ರಾಜ್ಯಕ್ಕೆ 68 ಆಕ್ಸಿಜನ್‌ ಜನರೇಟರ್‌ ಯುನಿಟ್‌


Team Udayavani, May 21, 2021, 6:00 AM IST

ರಾಜ್ಯಕ್ಕೆ 68 ಆಕ್ಸಿಜನ್‌ ಜನರೇಟರ್‌ ಯುನಿಟ್‌

ಬೆಳ್ತಂಗಡಿ: ಕೋವಿಡ್ ಸೋಂಕಿತರಿಗೆ ತೀವ್ರ ಆಮ್ಲಜನಕ ಕೊರತೆ ಎದುರಾಗುತ್ತಲೇ ರಾಜ್ಯ ಸರಕಾರ 10 ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಮಟ್ಟದ 30 ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಉತ್ಪಾದಿಸುವ ಘಟಕ(On oxygen Generator unit)ನಿರ್ಮಾಣಕ್ಕೆ ಮುಂದಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್‌ ವಿಭಾಗದಿಂದ ಘಟಕ ನಿರ್ಮಾಣಕ್ಕೆ ಬೇಕಾಗುವ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದ್ದು ಜೂನ್‌ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರಕಾರ ಸೂಚಿಸಿದೆ. ಇದಲ್ಲದೆ ಎಂ.ಆರ್‌.ಪಿ.ಎಲ್‌., ಇಂಡೇನ್‌ ಆಯಿಲ್‌ ಸೇರಿದಂತೆ ಇತರ ಆಯಿಲ್‌ ಕಂಪೆನಿಗಳು, ಇನ್ಫೋಸಿಸ್‌ ಸೇರಿದಂತೆ ಇತರ ಸಂಸ್ಥೆಗಳು ಸೇರಿ ರಾಜ್ಯದ ಇತರ 28 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಘಟಕ ನಿರ್ಮಾಣಕ್ಕೆ ಮುಂದೆ ಬಂದಿದೆ.  ಹೀಗೆ ರಾಜ್ಯದಲ್ಲಿ ಒಟ್ಟು 68 ಘಟಕ ನಿರ್ಮಾಣವಾಗಲಿದೆ.

38.60 ಕೋ.ರೂ. ವೆಚ್ಚ :

ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳಲ್ಲಿ ವಿ.ಎಸ್‌.ಎ. ತಂತ್ರಜ್ಞಾನವುಳ್ಳ 500 ಎಲ್‌. ಪಿ.ಎಂ. ಸಾಮರ್ಥ್ಯ(ಪ್ರತಿ ಘಟಕಕ್ಕೆ 1.37 ಕೋ.ರೂ.)ದಂತೆ ಅಂದಾಜು 14 ಕೋ.ರೂ. ವೆಚ್ಚದಲ್ಲಿ ಹಾಗೂ 30 ತಾಲೂಕು ಆಸ್ಪತ್ರೆಗಳಿಗೆ ಪಿ.ಎಸ್‌.ಎ. ತಂತ್ರಜ್ಞಾನವುಳ್ಳ 390 ಎಲ್‌.ಪಿ.ಎಂ. ಸಾಮರ್ಥ್ಯ (ಪ್ರತಿ ಘಟಕಕ್ಕೆ 82 ಲಕ್ಷ ರೂ.)ದಂತೆ ಅಂದಾಜು 24.60 ಕೋ.ರೂ. ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದೆ.

ಉಭಯ ಜಿಲ್ಲೆಯಲ್ಲಿ ಮೂರು ಕಡೆ :

