7ನೇ ತರಗತಿ ಪಬ್ಲಿಕ್‌ ಪರೀಕ್ಷೆ ಇದ್ದರೂ ಉತ್ತೀರ್ಣ-ಅನುತ್ತೀರ್ಣ ಇಲ್ಲ

ಬಂಟ್ವಾಳದಲ್ಲಿ "ಉದಯವಾಣಿ' ಜತೆ ಶಿಕ್ಷಣ ಸಚಿವರ ಮಾತುಕತೆ

Team Udayavani, Dec 18, 2019, 4:22 AM IST

cv-40

ಬಂಟ್ವಾಳ: ಪ್ರಸಕ್ತ ಸಾಲಿನಲ್ಲಿ 7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಿದರೂ ಯಾವುದೇ ವಿದ್ಯಾರ್ಥಿಯನ್ನು ಈ ವರ್ಷ ಫೇಲ್‌ ಮಾಡುವುದಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರು ಪೋಷಕರಿಗೆ ಭರವಸೆ ನೀಡಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಶಿಕ್ಷಣ ಸಚಿವರು ಬಂಟ್ವಾಳ ನಿರೀಕ್ಷಣ ಮಂದಿರದಲ್ಲಿ “ಉದಯವಾಣಿ’ ಜತೆ ಮಾತನಾಡಿದರು. ಇನ್ನುಳಿದ ಕಡಿಮೆ ಅವಧಿಯಲ್ಲಿ ಪಬ್ಲಿಕ್‌ ಪರೀಕ್ಷೆಗೆ ಸಿದ್ಧತೆ ನಡೆಸಲು ಸಾಧ್ಯವೇ, ನಮ್ಮ ಮಕ್ಕಳಲ್ಲಿ ಅದನ್ನು ಎದುರಿಸುವಷ್ಟು ಸಾಮರ್ಥ್ಯ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಮಕ್ಕಳನ್ನು ಪಾಸು-ಫೇಲ್‌ ಮಾಡುವ ಬದಲು ಅವರಿಗೆ ಪಬ್ಲಿಕ್‌ ಪರೀಕ್ಷೆ ಎದುರಿಸುವ ಅನುಭವ ನೀಡುವ ಉದ್ದೇಶ ಇದೆ. ಹೀಗಾಗಿ ಸಿದ್ಧತೆ, ಸಾಮರ್ಥ್ಯದ ವಿಚಾರ ಬರುವುದಿಲ್ಲ ಎಂದರು.

ಮಕ್ಕಳ ಅನುಭವಕ್ಕಾಗಿ ಪರೀಕ್ಷೆ
ಪರೀಕ್ಷೆ ಅಂದರೆ ಹೇಗಿರುತ್ತದೆ, ಪರೀಕ್ಷಾ ಕೊಠಡಿಯ ವಾತಾವರಣ ಹೇಗಿರುತ್ತದೆ ಎಂಬುದು ಮಕ್ಕಳ ಅನುಭವಕ್ಕೆ ಬರಬೇಕು ಎಂಬ ಉದ್ದೇಶದಿಂದ ಈ ಯೋಚನೆ ಮಾಡಲಾಗಿದೆ. ಎಸೆಸೆಲ್ಸಿಯಂತಹ ಪ್ರಮುಖ ಹಂತದಲ್ಲಿ ಅವರು ಗಲಿಬಿಲಿಗೊಳ್ಳದಂತೆ ಅವರಿಗೆ ಪಬ್ಲಿಕ್‌ ಪರೀಕ್ಷೆ ಎದುರಿಸುವ ಅನುಭವ ಇರಬೇಕು ಎನ್ನುವುದು ಮಾತ್ರ ನಮ್ಮ ಉದ್ದೇಶ ಎಂದರು. ಆದರೆ ಅದಕ್ಕೂ ಒಂದಷ್ಟು ಮಂದಿ ತಕರಾರು ಮಾಡಿದ್ದಾರೆ. ಅವರ ಜತೆ ಸಾಕಷ್ಟು ಚರ್ಚೆ ನಡೆಸಿ, ಅವರ ಮನವೊಲಿಸುವ ಕಾರ್ಯವನ್ನೂ ಮಾಡಿದ್ದೇವೆ. ಇನ್ನು 3 ದಿನಗಳಲ್ಲಿ ಪಬ್ಲಿಕ್‌ ಪರೀಕ್ಷೆಯ ಕುರಿತು ಸ್ಪಷ್ಟ ತೀರ್ಮಾನವನ್ನು ಕೈಗೊಳ್ಳಲಿದ್ದೇವೆ. ಪಬ್ಲಿಕ್‌ ಪರೀಕ್ಷೆಯನ್ನು ನಡೆಸುವ ತೀರ್ಮಾನಕ್ಕೆ ಬಂದರೂ ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದರು.

