ಎಲ್ಲ ಗ್ರಾ.ಪಂ.ಗಳಿಗೆ 1 ಕೋಟಿ ರೂ. ಅನುದಾನ: ನಳಿನ್‌

ಆಲಂಕಾರು ಗ್ರಾ.ಪಂ.ನಲ್ಲಿ ಸಾರ್ವಜನಿಕ ಸಭೆ, ಅಹವಾಲು ಸ್ವೀಕಾರ

Team Udayavani, Aug 20, 2019, 5:03 AM IST

w-27

ಆಲಂಕಾರು: ಹದಿನಾಲ್ಕನೇ ಹಣಕಾಸು ಯೋಜನೆಯಡಿ ಕೇಂದ್ರ ಸರಕಾರದಿಂದ ಪ್ರತಿ ಗ್ರಾಮ ಪಂಚಾಯತ್‌ಗಳಿಗೆ 1 ಕೋಟಿ ರೂ. ಅನುದಾನ ನೇರವಾಗಿ ದೊರೆಯಲಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳೀನ್‌ ಕುಮಾರ್‌ ಕಟೀಲು ಹೇಳಿದರು.

ಆಲಂಕಾರು ಗ್ರಾ.ಪಂ. ಸಭಾ ಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ ಕಾರ್ಯಕರ್ತರ ಸಭೆಯಲ್ಲಿ ಅಹವಾಲು ಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಸಂಸದರಿಗೆ ರಸ್ತೆಗಳ ಅಭಿವೃದ್ಧಿಯ ಯಾವುದೇ ಅಧಿಕಾರ ಇರುವುದಿಲ್ಲ. ಕಾನೂನು – ಸುವ್ಯವಸ್ಥೆ ಕಾಪಾಡುವುದು ಅವರ ಕರ್ತವ್ಯವಾಗಿರುತ್ತದೆ. ಇಂದು ರಸ್ತೆ ದುರಸ್ತಿಗೆ ಸಂಬಂಧಿಸಿ ಸಾರ್ವಜನಿಕರಿಂದ ಅತಿ ಹೆಚ್ಚು ಬೇಡಿಕೆಗಳು ಬಂದಿವೆ. ಗ್ರಾಮ ಸಡಕ್‌ ಯೋಜನೆ 10 ವರ್ಷಗಳಿಂದ ರಾಜ್ಯದಲ್ಲಿ ಇರಲಿಲ್ಲ. ಈ ವರ್ಷ ಆರಂಭಿಸ ಲಾಗಿದೆ. ಸರ್ವೆ ಕಾರ್ಯ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದ ಸರಕಾರ ಆಡಳಿತದಲ್ಲಿದ್ದು, ಕ್ಷೇತ್ರದ ಸಾರ್ವಜನಿಕ ರಸ್ತೆಗಳ ಬೇಡಿಕೆಗಳನ್ನು ಶಾಸಕರ ಮೂಲಕ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

ಹಲವು ಬೇಡಿಕೆಗಳು
ಐದು ಗ್ರಾಮಗಳನ್ನು ಸಂಪರ್ಕಿಸುವ ಕುಂತೂರು ಪದವು, ಇಡಾಳ ಕುಂಟ್ಯಾನ, ಆಲಂಕಾರು ಗ್ರಾಮದ ಪಜ್ಜಡ್ಕ, ಕಕ್ವೆ ಹಾಗೂ ಗೋಳಿತ್ತಡಿ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್‌ ಯೋಜನೆಯಡಿ ನೂತನವಾಗಿ ನಿರ್ಮಿಸಿ ಅಭಿವೃದ್ಧಿ ಪಡಿಸಬೇಕು. ಆಲಂಕಾರು ಗ್ರಾಮದಲ್ಲಿ ಉದ್ದೇಶಿತ 110 ಕೆವಿ ಸಬ್‌ಸ್ಟೇಶನ್‌ ಅನ್ನು ಶೀಘ್ರವೇ ಅನುಷ್ಠಾನ ಮಾಡಬೇಕು. ಶರವೂರು ದುರ್ಗಾಪರಮೇಶ್ವರೀ ದೇವಾಲಯವನ್ನು ನವೀಕರಿಸಿ ಬ್ರಹ್ಮಕಲಶೋತ್ಸವವು ತಮ್ಮ ಮುಂದಾಳತ್ವದಲ್ಲಿ ನಡೆಯಬೇಕು. ಶತಮಾನೋತ್ಸವ ಸಂಭ್ರಮದಲ್ಲಿರುವ ಆಲಂಕಾರು ಸರಕಾರಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಸಾರ್ವಜನಿಕರ ಪರವಾಗಿ ಪೂವಪ್ಪ ನಾಯ್ಕ ಎಸ್‌. ಸಂಸದರಲ್ಲಿ ಬೇಡಿಕೆಯನ್ನು ಸಲ್ಲಿಸಿದರು.

ಆಲಂಕಾರಿನಲ್ಲಿ ನಿರ್ಮಿಸಲು ಉದ್ದೇಶಿಸಿ ರುವ 110 ಕೆವಿ ಸಬ್‌ಸ್ಟೇಶನ್‌ನ ಬಗ್ಗೆ ಶೀಘ್ರವೇ ಮೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಶರವೂರು ದೇವಸ್ಥಾನ ಹಾಗೂ ಶಾಲೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸ್ವಲ್ಪ ಹೆಚ್ಚು ಅನುದಾನ ನೀಡುತ್ತೇನೆ ಎಂದರು.

ಮರಳು ಸಮಸ್ಯೆ ಶೀಘ್ರ ಪರಿಹಾರ
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಸಾಕಷ್ಟು ಕಾಡುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಶೇಷಪತಿ ರೈ ಗುತ್ತುಪಾಲು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ನಳಿನ್‌, ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆಯನ್ನು ಆದಷ್ಟು ಬೇಗ ನಿವಾರಿಸಲು ಕಟಿಬದ್ಧನಾಗಿದ್ದು, ಜಿಲ್ಲೆಯ ನೂತನ ಉಸ್ತುವಾರಿ ಸಚಿವರ ಮೂಲಕ ಕ್ರಮ ಕೈಗೊಂಡು ಎಲ್ಲರಿಗೂ ಕೈಗೆಟಕುವ ದರದಲ್ಲಿ ಮರಳು ಸಿಗುವಂತೆ ಮಾಡುತ್ತೇನೆ ಎಂದು ಭರವಸೆಯಿತ್ತರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.