72.4 ಕೋ. ರೂ. ವೆಚ್ಚದಲ್ಲಿ 24×7 ಶುದ್ಧ ನೀರು ಪೂರೈಕೆ: ಶಾಸಕ ಮಠಂದೂರು


Team Udayavani, Jun 29, 2019, 5:00 AM IST

2

ಪುತ್ತೂರು: ಎಡಿಬಿ ಪ್ರಾಯೋ ಜಿತ 72.4 ಕೋಟಿ ರೂ. ವೆಚ್ಚದ 2ನೇ ಹಂತದ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ನಗರ ದಲ್ಲಿ ದಿನದ 24 ತಾಸು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ನಾನಾ ಸವಲತ್ತುಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿ ದರು. ನಗರದಲ್ಲಿ 60 ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ಪ್ರಸ್ತುತ ಉಪ್ಪಿನಂಗಡಿ ಕುಮಾರಧಾರಾದಿಂದ ದಿನನಿತ್ಯ 6.5 ಎಂಎಲ್ಡಿ ನೀರು ಹಾಗೂ ಕೊಳವೆ ಬಾವಿಯಿಂದ ನೀರು ಪೂರೈಸಲಾಗು ತ್ತಿದ್ದರೂ, ಬೇಡಿಕೆಗೆ ತಕ್ಕಂತೆ ಪೂರೈಕೆಯ ಕೊರತೆ ಇದೆ ಎಂದರು.

ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಆಗ್ರಹ
ನಗರಕ್ಕೆ ಒಳಚರಂಡಿ ಯೋಜನೆ ಅನು ಷ್ಠಾನಿಸುವ ಸಲುವಾಗಿ ಬೆಂಗಳೂರಿನಲ್ಲಿ ನಡೆದ ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವಾಲಯದ ಉನ್ನತ ಮಟ್ಟದ ಸಭೆಯಲ್ಲಿ ಬೇಡಿಕೆ ಇರಿಸಿದ್ದಾರೆ. ಸುಮಾರು 125 ಕೋಟಿ ರೂ. ಅನುದಾನದ ಅಗತ್ಯವಿದೆ. ಭೂಸ್ವಾಧೀನ ಆಗಬೇಕಾಗುತ್ತದೆ. ನಗರದ ಜನ ಸಹಕರಿಸಿದರೆ ಯೋಜನೆ ಅನುಷ್ಠಾನ ಸಾಧ್ಯ ಎಂದವರು ತಿಳಿಸಿದರು.

ಸದುಪಯೋಗಪಡಿಸಿಕೊಳ್ಳಿ
ನಗರ ಬಡತನ ನಿರ್ಮೂಲನಾ ಕೋಶದಿಂದ ನೀಡಲಾಗುವ ನಾನಾ ಯೋಜನೆಗಳ ಚೆಕ್‌ಗಳನ್ನು ವಿತರಿಸಿದ ಶಾಸಕರು, ಸಮಾಜದ ಕಟ್ಟಕಡೆಯ ವ್ಯಕ್ತಿಯು ಸ್ವಾಭಿಮಾನದಿಂದ ಜೀವನ ಸಾಗಿಸಲು ಸರಕಾರ ಪ್ರತೀ ವರ್ಷ ಸಾವಿ ರಾರು ಕೋಟಿ ರೂ. ಖರ್ಚು ಮಾಡು ತ್ತದೆ. ಇದನ್ನು ಫಲಾನುಭವಿಗಳು ಅರಿತು ಕೊಂಡು ಸವಲತ್ತುಗಳ ಸದು ಪಯೋಗ ಮಾಡಿಕೊಳ್ಳಬೇಕು. ಶೇ. 25 ಅನುದಾನ ವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿಡಲಾಗುತ್ತದೆ. ಇದರ ಉದ್ದೇಶ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆ ತರುವುದಾಗಿದೆ ಎಂದರು.

ಮಾದರಿ ಆಡಳಿತಕ್ಕೆ ಆದ್ಯತೆ
4 ದಶಕಗಳ ಹಿಂದೆ ಉಡುಪಿ ಮತ್ತು ಪುತ್ತೂರು ನಗರಗಳಲ್ಲಿ ಆದರ್ಶಯುತ ಆಡಳಿತ ವ್ಯವಸ್ಥೆ ಇತ್ತು ಮತ್ತು ರಾಜ್ಯಕ್ಕೆ ಇವು ಮಾದರಿಯಾಗಿದ್ದವು. ಅದೇ ಆದರ್ಶವನ್ನು ಈಗ ನಾವು ಮತ್ತೆ ಅನುಷ್ಠಾನಕ್ಕೆ ತರಬೇಕಿದೆ. ಆದರೆ ನಗರಸಭೆಯ ಚುನಾಯಿತ ಪ್ರತಿನಿಧಿಗಳು ಆಡಳಿತ ವ್ಯವಸ್ಥೆ ರಚಿಸಲು ಕಾಯಬೇಕಾದ ಸ್ಥಿತಿ ಇದೆ. ಆ ದಿನ ಬೇಗ ಬರಲಿ ಎಂದು ಆಶಿಸಿದ ಶಾಸಕರು, ಕೇಂದ್ರ ಸರಕಾರದ ಸ್ವಚ್ಛಮೇವ ಜಯತೇ ಘೋಷಣೆಯಂತೆ ಸ್ವಚ್ಛ ನಗರ,ಸ್ವಚ್ಛ ಆಡಳಿತ ಬರಬೇಕಿದೆ ಎಂದರು.

