ಈಡೇರುತ್ತಿರುವ ಒಂದೂವರೆ ದಶಕದ ಬೇಡಿಕೆ: ಸೇತುವೆ ಕಾಮಗಾರಿ ಪ್ರಗತಿಯಲ್ಲಿ
Team Udayavani, May 22, 2023, 3:05 PM IST
ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮಗಳನ್ನು ಜೋಡಿಸುವ ಹಲವು ವರ್ಷಗಳ ಬೇಡಿಕೆಯಾಗಿರುವ ಚೆನ್ನಾವರ-ಕುಂಡಡ್ಕ ಸೇತುವೆಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಕುಂಡಡ್ಕದಲ್ಲಿ ಗೌರಿ ಹೊಳೆಗೆ ನಿರ್ಮಿಸಿದ ಸೇತುವೆಯೊಂದು ತೀರಾ ಶಿಥಿಲಾವಸ್ಥೆಗೆ ತಲುಪಿ, ಕುಸಿಯುವ ಹಂತದಲ್ಲಿತ್ತು. ಇದರಿಂದಾಗಿ ಈ ಭಾಗದ ಜನರು ಸಂಪರ್ಕ ಕಡಿತದ ಭೀತಿಯಲ್ಲಿಯೇ ದಿನಕಳೆಯುತ್ತಿದ್ದರು.
ಈ ಸೇತುವೆಯ ಪಿಲ್ಲರ್ ಶಿಥಿಲವಾಗಿ ದ್ದಲ್ಲದೆ ಅಗಲ ಕಿರಿದಾದ ಈ ಸೇತುವೆಯಲ್ಲಿ ಲಘು ವಾಹನಗಳು ಮಾತ್ರ ಹೋಗುವ ಹಾಗೆ ಇತ್ತು.
ಈ ಸೇತುವೆಯು ಸುಳ್ಯ ವಿಧಾನಸಭೆ ಕ್ಷೇತ್ರಕ್ಕೊಳಪಟ್ಟಿದೆ. ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು, ಕಾಣಿಯೂರು, ಪೆರುವಾಜೆಗೆ ಹೋಗಲು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ತೆರಳಬೇಕಾದ ಸಂದಿಗ್ಧತೆಯಿತ್ತು.
ಇಲ್ಲಿ ನೂತನ ಸೇತುವೆ ನಿರ್ಮಿಸುವಂತೆ ಈ ಭಾಗದ ಜನತೆ ಹಾಗೂ ಸಂಘ ಸಂಸ್ಥೆಗಳು ಕಳೆದ 15 ವರ್ಷಗಳಿಂದ ಜನಪ್ರತಿನಿಧಿಗಳಿಗೆ ,ಅಧಿಕಾರಿಗಳಿಗೆ ಮನವಿ ಮಾಡುತ್ತಲೇ ಬಂದಿದ್ದರೂ ಸೇತುವೆ ನಿರ್ಮಾಣದ ಭರವಸೆ ಈಡೇರಿದ್ದು ಮಾತ್ರ 2022ರಲ್ಲಿ. 2023 ಫೆಬ್ರವರಿಯಲ್ಲಿ ಕಾಮಗಾರಿ ಆರಂಭಗೊಂಡಿದೆ. ಇದೀಗ ಕಾಮಗಾರಿ ಪ್ರಗತಿಯಲ್ಲಿದೆ.
ಸಂಸದ ನಳಿನ್ಕುಮಾರ್ಕಟೀಲು ಅವರು ಚೆನ್ನಾವರ-ಕುಂಡಡ್ಕ ಸೇತುವೆ ನಿರ್ಮಾಣಕ್ಕೆ ಹಾಗೂ ಸಂಪರ್ಕ ರಸ್ತೆಯ ಅಭಿವೃದ್ಧಿಗಾಗಿ ಬಿಜೆಪಿ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಸಿ.ಸಿ. ಪಾಟೀಲ್ ಅವರಿಗೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಸಚಿವ ಅಂಗಾರ ಅವರೂ ಅನುದಾನ ನೀಡುವಂತೆ ಮನವಿ ಮಾಡಿದ್ದರು.
ಇವರ ಕೋರಿಕೆಯಂತೆ ರಸ್ತೆ ಹಾಗೂ ಸೇತುವೆ ಅಭಿವೃದ್ಧಿಗಾಗಿ ಲೋಕೋಪ ಯೋಗಿ ಇಲಾಖೆಯ ಮೂಲಕ 4.5 ಕೋಟಿ ರೂ. ಅನುದಾನ ಬಿಡುಗಡೆಗೊಂಡಿತ್ತು.
ತಾರಿಪಡ್ಪುವಿನಿಂದ ಚೆನ್ನಾವರದವರೆಗೆ ರಸ್ತೆ ಅಭಿವೃದ್ಧಿಯಾಗಿದೆ. ಚೆನ್ನಾವರ- ಕುಂಡಡ್ಕ ಸಂಪರ್ಕ ಸೇತುವೆಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಯಾರಿಗೆ ಪ್ರಯೋಜನ
ಈ ಸೇತುವೆ ನಿರ್ಮಾಣದಿಂದ ಚೆನ್ನಾವರ ಕಿ.ಪ್ರಾ. ಶಾಲೆ, ಮುಕ್ಕೂರು ಹಿ.ಪ್ರಾ. ಶಾಲೆ, ಸವಣೂರು, ಪೆರುವಾಜೆ, ಬೆಳಂದೂರು ಕಾಲೇಜುಗಳಿಗೆ ಹೋಗುವವರಿಗೆ ಅನು ಕೂಲವಾಗಿದೆ. ಅಲ್ಲದೆ ಪಾಲ್ತಾಡಿ ನಿಂದ ಸವಣೂರು, ಪೆರುವಾಜೆ ಹೋಗುವ ವರಿಗೂ ಅನುಕೂಲವಾಗಿದೆ.
ತಾರಿಪಡು³-ಚೆನ್ನಾವರ ರಸ್ತೆ ಅಭಿವೃದ್ಧಿ ಹಾಗೂ ಚೆನ್ನಾವರ-ಕುಂಡಡ್ಕ ಸೇತುವೆ ನಿರ್ಮಾಣ ಕುರಿತಂತೆ ಹಲವು ವರ್ಷಗಳ ಬೇಡಿಕೆ ಈಡೇರುವ ಮೂಲಕ 15 ವರ್ಷಗಳ ಬೇಡಿಕೆ ಈಡೇರಿದೆ.
-ಪುಟ್ಟಣ್ಣ ನಾಯ್ಕ,ಅಧ್ಯಕ್ಷರು, ಅಭ್ಯುದಯ ಯುವಕ ಮಂಡಲ ಚೆನ್ನಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್