ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದಿಂದ 114.60 ಲಕ್ಷ ರೂ.: ರಾಜೇಶ್ ನಾೖಕ್
Team Udayavani, Jul 7, 2019, 5:00 AM IST
ಬಂಟ್ವಾಳ: ಕರ್ನಾಟಕ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ 192 ಫಲಾನುಭವಿಗಳಿಗೆ 114.60 ಲಕ್ಷ ರೂ. ಸಹಾಯಧನ ಬಿಡುಗಡೆಯಾಗಿದೆ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ತಿಳಿಸಿದರು.
ಅವರು ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಶ್ರಮಶಕ್ತಿ ಯೋಜನೆಯಲ್ಲಿ ಬಿಡುಗಡೆಯಾದ 74 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.
ಶ್ರಮಶಕ್ತಿ ಯೋಜನೆಯಲ್ಲಿ 74 ಮಂದಿ ಫಲಾನುಭವಿಗಳಿಗೆ 19.50 ಲಕ್ಷ ರೂ., ಸ್ವಯಂ ಉದ್ಯೋಗದಡಿ 20 ಮಂದಿ ಫಲಾನುಭವಿಗಳಿಗೆ 24.50 ಲಕ್ಷ ರೂ., 66 ಮಂದಿ ಫಲಾನುಭವಿಗಳಿಗೆ 6.60 ಲಕ್ಷ ರೂ. ಕಿರುಸಾಲ ಹಾಗೂ ಗಂಗಾಕಲ್ಯಾಣದಡಿ 32 ಮಂದಿ ಫಲಾನುಭವಿಗಳಿಗೆ 64 ಲಕ್ಷ ರೂ.ಮಂಜೂರಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಕಮಾಲಾಕ್ಷಿ ಪೂಜಾರಿ ಉಪಸ್ಥಿತರಿದ್ದರು. ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ಸಫ್ವಾನ್ ಸ್ವಾಗತಿಸಿ, ವಂದಿಸಿದರು.
ಸರಕಾರದ ಸವಲತ್ತು, ಯೋಜನೆಗಳ ಮಾಹಿತಿ
ಕ್ಷೇತ್ರದ ಜನತೆಯ ಯಾವುದೇ ಮಾಹಿತಿಗಾಗಿ ಶಾಸಕರ ಕಚೇರಿ ಸದಾ ತೆರೆದಿದ್ದು, ಸರಕಾರದ ಸವಲತ್ತು, ಯೋಜನೆಗಳ ಕುರಿತ ಅಗತ್ಯ ಮಾಹಿತಿ ನೀಡಲಾಗುತ್ತದೆ. ಕೇಂದ್ರ ಸರಕಾರವು ಈ ಬಾರಿ ಬಜೆಟ್ನಲ್ಲಿ ಮಹಿಳೆಯರಿಗೆ ಸಣ್ಣಪುಟ್ಟ ಉದ್ಯಮ ನಡೆಸುವುದಕ್ಕೆ 1 ಲಕ್ಷ ರೂ.ವರೆಗೆ ಮುದ್ರಾ ಯೋಜನೆ ಸಾಲ, ಜತೆಗೆ ಜನಧನ ಖಾತೆಗೆ 5 ಸಾವಿರ ರೂ. ಒಡಿ ನೀಡುವ ಸೌಲಭ್ಯ ಪ್ರಕಟಿಸಿದೆ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