವನ್ನು ಮಾಡುತ್ತಿದ್ದಾರೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಪಡಿಕಲ್ಲು ಎಂಬಲ್ಲಿ ತೋಡಿಗೆ ಸ್ಥಳೀಯರು ಸೇರಿಕೊಂಡು ಕಟ್ಟ ನಿರ್ಮಿಸಿ ನೀರನ್ನು ಸಂಗ್ರಹಿಸುವ ವ್ಯವಸ್ಥೆ ಮಾಡಿದ್ದಾರೆ. ಇಲ್ಲಿ ಸಂಗ್ರಹವಾಗುವ ನೀರು ಕಣಿವೆಗಳ ಮೂಲಕ ತೋಟಗಳಿಗೆ ಹರಿದು ಕೃಷಿ ಭೂಮಿಯನ್ನು ತಣಿಸುತ್ತದೆ. ಬೇಸಗೆ ಆರಂಭದಲ್ಲಿ ಕಟ್ಟ ನಿರ್ಮಾಣ ಕಾರ್ಯ ನಡೆಸುವ ಇಲ್ಲಿನ ಜನರು ನಿರ್ಮಾಣ ಪೂರ್ಣಗೊಂಡ ಬಳಿಕ ತೋಡಿಗೆ ಬಾಗಿನ ಅರ್ಪಿಸುತ್ತಾರೆ.

ಇಲ್ಲಿ ಸಂಗ್ರಹವಾಗುವ ನೀರು ಪಡಿಕಲ್ಲು ಮತ್ತು ಚಾಂತಾಳ ಪ್ರದೇಶದ ತೋಟಗಳಿಗೆ ನೀರು ಪೂರೈಸಲಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು. ತೋಡಿಗೆ ಅಡ್ಡಲಾಗಿ ಮಣ್ಣು, ಚರಲ್‌ ಮಣ್ಣುನ್ನು ಹಾಕಿ ಬಳಿಕ ಟಾರ್ಪಾಲ್‌ ಬಳಸಿ ನೀರನ್ನು ಸಂಗ್ರಹಿಸಲಾಗುತ್ತದೆ. ಇಲ್ಲಿ ಸಂಗ್ರಹವಾಗುವ ನೀರು ಸುಮಾರು ಇನ್ನೂರಕ್ಕೂ ಅಧಿಕ ಕುಟುಂಬಗಳಿಗೆ ಪ್ರಯೋಜನವಾಗುತ್ತಿದೆ.

ಹೂಳು ತೆರವು
ಪಡಿಕಲ್ಲುವಿನಲ್ಲಿ ತೋಡಿಗೆ ಕಟ್ಟ ನಿರ್ಮಿಸುವ ಜಾಗದಲ್ಲಿ ಸಾಕಷ್ಟು ಹೂಳು ತುಂಬಿತ್ತು. ಈ ಬಗ್ಗೆ ಯೋಜನೆ ರೂಪಿಸಿ ಕಳೆದ ವರ್ಷ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 2.80 ಲಕ್ಷ ರೂ. ಅನುದಾನದಲ್ಲಿ ಹೂಳು ತುಂಬಿ ದ್ದನ್ನು ತೆರವು ಮಾಡಲಾಯಿತು. ಬಳಿಕ ಸ್ಥಳೀಯರು ಕಟ್ಟ ಕಟ್ಟಿದ್ದಾರೆ. ಈ ವರ್ಷವೂ ಅದನ್ನು ಮುಂದುವರಿಸಿದ್ದಾರೆ.

ಮರು ಆರಂಭ
ಈ ಹಿಂದೆ ಹಿರಿಯರು ಕೃಷಿ ಮಾಡು ತ್ತಿರುವ ಸಂದರ್ಭದಲ್ಲಿ ಇದೇ ಪಡಿಕಲ್ಲು ಪ್ರದೇಶದಲ್ಲಿ ತೋಡಿಗೆ ಕಟ್ಟ ನಿರ್ಮಿಸಿ ಗದ್ದೆಗಳಿಗೆ ನೀರು ಹರಿಸುತ್ತಿದ್ದರು. ಆದರೆ 25-30 ವರ್ಷಗಳ ಹಿಂದೆ ಆ ಕೆಲಸ ನಿಂತು ಹೋಗಿತ್ತು. ಬೇಸಗೆಯಲ್ಲಿ ನೀರಿನ ಕೊರತೆ ನೀಗಲು, ಅಂತರ್ಜಲ ವೃದ್ಧಿಗೆ, ತೋಟಕ್ಕೆ ನೀರು ಹರಿಸಲು ಗ್ರಾ.ಪಂ. ಸದಸ್ಯ ಮಾಧವ ಚಾಂತಾಳ ನೇತೃತ್ವದಲ್ಲಿ ಕಟ್ಟ ಕಟ್ಟುವ ಕೆಲಸ ಮರು ಆರಂಭಿಸಲಾಗಿದೆ.

ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಆಗ್ರಹ
ಇಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವಂತೆ ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದರೂ ಪ್ರಯೋಜನವಾಗಿಲ್ಲ ಎಂಬ ದೂರು ಕೇಳಿ ಬಂದಿದೆ. ಅಣೆಕಟ್ಟು ನಿರ್ಮಾಣವಾದಲ್ಲಿ ಇಲ್ಲಿನ ನೀರಿನ ಅಭಾವ ಶಾಶ್ವತವಾಗಲಿ ನೀಗಲಿದೆ. ಹೀಗಾಗಿ ಶೀಘ್ರ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮಳೆ ಪ್ರಾರಂಭವಾದ ಬಳಿಕ ಬೇಸಗೆಯಲ್ಲಿ ನಿರ್ಮಿಸಿದ ಕಟ್ಟ ಒಡೆದು ಹೋಗುತ್ತದೆ. ಬಳಿಕ ಮುಂದಿನ ವರ್ಷ ಬೇರೆಯೆ ಕಟ್ಟ ನಿರ್ಮಿಸಬೇಕಾಗುತ್ತದೆ. ಸರಕಾರಕ್ಕೆ ಈ ಬಗ್ಗೆ ಹಲವು ಬಾರಿ ಸ್ಥಳೀಯರು ಮನವಿ ಕೂಡ ಸಲ್ಲಿಸಿದ್ದಾರೆ.

ಅಂತರ್ಜಲ ವೃದ್ಧಿ
ಮೊದಲು ಇಲ್ಲಿನ ಬಾವಿ, ಕೆರೆಗಳಲ್ಲಿ ಬೇಸಗೆಯಲ್ಲಿ ನೀರು ಬತ್ತಿ ಹೋಗುತ್ತಿತ್ತು. ಆದರೆ ಪಡಿಕಲ್ಲುವಿನಲ್ಲಿ ಇಲ್ಲಿ ಕಟ್ಟ ನಿರ್ಮಿಸಿ ನೀರು ಸಂಗ್ರಹಿಸಲು ಆರಂಭಿಸಿದ ಬಳಿಕ ತೋಟಕ್ಕೆ ನೀರು ಪೊರೈಕೆ ಆಗುವ ಜತೆಗೆ ಕೆರೆ, ಬಾವಿಗಳಲ್ಲಿ ಬೇಸಗೆಯಲ್ಲಿ ನೀರು ತುಂಬಿರುತ್ತದೆ ಎನ್ನುತ್ತಾರೆ ಗ್ರಾಮಸ್ಥರು. ಅಲ್ಲದೇ ಈ ಭಾಗದ ಪರಿಸರ ಬಿಸಿಲಿನ ಬೇಗೆಯ ನಡುವೆಯೂ ತಂಪಾಗಿರುತ್ತದೆ.

ಮನವಿ ಸಲ್ಲಿಕೆ
ಎರಡು ವರ್ಷಗಳಿಂದ ಇಲ್ಲಿನ ತೋಟಗಳಿಗೆ ಸ್ಥಳೀಯರೇ ಸೇರಿಕೊಂಡು ಕಟ್ಟ ನಿರ್ಮಿಸಿ ನೀರು ಹರಿಸುತ್ತಿದ್ದೇವೆ. ಇಲ್ಲಿ ಸರಕಾರದ ಅನುದಾನದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದಲ್ಲಿ ಬಹಳಷ್ಟು ಪ್ರಯೋಜನವಾಗಲಿದೆ. ಈ ಬಗ್ಗೆ ಮನವಿ ಕೂಡ ಸಲ್ಲಿಸಲಾಗಿದೆ.
-ಮಾಧವ ಚಾಂತಾಳ,
ಕೊಲ್ಲಮೊಗ್ರು ಗ್ರಾ.ಪಂ. ಸದಸ್ಯರು

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Bantwal: ಬಾವಿಗೆ ಬಿದ್ದ ಮಗು; ರಕ್ಷಿಸಿದ ಯುವಕ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.