ಚುನಾವಣಾಧಿಕಾರಿಗೆ ಪತ್ರ
ಶಾಲಾ ಶಿಕ್ಷಕರಿಗೆ ಚುನಾವಣೆ- ತರಬೇತಿಗಳಿಂದ ಪಾಠಕ್ಕೆ ತೊಂದರೆ ಯಾಗುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಕ್ಷಕರನ್ನು ಚುನಾವಣ ಕರ್ತವ್ಯದಿಂದ ಮುಕ್ತಿ ಗೊಳಿಸಬೇಕು ಎಂದು ತಾನು ಈಗಾಗಲೇ ಚುನಾವಣ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ಉತ್ತರ ಬರಬೇಕಿದೆ. ಶಿಕ್ಷಕರ ಮೇಲಿನ ಇತರ ಹೊರೆಗಳನ್ನೂ ಕಡಿಮೆ ಮಾಡುವ ಕುರಿತಾಗಿಯೂ ಯೋಚನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಮತ್ತೆ ಮತ್ತೆ ತರಬೇತಿ ಇಲ್ಲ ಶಿಕ್ಷಕರಿಗೆ ಏನೇ ತರಬೇತಿ ನೀಡುವುದಾದರೂ ವಿದ್ಯಾರ್ಥಿಗಳ ಪಾಠ, ಪರೀಕ್ಷೆಗಳಿಗೆ ತೊಂದರೆಯಾಗದ ರೀತಿಯಲ್ಲಿ ಡಿಸೆಂಬರ್‌ ಒಳಗೆ ಮುಗಿಸುವಂತೆ ತಿಳಿಸಲಾಗಿದೆ. ಜತೆಗೆ ಮತ್ತೆ ಮತ್ತೆ ತರಬೇತಿ, ಮೀಟಿಂಗ್‌ಗಳನ್ನು ಕರೆಯಬಾರದು ಎಂಬ ಸೂಚನೆಯನ್ನೂ ನೀಡಿದ್ದೇನೆ. ಶಿಕ್ಷಕರು ಹೆಚ್ಚು ಹೆಚ್ಚು ಶಾಲೆಗಳಲ್ಲಿ ನಿಲ್ಲಬೇಕು, ತರಬೇತಿಗಳನ್ನು ಅವರ ವಿರಾಮದ ಸಮಯದಲ್ಲಿ ನಡೆಸಬೇಕು. ಡಿಸೆಂಬರ್‌ ಬಳಿಕ ಯಾವುದೇ ತರಬೇತಿ ಹಮ್ಮಿಕೊಳ್ಳಬಾರದು, ಆ ಬಳಿಕದ ಶಾಲಾವಧಿಯನ್ನು ಪೂರ್ತಿಯಾಗಿ ಶೈಕ್ಷಣಿಕ ಚುಟುವಟಿಕೆಗಳಿಗೆ ನೀಡಬೇಕು ಎಂಬ ನಿರ್ದೇಶನವನ್ನೂ ನೀಡಿದ್ದೇನೆ ಎಂದು ಶಿಕ್ಷಣ ಸಚಿವರು “ಉದಯವಾಣಿ’ ಜತೆ ಅಭಿಪ್ರಾಯ ಹಂಚಿಕೊಂಡರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.