ಬೆಳ್ತಂಗಡಿ ಏತ ನೀರಾವರಿಗೆ  240 ಕೋ.ರೂ.


Team Udayavani, Jul 16, 2021, 6:45 AM IST

ಬೆಳ್ತಂಗಡಿ ಏತ ನೀರಾವರಿಗೆ  240 ಕೋ.ರೂ.

ಬೆಳ್ತಂಗಡಿ: ಬಂದಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೊಗ್ರು-ಮುಗೈರಡ್ಕದಲ್ಲಿ ಬೃಹತ್‌ ಸೇತುವೆ ಸಹಿತ ಏತ ನೀರಾವರಿ ಯೋಜನೆ ಕಾರ್ಯಗತಗೊಳ್ಳಲಿದೆ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 240 ಕೋಟಿ ರೂ. ಅನುದಾನ ಘೋಷಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಬೃಹತ್‌ ಕೊಡುಗೆ ನೀಡಿದ್ದಾರೆ.

ಮೊಗ್ರು-ಮುಗೈರಡ್ಕ ತೂಗುಸೇತುವೆ 2019ರ ಆಗಸ್ಟ್ ನಲ್ಲಿ ಪ್ರವಾಹಕ್ಕೆ ಕೊಚ್ಚಿಹೋಗಿತ್ತು. ಎರಡು ಊರುಗಳ ಸಂಪರ್ಕ ಕಡಿತಗೊಂಡು ಮೂರು ವರ್ಷ ಸಮೀಪಿಸುತ್ತಿದೆ. ಅಲ್ಲಿ ಶಾಶ್ವತ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆ ಸ್ಥಳೀಯರಿಂದ ಕೇಳಿಬಂದಿತ್ತು. ಸೇತುವೆ ಜತೆಗೆ ಊರಿನ ಅಭಿವೃದ್ಧಿಗೆ ಶಾಶ್ವತ ಕೊಡುಗೆ ನೀಡಬೇಕೆಂಬುದು ಶಾಸಕ ಹರೀಶ್‌ ಪೂಂಜ ಅವರ ಚಿಂತನೆಯಾಗಿತ್ತು. 2019ರ ಪ್ರವಾಹಕ್ಕೆ ಮುನ್ನ ದ.ಕ. ಜಿಲ್ಲೆ ಸಹಿತ ಬೆಳ್ತಂಗಡಿ ತಾಲೂಕು ಬರಗಾಲಕ್ಕೆ ತುತ್ತಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೃಷಿಕರಿಗೆ ಬೇಸಗೆಯಲ್ಲಿ ನೀರಿನ ಅಭಾವ ತಪ್ಪಿಸಲು ಹಾಗೂ ನೇತ್ರವತಿ ನದಿಗೆ ಏತ ನೀರಾವರಿ ಯೋಜನೆ ಅನುಷ್ಠಾನದ ವಿಚಾರವಾಗಿ ಶಾಸಕರು ಸರಕಾರದೊಂದಿಗೆ ಚರ್ಚಿಸಿದ್ದರು. ಅದರಂತೆ 2020ರ ಜೂನ್‌ನಲ್ಲಿ ಡಿಪಿಆರ್‌ ನಡೆಸಲು 40 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್‌ ಕರೆದು ಸರಕಾರಕ್ಕೆ ವರದಿ ಸಲ್ಲಿಸಲಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯೋಜನೆಗೆ ಹಸುರು ನಿಶಾನೆ ತೋರಿ 240 ಕೋ.ರೂ. ಬೃಹತ್‌ ಅನುದಾನ ಘೋಷಿಸುವ ಮೂಲಕ ಬೃಹತ್‌ ನೀರಾವರಿ ಇಲಾಖೆಯಡಿ ದ.ಕ. ಜಿಲ್ಲೆಗೆ “ಬೆಳ್ತಂಗಡಿ ಏತ ನೀರಾವರಿ’ ಮೂಲಕ ಅನುದಾನ ಲಭ್ಯವಾಗಿದೆ.

