ಅನಧಿಕೃತ ಸಾಗುವಳಿ ಸಕ್ರಮಕ್ಕೆ ನಮೂನೆ-57 3 ತಾಲೂಕುಗಳಲ್ಲಿ 282 ಅರ್ಜಿ ವಿಲೇವಾರಿ


Team Udayavani, Jun 25, 2021, 4:50 AM IST

ಅನಧಿಕೃತ ಸಾಗುವಳಿ ಸಕ್ರಮಕ್ಕೆ ನಮೂನೆ-57 3 ತಾಲೂಕುಗಳಲ್ಲಿ 282 ಅರ್ಜಿ ವಿಲೇವಾರಿ

ಪುತ್ತೂರು: ಅನಧಿಕೃತ ಸಾಗುವಳಿ ಸಕ್ರಮಕ್ಕೆ ನಮೂನೆ -57ರಲ್ಲಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿದ್ದು ಮೂರು ತಾಲೂಕಿನಲ್ಲಿ ( ಪುತ್ತೂರು, ಸುಳ್ಯ, ಕಡ ಬ) ಕೇವಲ 282 ಅರ್ಜಿಗಳಷ್ಟೇ ವಿಲೇವಾರಿಯಾಗಿದೆ.

ಅರ್ಜಿ ಸ್ವೀಕಾರ ಅವಧಿ ಮುಗಿದು ಎರಡು ವರ್ಷ ಕಳೆದಿದ್ದು ಮೂರು ತಾಲೂಕಿ ನಲ್ಲಿ 70 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗಿದ್ದರೂ ವಿಲೇವಾರಿ ಮಾತ್ರ ನಿರೀಕ್ಷಿತವಾಗಿ ಸಾಗಿಲ್ಲ ಅನ್ನುತ್ತಿದೆ ಮೂರು ತಾಲೂಕಿನ ಅಂಕಿ ಅಂಶಗಳ ವಿವರ.

ಅರ್ಜಿ ಗರಿಷ್ಠ : ವಿಲೇವಾರಿ ಕನಿಷ್ಠ:

ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ 2.34 ಲಕ್ಷ ಎಕ್ರೆ ಅನಧಿಕೃತ ಸಾಗುವಳಿ ಸಕ್ರಮಕ್ಕೆ 1,26,576 ಅರ್ಜಿ ಸಲ್ಲಿಕೆಯಾಗಿವೆ. ದ.ಕ. ಜಿಲ್ಲೆಯಲ್ಲಿ 1,58,816.89 ಎಕ್ರೆ ಸಾಗುವಳಿ ಸಕ್ರಮಕ್ಕೆ 88,549 ಅರ್ಜಿ ಮತ್ತು ಉಡುಪಿ ಜಿಲ್ಲೆಯಲ್ಲಿ 76,013.36 ಎಕ್ರೆ ಸಕ್ರಮಕ್ಕೆ 38,027 ಅರ್ಜಿ ಸಲ್ಲಿಸಲಾಗಿದೆ.

ಪುತ್ತೂರು ಉಪ ವಿಭಾಗ ವ್ಯಾಪ್ತಿಯ ತಾಲೂಕಿನಲ್ಲಿ ಗರಿಷ್ಠ  ಅರ್ಜಿ ಸಲ್ಲಿಕೆಯಾಗಿದ್ದು  ಆದರೆ ಕನಿಷ್ಠ ಸಂಖ್ಯೆಯಲ್ಲಿ ವಿಲೇವಾರಿ ಆಗಿದೆ. ಕಂದಾಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಪುತ್ತೂರಿನಲ್ಲಿ 132, ಸುಳ್ಯದಲ್ಲಿ 86, ಕಡಬದಲ್ಲಿ 64 ಅರ್ಜಿಗಳು ವಿಲೇವಾರಿ ಆಗಿದೆ. ಕೆಲವು ಅರ್ಜಿಗಳು ಭೂ ಸರ್ವೇ ಹಂತದಲ್ಲಿದ್ದರೆ, ಹೆಚ್ಚಿನ ಅರ್ಜಿಗಳು ವಿಲೇವಾರಿಗೆ ಸಿದ್ಧಗೊಂಡಿಲ್ಲ. ಅಂದರೆ ಭೂ ಸರ್ವೇಯೇ ಆಗಿಲ್ಲ ಅನ್ನುತ್ತಿದೆ ಸದ್ಯದ ಚಿತ್ರಣ.

