ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಎಎನ್‌ಎಫ್‌ ಶೋಧ; ಎಸ್‌ಪಿ, ಎಎನ್‌ಎಫ್‌ ಡಿವೈಎಸ್‌ಪಿ ಭೇಟಿ

Team Udayavani, Mar 19, 2024, 6:15 AM IST

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಸುಳ್ಯ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಪುಷ್ಪಗಿರಿ ತಪ್ಪಲಿನ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣೆ ವ್ಯಾಪ್ತಿಯ ಕೂಜಿಮಲೆ ಎಸ್ಟೇಟ್‌ಗೆ ಶನಿವಾರ ಸಂಜೆ ಭೇಟಿ ನೀಡಿದ್ದು ನಕ್ಸಲರು ಎಂಬುದು ಖಚಿತಗೊಂಡಿದೆ.

ಈ ಹಿನ್ನೆಲೆಯಲ್ಲಿ ಆ ಪ್ರದೇಶದ ಮೂರು ಕಡೆಗಳಲ್ಲಿ ಕಾರ್ಕಳದಿಂದ ಆಗಮಿಸಿದ ನಕ್ಸಲ್‌ ನಿಗ್ರಹದಳ (ಎಎನ್‌ಎಫ್‌) ಸೋಮವಾರ ಶೋಧ ಆರಂಭಿ ಸಿದೆ. ಜತೆಗೆ ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗವಾಗಿರುವ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ತಾಲೂಕಿನ ಕೂಜಿಮಲೆ ಎಸ್ಟೇಟ್‌ (ಖಾಸಗಿ ಸಂಸ್ಥೆ) ಪ್ರದೇಶದ ರಾಮಲಿಂಗ ಅವರ ಅಂಗಡಿಗೆ ಶನಿವಾರ ಭೇಟಿ ನೀಡಿದ ಇಬ್ಬರು ಪುರುಷರು, ಇಬ್ಬರು ಮಹಿಳೆಯರಿದ್ದ ತಂಡ ಅಂಗಡಿಯಿಂದ 25 ಕೆ.ಜಿ. ಅಕ್ಕಿ, ಬಟಾಣಿ, ಸಕ್ಕರೆ, ಬೇಳೆ, ಕಡಲೆ, ಸಜ್ಜಿಗೆ, ಬೇಕರಿ ತಿಂಡಿ ಮತ್ತಿತರ ದಿನಸಿ ಖರೀದಿಸಿ ಅದರ ಮೊತ್ತ 3,500 ರೂ.ಗಳನ್ನು ಪಾವತಿಸಿ ತೆರಳಿತ್ತು.

ಅರಣ್ಯ ಇಲಾಖೆ ಸಿಬಂದಿ ಎಂದು ಪರಿಚಯಿಸಿ ಕೊಂಡಿದ್ದ ನಾಲ್ವರ ಬಳಿಯೂ ಬಂದೂಕು ಇದ್ದಿದ್ದು, ಅರಣ್ಯ ಇಲಾಖೆಯ ಸಿಬಂದಿ ಧರಿಸುವ ವಸ್ತ್ರಗಳನ್ನು ಧರಿಸಿದ್ದರು. ಸಾಮಗ್ರಿ ಖರೀದಿಸಿದ ತಂಡ ಅಲ್ಲಿಂದ ಅರಣ್ಯ ಇಲಾಖೆಯ ಕಚೇರಿಯ ಬಳಿ ತೆರಳಿತ್ತು.

ಬೆಳಕಿಗೆ ಬಂತು
ಶನಿವಾರ ಸಂಜೆ ಘಟನೆ ನಡೆದಿದ್ದರೂ ಅಂಗಡಿಗೆ ಬಂದವರು ಅರಣ್ಯ ಇಲಾಖೆಯ ಸಿಬಂದಿ ಎಂದೇ ನಂಬಲಾಗಿತ್ತು. ಸಾಮಾನ್ಯವಾಗಿ ಅಂಗಡಿ ಯಿಂದ ಅರಣ್ಯ ಇಲಾಖೆಯವರು ಸಾಮಗ್ರಿ ಖರೀ ದಿಸು ತ್ತಿದ್ದರು. ರವಿವಾರ ಸಂಜೆ ವೇಳೆ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಅಂಗಡಿಗೆ ಬಂದ ವೇಳೆ ಅಂಗಡಿಯವರು ನಿನ್ನೆ ಸಂಜೆ ನಿಮ್ಮವರು ತುಂಬಾ ಸಾಮಗ್ರಿ ಖರೀದಿಸಿ ಒಯ್ದಿದ್ದಾರೆ ಎಂದು ತಿಳಿಸಿದರು. ಆಗ ಅನುಮಾನ ಮೂಡಿ ಅರಣ್ಯ ಸಿಬಂದಿ ಮೇಲಧಿ ಕಾರಿಗಳಿಗೆ ಮಾಹಿತಿ ನೀಡಿದ್ದರು. ತನಿಖೆ ವೇಳೆ ನಕ್ಸಲರೆಂಬುದು ಖಚಿತಗೊಂಡಿದೆ. ರವಿವಾರ ರಾತ್ರಿಯೇ ಕೂಜಿಮಲೆಗೆ ಪೊಲೀಸರು ಭೇಟಿ ನೀಡಿದ್ದಾರೆ.