1.5 ಕೋಟಿ ರೂ. ವಿತರಣೆ
ನಗರಸಭೆ ಪೌರಾಯುಕ್ತರಾದ ರೂಪಾ ಶೆಟ್ಟಿ ಮಾತನಾಡಿ, ಎಸ್‌ಎಫ್‌ಸಿ, ನಗರಸಭೆ ಅನುದಾನ ಸೇರಿದಂತೆ ಬಡತನ ನಿರ್ಮೂಲನಾ ಯೋಜನೆ ಯಲ್ಲಿ 2018- 19ನೇ ಸಾಲಿನಲ್ಲಿ ಸುಮಾರು ಒಂದೂವರೆ ಕೋಟಿ ರೂ.ಗಳನ್ನು ವಿತರಿಸಲಾಗಿದೆ ಎಂದು ಹೇಳಿದರು. ಸಮಾಜ ಕಲ್ಯಾಣಾಧಿಕಾರಿ ಗಾಯತ್ರಿ ಮಾತನಾಡಿದರು. ನಗರಸಭೆ ಸಮುದಾಯ ಸಂಘಟನಾಧಿಕಾರಿ ಚಂದ್ರ ಕುಮಾರ್‌ ಸ್ವಾಗತಿಸಿ, ವಂದಿಸಿದರು.

ಫ‌ಲಾನುಭವಿಗಳಿಗೆ ಚೆಕ್‌, ಪ್ರಮಾಣಪತ್ರ
ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ನಾನಾ ಯೋಜನೆಗಳ ಚೆಕ್‌ ವಿತರಿಸ ಲಾಯಿತು. ಶೇ. 24.10 ಎಸ್‌ಎಫ್‌ಸಿ ನಿಧಿಯಲ್ಲಿ ಶೌಚಾಲಯ ರಚನೆಗೆ 4 ಜನರಿಗೆ ತಲಾ 15,000 ರೂ., ಜಲ ಸಂಪರ್ಕ ಸಹಾಯಧನವನ್ನು ತಲಾ 6 ಸಾವಿರದಂತೆ ಮೂವರಿಗೆ, ವಿದ್ಯುತ್‌ ಸಂಪರ್ಕಕ್ಕೆ ತಲಾ 13,000 ರೂ.ಗಳಂತೆ 6 ಫಲಾನುಭವಿಗಳಿಗೆ ಚೆಕ್‌ ವಿತರಿಸಲಾ ಯಿತು. ನಗರಸಭೆಯ 24.10 ಶೇಕಡಾ ನಿಧಿಯಡಿ ಪೌರಕಾರ್ಮಿಕರ ಮನೆ ದುರಸ್ತಿಗೆ 20,000 ರೂ.ಗಳಂತೆ ಇಬ್ಬರಿಗೆ, 2016-17ನೇ ಸಾಲಿನ ಶೇ. 24.10 ಎಸ್‌ಎಫ್‌ಸಿ ನಿಧಿಯಲ್ಲಿ ಆಟೋ ರಿಕ್ಷಾ ಖರೀದಿಗೆ ಮೂವರಿಗೆ ಒಟ್ಟು 3 ಲಕ್ಷ ರೂ. ನೀಡ ಲಾಯಿತು. ತಲಾ 2,500 ರೂ.ಗಳಂತೆ 58 ವಿಕಲ ಚೇತನರಿಗೆ ಶೇ. 3 ಎಸ್‌ಎಫ್‌ಸಿ ನಿಧಿಯಲ್ಲಿ ಹಣ ನೀಡಲಾಯಿತು. 8 ಮಂದಿಗೆ ವಾಹನ ಚಾಲನ ಪ್ರಮಾಣಪತ್ರ, 4 ಮಂದಿಗೆ ವಾಹನ ಚಾಲನ ತರಬೇತಿ ಆದೇಶ ವಿತರಿಸಲಾಯಿತು. ತರಬೇತಿಗಾಗಿ 29 ಅರ್ಜಿಗಳು ಬಂದಿರುವುದನ್ನು ಪ್ರಕಟಿಸಲಾಯಿತು. ಡೇ ನಲ್ಮ್ ಯೋಜನೆ ಯ ಅಡಿಯಲ್ಲಿ 2017-18ನೇ ಸಾಲಿ ನಲ್ಲಿ ಬ್ಯೂಟೀಷಿಯನ್‌ ತರಬೇತಿ ಪಡೆದ 10 ಮಂದಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.