ಅಕ್ರಮ-ಸಕ್ರಮ ಸಮಿತಿ:

ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಸಂಬಂಧಿಸಿ ಶಾಸಕರ ಅಧ್ಯಕ್ಷತೆಯಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಅರ್ಜಿ ವಿಲೇವಾರಿಗೊಳಿಸುವ ಅಧಿಕಾರ ಹೊಂದಿದೆ. ಈಗಾಗಲೇ ಕೆಲವು ತಿಂಗಳ ಹಿಂದೆಯಷ್ಟೇ ಸಮಿತಿ ರಚನೆಗೊಂಡು ವಿಲೇವಾರಿ ಕಾರ್ಯ ಪ್ರಾರಂಭಗೊಂಡಿದೆ. ಆದರೆ ಅರ್ಜಿ ಸ್ವೀಕಾರಗೊಂಡ ಮೂರು ವರ್ಷಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ವಿಲೇವಾರಿ ಪ್ರಗತಿ ದಾಖಲಾಗಿಲ್ಲ. ಅಧಿಕಾರಿಗಳು ನೀಡುವ ಮಾಹಿತಿ ಪ್ರಕಾರ ಕೊರೊನಾ ಲಾಕ್‌ಡೌನ್‌ ಕಾರಣದಿಂದ ಭೂ ಸರ್ವೇ, ಸಮಿತಿ ಸಭೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ವಿಳಂಬವಾಗಿದೆ ಎನ್ನುವ ಉತ್ತರ ದೊರೆತಿದೆ.

ಅಕ್ರಮ-ಸಕ್ರಮ ಸಮಿತಿ:

ಜನರು ಸಲ್ಲಿಸಿದ ಅರ್ಜಿಯನ್ನು ಗ್ರಾಮ ಕರಣಿಕರು, ಕಂದಾಯ ನಿರೀಕ್ಷಕರು ಪರಿಶೀಲಿಸಿ ಬಳಿಕ ತಹಶೀಲ್ದಾರ್‌ಗೆ ಕಳುಹಿಸುತ್ತಾರೆ. ಅವರು ಶಿಪಾರಸು ಮಾಡಿ ಅಕ್ರಮ-ಸಕ್ರಮ ಸಮಿತಿಯ ಮುಂದಿಡುತ್ತಾರೆ. ಅಲ್ಲಿ ಸಮಿತಿ ಅಧ್ಯಕ್ಷರು ಮಂಜೂರಾತಿ ಬರೆಯುತ್ತಾರೆ. ಉಳಿದ ಸದಸ್ಯರು ಸಹಿ ಮಾಡುತ್ತಾರೆ. ಮಂಜೂ ರಾತಿ ಹಂತದಲ್ಲಿ ಅರ್ಜಿ ನಿಯಮ ಬಾಹಿರ ಎಂದು ಖಾತರಿಯಾದರೆ ಅದನ್ನು ತಿರಸ್ಕರಿಸುವ ಅಧಿಕಾರ ತಾಲೂಕು ದಂಡಾಧಿಕಾರಿಗಳಿಗೆ ಇದೆ.

ಏನಿದು ಯೋಜನೆ? :1964ರ ಕಲಂ 94ಎ (4)ಗೆ 2018ರ ಮಾ.17 ರಂದು ತಿದ್ದುಪಡಿ ತಂದು 2018ರ ಅ.25ರಂದು ಮಾರ್ಗಸೂಚಿ ಪ್ರಕಟಿಸಲಾಗಿತ್ತು. 2019 ರ ಮಾ. 16ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆ ದಿನ ನಿಗದಿಪಡಿಸಿ ಸುತ್ತೋಲೆ ಹೊರಡಿಸಲಾಗಿತ್ತು. 1964ರ ಕರ್ನಾಟಕ ಭೂ ಕಂದಾಯ ಕಾಯ್ದೆಗೆ 1991ರಲ್ಲಿ ತಿದ್ದುಪಡಿ ತಂದು ನಮೂನೆ-50ರಲ್ಲಿ ಆರು ತಿಂಗಳ ಕಾಲ ಅರ್ಜಿ ಸ್ವೀಕಾರ ನಡೆದಿತ್ತು. 1998ರ ನ. 1ರಿಂದ 1999ರ ಎ. 30ರ ವರೆಗೆ ನಮೂನೆ-53ರಲ್ಲಿ ಮತ್ತು 2018ರ ನವೆಂಬರ್‌ನಿಂದ ನಮೂನೆ -57ರಲ್ಲಿ ಅರ್ಜಿ ಸ್ವೀಕರಿಸಲಾಗಿತ್ತು. ಇಲ್ಲಿಯ ತನಕ 50, 53, 57 ನಮೂನೆಗಳಲ್ಲಿ ಮೂರು ಅವಧಿಯಲ್ಲಿ ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಸರಕಾರ ಅವಕಾಶ ನೀಡಿತ್ತು.

ತಾಲೂಕಿನಲ್ಲಿ 132 ಅರ್ಜಿ ವಿಲೇವಾರಿ ಆಗಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಜು.5 ಕ್ಕೆ ಅಕ್ರಮ-ಸಕ್ರಮ ಬೈಠೆಕ್‌ ನಡೆಸಲು ನಿರ್ಧರಿಸಲಾಗಿದೆ. ಕೋವಿಡ್‌ ಕಾರಣದಿಂದ ಎರಡು ತಿಂಗಳ ಕಾಲ ಸಮಿತಿ ಸಭೆ ನಡೆದಿಲ್ಲ. ಅತ್ಯಂತ ಪಾರದರ್ಶಕ ರೀತಿಯಲ್ಲಿ ಅರ್ಜಿ ವಿಲೇ ಕಾರ್ಯ ನಡೆಯುತ್ತಿದೆ. ರಮೇಶ್‌ ಬಾಬು, ತಹಶೀಲ್ದಾರ್‌, ಪುತ್ತೂರು

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.