8 ಜನರಿದ್ದೇವೆ ಎಂದಿದ್ದರು
ಅಂಗಡಿಗೆ ಬಂದವರು, “ನಮ್ಮ ಇನ್ನೂ ನಾಲ್ವರು ಸಹೋದ್ಯೋಗಿಗಳು ಫಾರೆಸ್ಟ್‌ ರೂಂನಲ್ಲಿದ್ದಾರೆ’ ಎಂದಿದ್ದರು. ಕನ್ನಡದಲ್ಲಿ ಮಾತನಾಡಿದ್ದ ಅವರು ಎಸ್ಟೇಟ್‌ನ ಸಿಬಂದಿ ಹಿಂದಿ ಭಾಷಿಕನೊಬ್ಬನಲ್ಲಿ ಮಲಯಾಳದಲ್ಲಿ ಮಾತನಾಡಿದ್ದರು ಎನ್ನಲಾಗಿದೆ. ಆದರೆ ಅಂಗಡಿಗೆ ಬಂದ ನಾಲ್ವರನ್ನು ಹೊರತು ಪಡಿಸಿ ಉಳಿದ ನಾಲ್ವರನ್ನು ಯಾರೂ ಕಂಡಿಲ್ಲ. ಹೀಗಾಗಿ ಅಲ್ಲಿಗೆ ಒಟ್ಟು 8 ಜನ ಬಂದಿದ್ದಾರೆಯೇ ಅಥವಾ ಸುಮ್ಮನೆ ಹೇಳಿದ್ದಾರೆಯೇ ಎಂಬುದು ಖಚಿತಗೊಂಡಿಲ್ಲ.

ಎಎನ್‌ಎಫ್‌ ಶೋಧ
ಕೂಜಿಮಲೆಗೆ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕಾರ್ಕಳದ ನಕ್ಸಲ್‌ ನಿಗ್ರಹ ದಳದ 60 ಸಿಬಂದಿ ಕೂಜಿಮಲೆಗೆ ಆಗಮಿಸಿದ್ದಾರೆ. ಕೂಜಿಮಲೆ ಎಸ್ಟೇಟ್‌ ಭಾಗದಿಂದ ನಕ್ಸಲರು ತೆರಳಿದ ಭಾಗದತ್ತ ಎಎನ್‌ಎಫ್‌ ತಂಡ ಶೋಧ ಆರಂಭಿಸಿದೆ. ತಂಡದಲ್ಲಿ ಶ್ವಾನ ದಳವೂ ಸೇರಿಕೊಂಡಿತ್ತು. ಎಎನ್‌ಎಫ್‌ ಸಿಬಂದಿ ಕೂಜಿಮಲೆ, ಕಡಮಕಲ್ಲು, ಬಾಳು ಗೋಡಿನ ಉಪ್ಪುಕಳ ಪ್ರದೇಶಗಳಲ್ಲಿ ಶೋಧ ನಡೆಸಿ ದರು. ಡ್ರೋನ್‌ ಕೆಮರಾ ಬಳಸಿ ಅರಣ್ಯ ಪ್ರದೇಶ  ದಲ್ಲಿ ಹುಡುಕುವ ಪ್ರಯತ್ನವನ್ನೂ ನಡೆಸಿದ್ದಾರೆ.

ಹಿಂದೆಯೂ ಸಂಚಾರ
ಕುಕ್ಕೆ ಸುಬ್ರಹ್ಮಣ್ಯ ಸಮೀಪದಲ್ಲಿ ನಕ್ಸಲರ ಸಂಚಾರ ಈ ಹಿಂದೆಯೂ ಪತ್ತೆಯಾಗಿತ್ತು. 2012 ರಲ್ಲಿ ಸುಬ್ರಹ್ಮಣ್ಯ ಸಮೀಪದ ಚೇರು, ಭಾಗ್ಯ, ಎರ್ಮಾಯಿಲ್‌, ನಡುತೋಟ, ಪಳ್ಳಿಗದ್ದೆ ಭಾಗಕ್ಕೆ ನಕ್ಸಲರು ಭೇಟಿ ನೀಡಿದ್ದರು. ಬಳಿಕ ಪಳ್ಳಿಗದ್ದೆ ಕಾಡಿನಲ್ಲಿ ನಕ್ಸಲರು ಮತ್ತು ಎಎನ್‌ಎಫ್‌ ತಂಡದ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಕೆಲವೇ ದಿನಗಳ ಅಂತರದಲ್ಲಿ ಬಿಸಿಲೆ ಸಮೀಪದ ಭಾಗಿಮಲೆ ಕಾಡಿನಲ್ಲಿ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ತಂಡದ ಸದಸ್ಯನೊಬ್ಬ ಸಾವನ್ನಪ್ಪಿದ್ದ. 2012ರಲ್ಲಿ ಮಡಿಕೇರಿ ವ್ಯಾಪ್ತಿಯ ಕಾಲೂರು ಗ್ರಾಮದಲ್ಲಿ ಹಾಗೂ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಂಪಾಜೆಗುಡ್ಡೆ ಗದ್ದೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಮಡಪ್ಪಾಡಿ ಸಮೀಪದ ಹಾಡಿಕಲ್ಲು, ಕಲ್ಮಕಾರಿನ ಬಾಳೆಬೈಲು, ಕಡಮಕಲ್ಲು, ಗಾಳಿಬೀಡು ಪ್ರದೇಶದಲ್ಲೂ ನಕ್ಸಲರು ಕಾಣಿಸಿಕೊಂಡಿದ್ದರು ಎನ್ನಲಾಗಿತ್ತು.

