9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ; ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ


Team Udayavani, Feb 2, 2022, 6:05 PM IST

9 ಗ್ರಾಮಗಳು ಉಳ್ಳಾಲಕ್ಕೆ ವರ್ಗಾವಣೆ; ಹಿರಿದಾಗಿರುವ ಬಂಟ್ವಾಳ ತಾಲೂಕು ಕಿರಿದಾಗುವ ಸರದಿ

ಬಂಟ್ವಾಳ: ಇಡೀ ಜಿಲ್ಲೆಯಲ್ಲೇ ಅತಿ ಹೆಚ್ಚು ಗ್ರಾ.ಪಂ.ಗಳನ್ನು ಒಳಗೊಂಡು ಹಿರಿದಾದ ತಾಲೂಕು ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿರುವ ಬಂಟ್ವಾಳ ತಾಲೂಕು ಇದೀಗ ಉಳ್ಳಾಲ ತಾಲೂಕು ಅಧಿಕೃತ ಘೋಷಣೆಯ ಮೂಲಕ ಕಿರಿದಾಗುತ್ತಿದೆ. ಬಂಟ್ವಾಳದ ಒಟ್ಟು 9 ಗ್ರಾಮಗಳು ಶೀಘ್ರದಲ್ಲಿ ಕೈ ತಪ್ಪಲಿದೆ.

ಬಂಟ್ವಾಳ ತಾಲೂಕು ಒಟ್ಟು 58 ಗ್ರಾ.ಪಂ.ಗಳನ್ನು ಒಳಗೊಂಡಿದ್ದು, ಅದರಲ್ಲಿ ಒಟ್ಟು 7 ಗ್ರಾ.ಪಂ.(9 ಗ್ರಾಮಗಳು) ಉಳ್ಳಾಲ ತಾಲೂಕಿಗೆ ಸೇರ್ಪಡೆಯಾಗಲಿವೆ. ಹೀಗಾಗಿ ಮುಂದೆ ಬಂಟ್ವಾಳಕ್ಕೆ ಒಟ್ಟು 51 ಗ್ರಾ.ಪಂ.ಗಳು ಉಳಿಯಲಿದ್ದು, ಆದರೂ ಜಿಲ್ಲೆಯಲ್ಲಿ ಗರಿಷ್ಠ ಗ್ರಾ.ಪಂ.ಗಳನ್ನು ಒಳಗೊಂಡಿರುವ ತಾಲೂಕು ಎಂಬ ಹೆಗ್ಗಳಿಕೆಗೆ ಧಕ್ಕೆಯಾಗುವುದಿಲ್ಲ.

ಉಳ್ಳಾಲ ತಾಲೂಕು ಈ ಹಿಂದೆಯೇ ಘೋಷಣೆಯಾಗಿದ್ದರೂ, ಬಂಟ್ವಾಳ ತಾಲೂಕಿಗೆ ಸಂಬಂಧಪಟ್ಟ ಗ್ರಾಮಗಳ ಕೆಲಸಗಳು ಬಂಟ್ವಾಳದಲ್ಲೇ ನಡೆಯುತ್ತಿದ್ದವು. ಜ. 31ರಂದು ಶಾಸಕ ಯು.ಟಿ.ಖಾದರ್‌ ಉಳ್ಳಾಲ ತಾಲೂಕು ಕಚೇರಿಯ ಪ್ರಾರಂಭಿಕ ಕೆಲಸಕ್ಕೆ ಚಾಲನೆ ನೀಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಉಳ್ಳಾಲ ತಾಲೂಕು ವ್ಯಾಪ್ತಿಯ ಜಾಗಗಳ ದಾಖಲೆಗಳನ್ನೊಳಗೊಂಡ ಭೂಮಿ ಆನ್‌ಲೈನ್‌ ಕೆಲಸ ಬಹುತೇಕ ಬಂಟ್ವಾಳದಲ್ಲಿ ಸ್ಥಗಿತಗೊಂಡಿದೆ. ಆದರೆ ಅರ್ಜಿಗಳನ್ನು ಸ್ವೀಕರಿಸುವ ಅಟಲ್‌ ಜನಸ್ನೇಹಿ ಕೇಂದ್ರ(ಎಜೆಎಸ್‌ಕೆ)ದ ಕೆಲಸಗಳು ಸದ್ಯಕ್ಕೆ ಬಂಟ್ವಾಳದಲ್ಲೇ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅದು ಕೂಡ ಉಳ್ಳಾಲಕ್ಕೆ ಶಿಫ್ಟ್‌ ಆಗಲಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ. ದ.ಕ.ಜಿಲ್ಲೆಯ ಒಟ್ಟು 8 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳು ಬಂಟ್ವಾಳದೊಂದಿಗೆ ಸಂಬಂಧವನ್ನು ಹೊಂದಿದೆ. ಈ ರೀತಿ ಜಿಲ್ಲೆಯ ಯಾವ ತಾಲೂಕುಗಳು ಕೂಡ ಮೂರು ಕ್ಷೇತ್ರಗಳಿಗೆ ಸಂಬಂಧವನ್ನು ಹೊಂದಿಲ್ಲ.

