ಅಶಕ್ತರ ನೆರವಿಗೆ ಬಾಟಲ್‌ ನೀರು ಮಾರುವ ಯುವಕರ ತಂಡ

ನಾಲ್ಕು ಕಡೆ ಯಶಸ್ವಿಯಾದ ರಾಜಕೇಸರಿ | ಇಂದು ಬಿ.ಸಿ. ರೋಡ್‌ನ‌ಲ್ಲಿ ನೀರು ಮಾರಾಟ

Team Udayavani, Dec 15, 2019, 5:32 AM IST

zx-16

ಬಂಟ್ವಾಳ: ಬೆಳ್ತಂಗಡಿ ತಾ|ನಲ್ಲಿ ಹುಟ್ಟಿಕೊಂಡಿರುವ ರಾಜಕೇಸರಿ ಸಂಘಟನೆ ಕುಡಿಯುವ ನೀರಿನ ಬಾಟಲ್‌(ಮಿನರಲ್‌ ವಾಟರ್‌) ಮಾರಾಟ ಮಾಡಿ, ಲಾಭಾಂಶವನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ. ಈಗಾಗಲೇ 4 ಕಡೆಗಳಲ್ಲಿ ಮಿನರಲ್‌ ವಾಟರ್‌ ಮಾರಾಟ ಮಾಡಿ ಯಶಸ್ವಿಯಾ ಗಿದೆ. 5ನೇ ಕಾರ್ಯಕ್ರಮವಾಗಿ ಬಾಲಕಿಗೆ ನೆರವಾಗಲು ಡಿ. 15ರಂದು ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಮಿನರಲ್‌ ವಾಟರ್‌ ಮಾರಾಟ ಮಾಡಲಿದೆ. ಸಂಘಟನೆ ನೀರು ಮಾರಾಟ ಮಾಡಿ ಬಂದ ಆದಾಯವನ್ನು ರೋಗಿಗಳಿಗೆ ನೀಡಿ ಚಿಕಿತ್ಸೆಗೆ ನೆರವಾಗುತ್ತಿದೆ.

4 ಕಡೆ ಯಶಸ್ವಿ ಕಾರ್ಯ
ರಾಜಕೇಸರಿ ಸಂಘಟನೆ ಪ್ರಥಮ ಬಾರಿಗೆ ಬೆಳ್ತಂಗಡಿಯಲ್ಲಿ ಈ ಕಾರ್ಯ ಮಾಡಿದ್ದು, ಮುಂಡಾಜೆಯ ಬಾಲಕಿ ಯೊಬ್ಬಳಿಗೆ 40 ಸಾವಿರ ರೂ. ನೆರವು ನೀಡಿದೆ. 2ನೇ ಹಂತದಲ್ಲಿ ಉಡುಪಿ ಸರ್ವೀಸ್‌ ಬಸ್‌ ನಿಲ್ದಾಣದಲ್ಲಿ ಈ ಕಾರ್ಯ ಮಾಡಿದ್ದು, ಕಣ್ಣು ಕಾಣದ ವ್ಯಕ್ತಿ, ಅಪಘಾತದ ಗಾಯಾಳು, ಕ್ಯಾನ್ಸರ್‌ ಪೀಡಿತ ವ್ಯಕ್ತಿಗೆ ತಲಾ 20 ಸಾವಿರ ರೂ. (ಒಟ್ಟು 60 ಸಾ. ರೂ.) ನೆರವು ನೀಡಿದೆ. 3ನೇ ಹಂತದಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಈ ಕಾರ್ಯ ಮಾಡಿದ್ದು, ಒಟ್ಟು 44,444 ರೂ.ಗಳನ್ನು ಪಣಪಿಲ ಗ್ರಾಮದ 3 ವರ್ಷ ಪ್ರಾಯದ ಮಗುವಿನ ಚರ್ಮ ರೋಗದ ಚಿಕಿತ್ಸೆಗೆ ನೆರವಾಗಿದೆ. ಬಳಿಕ 4ನೇ ಹಂತದಲ್ಲಿ ಬೆಳ್ತಂಗಡಿಯಲ್ಲಿ ಮತ್ತೆ ಈ ಕಾರ್ಯ ಮಾಡಿ, ಕಡಿರುದ್ಯಾವರ ಗ್ರಾಮದ ನಿವಾಸಿಯೊಬ್ಬರಿಗೆ 20 ಸಾವಿರ ರೂ.ಗಳನ್ನು ನೆರವಿನ ರೂಪದಲ್ಲಿ ನೀಡಿದೆ.

