ತೆರವಾಗದ ಮೃತ್ಯುಂಜಯ ನದಿ ಹೂಳು

5 ಮೀ. ಎತ್ತರ ಮರಳು ಸಂಗ್ರಹ ; ಸೇತುವೆಗೆ ಹಾನಿ ಸಾಧ್ಯತೆ

Team Udayavani, Jun 20, 2020, 5:10 AM IST

ತೆರವಾಗದ ಮೃತ್ಯುಂಜಯ ನದಿ ಹೂಳು

ಮುಂಡಾಜೆ: ಚಾರ್ಮಾಡಿಯಿಂದ ಮುಂಡಾಜೆ ಮೂಲಕ ಕಲ್ಮಂಜ ವಾಗಿ ಹರಿಯುವ ಮೃತ್ಯುಂಜಯ ನದಿಯಲ್ಲಿ ಕಳೆದ ಮಳೆಗಾಲ ಪ್ರವಾಹ ದೊಂದಿಗೆ ಬಂದ ಮರಳು ತುಂಬಿ ಕೊಂಡಿದ್ದು, ಅಪಾಯ ಆಹ್ವಾನಿಸುತ್ತಿದೆ.

ಮಂಗಳೂರು-ಮೂಡಿಗೆರೆ ರಾಜ್ಯ ಹೆದ್ದಾರಿಯ ಮುಂಡಾಜೆ ಸೇತುವೆ ಬಳಿ ಮೃತ್ಯುಂಜಯ ನದಿಯಲ್ಲಿ ಸುಮಾರು 200 ಮೀ. ದೂರದವರೆಗೆ ಸುಮಾರು 5 ಮೀ. ಎತ್ತರಕ್ಕೆ ಮರಳು ಬಂದು ಬಿದ್ದಿದ್ದು, ನದಿ ಹರಿಯುವ ದಿಕ್ಕನ್ನೇ ಬದಲಾಯಿಸಿದೆ. ಸೇತುವೆ ಬಳಿ ನೀರು ಹರಿದು ಬರುವ ಸ್ಥಳದಲ್ಲಿರುವ ಮರಳು ನಿಂತಿದ್ದು, ಈ ಮಳೆಗಾಲದಲ್ಲಿ ಸೇತುವೆಗೆ ಹಾನಿ ಯಾಗುವ ಸಾಧ್ಯತೆ ಇದೆ. ಈ ಸೇತುವೆಗೆ ಹಾನಿ ಸಂಭವಿಸಿ ರಸ್ತೆ ಹಾನಿಯಾದರೆ, ಚಾರ್ಮಾಡಿ ಮೂಲಕ ವಾಹನ ಸಂಚಾರ ಸ್ಥಗಿತಗೊಳ್ಳ‌ಬಹುದು. ಕೆಳಭಾಗದಲ್ಲಿರುವ ಮುಂಡಾಜೆ ವಾಳ್ಯ, ಕಲ್ಮಂಜ ಭಾಗದ ತೋಟಗಳಿಗೆ ಮತ್ತೆ ಪ್ರವಾಹದೊಂದಿಗೆ ಮರಳು ನುಗ್ಗುವ ಸಾಧ್ಯತೆಯಿದೆ. ಮರಳು ತೆರವು ಬಗ್ಗೆ ವಿಚಾರಿಸಿದರೆ, ಒಂದು ಇಲಾಖೆ ಇನ್ನೊಂದು ಇಲಾಖೆಯತ್ತ ಬೆರಳು ತೋರಿಸುತ್ತಿದೆ.

ಕಳೆದ ಮಳೆಗಾಲದಲ್ಲಿ ಬಂದ ಮರಳು ತೋಟಗಳಲ್ಲಿ ಹುದುಗಿದೆ. ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಿಂದ ತೋಟಗಳಿಂದ ಮರಳು ಸಾಗಾಟ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ ಇದನ್ನು ದುರುಪಯೋಗಪಡಿಸಿ ತೋಟಗಳಲ್ಲಿ ರಸ್ತೆ ನಿರ್ಮಿಸಿ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಿಂದ ಅವ್ಯಾಹತವಾಗಿ ಮರಳು ಸಾಗಾಟ ನಡೆದಿದೆ ಎಂಬ ಆರೋಪವಿದೆ.

ಸರಕಾರದ ಹಣ ಪೋಲು
ಕಳೆದ ವರ್ಷದ ಪ್ರವಾಹದ ಸಮಯ ಕೃಷಿ ತೋಟಗಳಿಗೆ ನುಗ್ಗಿದ ಮರಳು ತೆರವಿಗೆ ಸರಕಾರ ಈ ಭಾಗದ ಪ್ರವಾಹ ಪೀಡಿತರಿಗೆ ಪ್ರತಿ ಎಕ್ರೆಗೆ 11,000 ರೂ.ಗೂ ಹೆಚ್ಚಿನ ಪರಿಹಾರ ಮೊತ್ತ ಮಂಜೂರು ಮಾಡಿತ್ತು. ಈಗ ನದಿಯಲ್ಲಿ ತುಂಬಿರುವ ಮರಳು ಈ ಬಾರಿ ಮತ್ತೆ ತೋಟಗಳಿಗೆ ಬಂದು ಬಿದ್ದರೆ ಮತ್ತೆ ಪರಿಹಾರ ನೀಡಬೇಕಾಗುತ್ತದೆ. ನದಿ ಪಾತ್ರಗಳಲ್ಲಿರುವ ಮರಳನ್ನು ಸರಕಾರದ ವತಿಯಿಂದ ತೆರವುಗೊಳಿಸಿದರೆ ಸರಕಾರದ ಹಣ ಪರಿಹಾರ ರೂಪದಲ್ಲಿ ಪೋಲಾಗುವುದು ತಪ್ಪುತ್ತದೆ.

ತೆರವಿಗೆ ಸೂಚನೆ
ಸೇತುವೆಯ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಸೇತುವೆಯ ಆಸು ಪಾಸಿನಲ್ಲಿರುವ ಮರಳನ್ನು ತೆರವು ಗೊಳಿಸುವಂತೆ ಸೂಚಿಸಲಾಗಿದೆ.
-ನಿರಂಜನ್‌, ಅಡಿಶನಲ್‌ ಡೈರೆಕ್ಟರ್‌,
ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಮಂಗಳೂರು

ತೆರವು ಅಗತ್ಯ
ಕಳೆದ ಮಳೆಗಾಲದಲ್ಲಿ ತೋಟಕ್ಕೆ ನೆರೆಯೊಂದಿಗೆ ನುಗ್ಗಿದ ಮರಳಿನಿಂದ ಸಾಕಷ್ಟು ನಷ್ಟ ಉಂಟಾಗಿದೆ. ಸೇತುವೆ ಬಳಿ ಇರುವ ಮರಳನ್ನು ತೆರವುಗೊಳಿಸದಿದ್ದಲ್ಲಿ ಈ ಮಳೆ ಗಾಲದಲ್ಲಿ ಪ್ರವಾಹ ಉಂಟಾದರೆ ಅಡಿಕೆ ತೋಟಗಳು ಸಂಪೂರ್ಣ ನಾಶ ವಾಗಲಿವೆ. ಮರಳನ್ನು ಕೂಡಲೇ ತೆರವು ಗೊಳಿಸುವುದು ಅವಶ್ಯ.
– ಶಶಿಧರ ಠೊಸರ್‌
ಸಕೃಷಿಕರು, ಮುಂಡಾಜೆ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

Bantwal ಚೂರಿ ಇರಿತ ಪ್ರಕರಣ: ಆರೋಪಿಯ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.