ಬಂಟ್ವಾಳದ 39 ಗ್ರಾಮ ಪಂಚಾಯತ್‌ಗಳು ಬಂಟ್ವಾಳ, 10 ಗ್ರಾ.ಪಂ.ಗಳು ಮಂಗಳೂರು ಹಾಗೂ 9 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿವೆ.

ಯಾವ ಗ್ರಾಮ ಎಲ್ಲಿಗೆ?
ಈ ತನಕ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿದ್ದ ಬಾಳೆಪುಣಿ, ಕೈರಂಗಳ, ಇರಾ, ಕುರ್ನಾಡು, ನರಿಂಗಾನ, ಫಜೀರು, ಸಜೀಪನಡು, ಸಜೀಪಪಡು ಹಾಗೂ ಚೇಳೂರು ಸೇರಿ ಒಟ್ಟು 9 ಗ್ರಾಮಗಳು ಉಳ್ಳಾಲಕ್ಕೆ ಸೇರ್ಪಡೆಯಾಗಲಿದೆ. ಇದರಲ್ಲಿ ಬಾಳೆಪುಣಿ ಹಾಗೂ ಕೈರಂಗಳ ಸೇರಿ ಒಂದು ಗ್ರಾ.ಪಂ., ಸಜೀಪಪಡು ಹಾಗೂ ಚೇಳೂರು ಸೇರಿ ಒಂದು ಗ್ರಾ.ಪಂ. ಹೀಗೆ ಒಟ್ಟು 7 ಗ್ರಾ.ಪಂ.ಗಳು ಮುಂದೆ ಬಂಟ್ವಾಳದಲ್ಲಿ ಇರುವುದಿಲ್ಲ. ಪ್ರಸ್ತುತ ಮಂಗಳೂರು ಕ್ಷೇತ್ರದ 7 ಗ್ರಾ.ಪಂ.ಗಳು ಉಳ್ಳಾಲಕ್ಕೆ ಸೇರಿದರೂ, ತುಂಬೆ, ಮೇರಮಜಲು ಹಾಗೂ ಪುದು ಈ ಮೂರು ಗ್ರಾ.ಪಂ.ಗಳು ಬಂಟ್ವಾಳದಲ್ಲೇ ಉಳಿದುಕೊಳ್ಳಲಿವೆ. ಈ ಹಿಂದೆ ಈ ಗ್ರಾ.ಪಂ.ಗಳು ಉಳ್ಳಾಲ ತಾಲೂಕಿಗೆ ಸೇರ್ಪಡೆಯ ಪ್ರಸ್ತಾವವಿದ್ದರೂ, ಸ್ಥಳೀಯರಿಂದ ವಿರೋಧಗಳು ಬಂದ ಕಾರಣ ಅದನ್ನು ಕೈ ಬಿಡಲಾಗಿತ್ತು. ಸಜೀಪನಡು ಗ್ರಾ.ಪಂ.ಉಳ್ಳಾಲ ಸೇರಲು ವಿರೋಧ ವ್ಯಕ್ತಪಡಿಸಿದರೂ, ಅದು ಮಾತ್ರ ಉಳ್ಳಾಲಕ್ಕೆ ಸೇರಿದೆ.

ಹಂತ ಹಂತವಾಗಿ ಶಿಫ್ಟ್‌
ಉಳ್ಳಾಲ ತಾಲೂಕಿಗೆ ಸಂಬಂಧಿಸಿ ಬಂಟ್ವಾಳದ ಗ್ರಾಮಗಳಲ್ಲಿ ಪ್ರಸ್ತುತ ಕಂದಾಯ ಇಲಾಖೆಯ ಭೂಮಿಯ ಕೆಲವು ಕೆಲಸಗಳು ಸ್ಥಗಿತ ಗೊಂಡಿದ್ದು, ಸದ್ಯಕ್ಕೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಬಂಟ್ವಾಳದಲ್ಲೇ ನಡೆಯುತ್ತಿದೆ. ಮುಂದೆ ಹಂತ ಹಂತವಾಗಿ ಅದು ಉಳ್ಳಾಲಕ್ಕೆ ಶಿಫ್ಟ್‌ ಆಗುತ್ತದೆ. ಮುಂದಿನ ದಿನಗಳಲ್ಲಿ ಅಲ್ಲಿನ ಕೆಲಸಗಳನ್ನು ಇಲ್ಲಿ ಆಕ್ಸಸ್‌ ಮಾಡುವುದಕ್ಕೂ ಆಗದಂತೆ ವರ್ಗಾಯಿಸುವ ಪ್ರಕ್ರಿಯೆ ನಡೆಯಲಿದೆ.
-ರಶ್ಮಿ ಎಸ್‌.ಆರ್‌., ತಹಶೀಲ್ದಾರ್‌, ಬಂಟ್ವಾಳ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.