ಚುನಾವಣೆ ವೇಳೆ ಆತಂಕ
ಚುನಾವಣೆ ಘೋಷಣೆಯಾಗಿದ್ದು, ಇದೇ ವೇಳೆ ನಕ್ಸಲರು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ವನ್ನುಂಟು ಮಾಡಿದೆ. ತಮ್ಮ ಇರುವಿಕೆಯನ್ನು ತೋರ್ಪಡಿ ಸಲು ಭೇಟಿ ನೀಡಿದ್ದಾರೆ ಎಂಬ ಸಂಶಯವೂ ವ್ಯಕ್ತ ವಾಗ ತೊಡಗಿದೆ. ಘಟನೆ ಹಿನ್ನೆಲೆ ಯಿಂದ ಸ್ಥಳೀಯ ಪ್ರದೇಶದ ಜನರು ಆತಂಕಗೊಂಡಿದ್ದಾರೆ.

ಕೊಡಗು ಎಸ್‌ಪಿ, ಎಎನ್‌ಎಫ್‌ ಡಿವೈಎಸ್‌ಪಿ ಭೇಟಿ
ಕೂಜಿಮಲೆಗೆ ಸೋಮವಾರ ಕಾರ್ಕಳ ನಕ್ಸಲ್‌ ನಿಗ್ರಹ ದಳದ ಡಿವೈಎಸ್ಪಿ ರಾಘವೇಂದ್ರ, ಕೊಡಗು ಎಸ್‌ಪಿ ರಾಮರಾಜನ್‌, ಮಡಿಕೇರಿ ವೃತ್ತ ನಿರೀಕ್ಷಕ ಉಮೇಶ್‌ ಉಪ್ಪಳಿಕೆ, ಸುಬ್ರಹ್ಮಣ್ಯ ಎಸ್‌ಐ ಕಾರ್ತಿಕ್‌, ಎಎನ್‌ಎಫ್‌ ಅಧಿಕಾರಿಗಳು, ಸಿಬಂದಿ, ಪೊಲೀಸ್‌ ಇಲಾಖೆ ಸಿಬಂದಿ, ಗುಪ್ತದಳ ಅಧಿಕಾರಿಗಳು, ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ವಿಕ್ರಂ ಗೌಡ ತಂಡ ಆಗಿರುವ ಶಂಕೆ
ಕೂಜಿಮಲೆಗೆ ಆಗಮಿಸಿದ್ದು ನಕ್ಸಲರೆಂಬುದು ಖಚಿತಗೊಂಡಿದೆ ಎಂದು ಪೊಲೀಸ್‌ ಅಧಿಕಾರಿ ಗಳು ತಿಳಿಸಿದ್ದಾರೆ. ಎಎನ್‌ಎಫ್‌ ಹಾಗೂ ಪೊಲೀಸರು ಅಂಗಡಿಯವರ ಸಹಿತ ಅಲ್ಲಿದ್ದವ ರಲ್ಲಿ ಮಾಹಿತಿ ಪಡೆದುಕೊಂಡರು. ಕೂಜಿಮಲೆಗೆ ಆಗಮಿಸಿದ್ದು ವಿಕ್ರಂ ಗೌಡ ನೇತೃತ್ವದ ನಕ್ಸಲ್‌ ತಂಡ ಇರಬಹುದು ಎಂದು ಶಂಕೆಯ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಬಂದಿದ್ದ ನಕ್ಸಲರಲ್ಲಿ ಜಿಷಾ, ಲತಾ ಮುಂಡುಗಾರು ಇದ್ದದ್ದು ಖಚಿತವಾಗಿದ್ದು, ಇಬ್ಬರು ಪುರುಷರು ಯಾರು ಎಂಬುದು ಖಚಿತಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಸಂತೋಷ್‌, ವಿಕ್ರಂ ಗೌಡ ಆಗಿರಬಹುದು ಎಂದು ಶಂಕಿಸಲಾಗಿದೆ.

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.