ಕೊಯಮತ್ತೂರಿಂದ ಟ್ರೈಡೆಂಟ್‌ ಕಂಪೆನಿ ಯಂತ್ರೋಪಕರಣ ಸರಬರಾಜು ಮಾಡಲಿದ್ದು, ಗಾಳಿಯಿಂದಲೇ ಆಮ್ಲ ಜನಕ ಹೀರಿಕೊಂಡು ಉತ್ಪಾದಿಸುವ ಘಟಕವಾಗಿದ್ದು, ವೆನಾÉಕ್‌ ಆಸ್ಪತ್ರೆಯಲ್ಲಿ 930 ಎಲ್‌.ಪಿ.ಎಂ.(ಲೀಟರ್‌ ಪರ್‌ ಮಿನಿಟ್‌)ನ ಘಟಕವನ್ನು ನಿರ್ಮಿಸುವ ಜವಾಬ್ದಾರಿ ಎಂ.ಆರ್‌.ಪಿ.ಎಲ್‌. ಕಂಪೆನಿ ವಹಿಸಿದೆ. ಸರಕಾರದಿಂದ 500 ಎಲ್‌.ಪಿ.ಎಂ. ಸಾಮರ್ಥ್ಯದ ಘಟಕ, ಬೈಂದೂರು ಹಾಗೂ ಬೆಳ್ತಂಗಡಿಯಲ್ಲಿ 390 ಎಲ್‌.ಪಿ.ಎಂ. ಸಾಮರ್ಥ್ಯದ ಘಟಕ ನಿರ್ಮಾಣವಾಗಲಿದೆ. ಪ್ರತಿ ನಿತ್ಯ 38 ಎಂ.ಟಿ. ಆಕ್ಸಿಜನ್‌ ತಯಾರಿಸಬಹುದಾಗಿದ್ದು, 56 ಹಾಸಿಗೆಗೆ ನಿರಂತರ ಆಮ್ಲಜನಕ ಪೂರೈಸಬಲ್ಲದಾಗಿದೆ. 500 ಎಲ್‌.ಪಿ.ಎಂ. ಘಟಕವು 80 ಹಾಸಿಗೆ ಹಾಗೂ 930 ಎಲ್‌.ಪಿ.ಎಂ. ಸಾಮರ್ಥ್ಯದ ಘಟಕವು 100 ಹಾಸಿಗೆಗಳಿಗೆ ನಿರಂತರ ಆಮ್ಲಜನಕ ನೀಡಬಲ್ಲವು.

ಇದರಿಂದಾಗಿ ಮೆಡಿಕಲ್‌ ಆಕ್ಸಿಜನ್‌ ಸರಬರಾಜುದಾರರ ಮೇಲೆ ಅವ ಲಂಬಿರಾಗುವ ಹೊರೆ ತಗ್ಗುವ ಜತೆಗೆ ಗುಡ್ಡಗಾಡು ಮತ್ತು ಗ್ರಾಮೀಣ ಭಾಗಗಳಲ್ಲಿ ಮೆಡಿಕಲ್‌ ಆಕ್ಸಿಜನ್‌ ಒದಗಿಸುವುದು ಸುಲಭವಾಗಲಿದೆ. ಸದ್ಯ ಮಂಗಳೂರು ಮತ್ತು ಉಡುಪಿಯಲ್ಲಿ 6,000 ಲೀಟರ್‌ನ ಲಿಕ್ವಿಡ್‌ ಆಕ್ಸಿಜನ್‌ ಪ್ಲಾಂಟ್‌ ಮಾತ್ರ ಇದ್ದು ಇದಕ್ಕೆ ಪರ್ಯಾಯವಾಗಿ ನೂತನ ಘಟಕವು ಕೊರೊನಾ ಮೂರನೇ ಅಲೆ ಎದುರಿಸಲು ಸನ್ನದ್ಧವಾಗಲಿದೆ.

ರಾಜ್ಯದಲ್ಲೇ 10 ಜಿಲ್ಲಾಸ್ಪತ್ರೆ ಹಾಗೂ 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣವಾಗಲಿದೆ. ಖಾಸಗಿ ಸಂಸ್ಥೆಗಳು ಹೆಚ್ಚಿನ ಕಡೆ ಕೊಡುಗೆ ನೀಡಲು ಮುಂದಾಗಿವೆ. ಜೂನ್‌ ತಿಂಗಳ ಒಳಗಾಗಿ ಘಟಕ ಸೇವೆಗೆ ಸಿದ್ಧವಾಗಲಿದ್ದು, ಕೋವಿಡ್ ಮೂರನೇ ಅಲೆ ಎದುರಿಸಲು ಘಟಕಗಳು ಆರೋಗ್ಯ ಇಲಾಖೆಗೆ ಬಲ ತುಂಬಲಿದೆ.ಶ್ರೀನಾಥ್‌ ಎಂ.ಬಿ., ಕಾರ್ಯಪಾಲಕ ಎಂಜಿನಿಯರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್‌  ಮೈಸೂರು ವಿಭಾಗ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.