ಬಾಲಕಿಗೆ ನೆರವು
ಡಿ. 15ರಂದು ಬಿ.ಸಿ. ರೋಡ್‌ನ‌ಲ್ಲಿ ರಾಜಕೇಸರಿ ದ.ಕ. ಜಿಲ್ಲಾ ಘಟಕ, ಬಂಟ್ವಾಳ ತಾ|ನ ನೆಲ್ಲಿಗುಡ್ಡೆ ಬಸವನಬೈಲು ಘಟಕದ ಸಹಯೋಗದೊಂದಿಗೆ ರಾಜ ಕೇಸರಿಯ ಸಂಸ್ಥಾಪಕ ದೀಪಕ್‌ ಜಿ. ಮುಂದಾಳತ್ವದಲ್ಲಿ ಘಟಕದ ಅಧ್ಯಕ್ಷ ಪ್ರದೀಪ್‌ ಪೂಜಾರಿ, ಸಂಚಾಲಕ ಸಂದೇಶ್‌ ಶೆಟ್ಟಿ ನೇತೃತ್ವದಲ್ಲಿ ಬಾಟಲ್‌ ನೀರು ಮಾರಾಟ ಮಾಡಲಿದೆ.

ಬಂಟ್ವಾಳ ತಾ|ನ ರುಕ್ಮಯ್ಯ ನಾಯ್ಕ ಅವರ ಪುತ್ರಿ ಚೈತ್ರಾ ಅನಾರೋಗ್ಯದಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗಲು ಬಿ.ಸಿ. ರೋಡ್‌ ಬಸ್‌ ನಿಲ್ದಾಣದಲ್ಲಿ ಈ ಕಾರ್ಯ ಮಾಡಲಿದೆ. ಸುಮಾರು 40 ಮಂದಿ ಯುವಕರು ಪಾಲ್ಗೊಳ್ಳಲಿದ್ದು, 30 ಸಾವಿರ ರೂ. ನೆರವಾಗುವ ಉದ್ದೇಶವಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

ಅರ್ಧ ಲೀಟರ್‌ ಬಾಟಲ್‌
ಸಂಘಟನೆ ಪ್ರತಿಯೊಂದು ಕಡೆಯೂ ಅರ್ಧ ಲೀ. ನೀರಿನ ಬಾಟಲ್‌ ಮಾರಾಟ ಮಾಡಿದ್ದು, ಬಾಟಲ್‌ಗ‌ಳನ್ನು ರಖಂ ದರದಲ್ಲಿ ಪಡೆದು ಬಳಿಕ ಅದನ್ನು 10 ರೂ.ಗಳಿಗೆ ಮಾರಾಟ ಮಾಡುತ್ತದೆ. ಖರ್ಚನ್ನು ಕಳೆದು ಉಳಿಕೆ ಹಣದಲ್ಲಿ ನೆರವಿನ ಕಾರ್ಯ ಮಾಡುತ್ತದೆ.

ಉತ್ತಮ ಬೆಂಬಲ
ಬಾಟಲ್‌ ನೀರು ಮಾರಿ ಅಶಕ್ತರಿಗೆ ನೆರವಾಗುವ ಕಾರ್ಯವನ್ನು ನಮ್ಮ ಸಂಘಟನೆ ಮಾಡುತ್ತಿದ್ದು, ಈಗಾಗಲೇ 4 ಕಡೆಗಳಲ್ಲಿ ಯಶಸ್ವಿಯಾಗಿದ್ದೇವೆ. ನಮ್ಮ ಉದ್ದೇಶವನ್ನು ತಿಳಿಸಿ ಜನರ ಬಳಿ ಹೋದಾಗ ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ.
 - ದೀಪಕ್‌ ಜಿ. ರಾಜಕೇಸರಿ ಸಂಘಟನೆ ಸಂಸ್ಥಾಪಕರು

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.