10ಕ್ಕೂ ಹೆಚ್ಚು ಗ್ರಾಮಕ್ಕೆ ಪ್ರಯೋಜನ:

ನೇತ್ರಾವತಿ ಅಂಚಿನಲ್ಲಿರುವ ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಜನತೆಗೆ ಅನುಕೂಲವಾಗಲಿದೆ. ಏತನೀರಾವರಿಯಿಂದ ಪ್ರಮುಖವಾಗಿ ಬಂದಾರು, ಇಳಂತಿಲ, ಮೊಗ್ರು, ಮುಗೈರಡ್ಕ, ಕಣಿಯೂರು, ಉರುವಾಲು, ಕಳಿಯ, ನ್ಯಾಯತರ್ಪು, ಕುವೆಟ್ಟು, ಓಡಿಲ್ನಾಳ ಸೇರಿದಂತೆ ಸುತ್ತಮುತ್ತ ಗ್ರಾಮಗಳ ಕೃಷಿಕರಿಗೆ ಬೇಸಗೆಯಲ್ಲೂ ನೀರು ಲಭ್ಯವಾಗಲಿದೆ.

ಜತೆಗೆ ಅಂತರ್ಜಲ ವೃದ್ಧಿಗೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಿಹಿ ಹಂಚಿ ಸಂಭ್ರಮ ದ.ಕ. ಜಿಲ್ಲೆಯ ಇತಿಹಾಸದಲ್ಲೇ ದೊಡ್ಡ  ನೀರಾವರಿ ಯೋಜನೆ ಮೊಗ್ರು ಗ್ರಾಮದ ಮುಗೈರಡ್ಕಕ್ಕೆ ಬಂದ ಖುಷಿಯಲ್ಲಿ ಕಾರ್ಯ ಕರ್ತರು, ಗ್ರಾಮಸ್ಥರು ಸೇರಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

ಏತ ನೀರಾವರಿ ಪ್ರಯೋಜನ :

ತುಂಗಭದ್ರಾ ನದಿ ಮೂಲಕ ನೀರನ್ನೆತ್ತಿ ಕೆರೆ ಹಾಗೂ ಚೆಕ್‌ ಡ್ಯಾಂಗಳನ್ನು ತುಂಬಿಸಿ, ಕೃಷಿ ಹಾಗೂ ಕುಡಿಯುವ ನೀರು ಒದಗಿಸಿದಂತೆ ದ.ಕ. ಜಿಲ್ಲೆಯಲ್ಲಿ ಮೊಟ್ಟಮೊದಲ ಬೃಹತ್‌ ಯೋಜನೆಯೊಂದು ಅನುಷ್ಠಾನಗೊಳ್ಳಲಿದೆ. ಇದು ನೇತ್ರಾವತಿ ಅಂಚಿನಲ್ಲಿರುವ ಕೃಷಿ ಸೇರಿದಂತೆ ಅಂತರ್ಜಲ ವೃದ್ಧಿಗೆ ಬಹುದೊಡ್ಡ ಕೊಡುಗೆಯಾಗಲಿದೆ. ವರ್ಷದ 365 ದಿನವೂ ನೀರು ಲಭ್ಯವಾಗಲಿದೆ.

ದ.ಕ. ಜಿಲ್ಲೆಗೆ ನೀರಾವರಿ ಯೋಜನೆಯ ಬೇಡಿಕೆಯಂತೆ ಸಂಸದ ನಳಿನ್‌ ಕುಮಾರ್‌ಕಟೀಲು ಅವರ ಎತ್ತಿನ ಹೊಳೆಯ ಹೋರಾಟದ ಫಲವಾಗಿ, ಪಶ್ಚಿಮ ವಾಹಿನಿ ಯೋಜನೆಯಡಿ 4,000 ಕೋ.ರೂ. ಅನುದಾನ, ಇದೀಗ ಬೃಹತ್‌ ನೀರಾವರಿ ಇಲಾಖೆಯಡಿ ನೇತ್ರಾವತಿ ನದಿಗೆ ಬೆಳ್ತಂಗಡಿ ಏತನೀರಾವರಿ ಯೋಜನೆಗೆ 240 ಕೋ.ರೂ. ಘೋಷಿಸುವ ಮೂಲಕ ದ.ಕ. ಜಿಲ್ಲೆಯನ್ನು ಸಮೃದ್ಧ ನೀರಾವರಿಯಾಗಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕೊಡುಗೆ ಆವಿಸ್ಮರಣೀಯ.– ಹರೀಶ್‌ ಪೂಂಜ,  ಬೆಳ್ತಂಗಡಿ ಶಾಸಕರು

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.