ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

 ಇಂದಬೆಟ್ಟು-ಗುರಿಪಳ್ಳ ಕ್ರಾಸ್‌ ರಸ್ತೆ ಉದ್ಘಾಟನೆಗೆ ಸಿದ್ಧ

Team Udayavani, Oct 20, 2021, 5:10 AM IST

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

ಬೆಳ್ತಂಗಡಿ: ಉಜಿರೆ -ಚಾರ್ಮಾಡಿ ರಸ್ತೆಯ ಕಲ್ಮಂಜ ಗ್ರಾಮದ ತಾಕೋಟೆ ಕಟ್ಟೆ ಸಮೀಪ ಗುರಿಪಳ್ಳ-ಕನ್ಯಾಡಿ- ಇಂದಬೆಟ್ಟು-ನಡ ಮೊದಲಾದ ಪ್ರದೇಶಗಳಿಗೆ ಬಹುಮುಖ್ಯ ಸಂಪರ್ಕ ರಸ್ತೆಯಾಗಿದ್ದರೂ ಆರಂಭದ 100 ಮೀಟರ್‌ ಖಾಸಗಿ ಭೂಮಿಯಾಗಿದ್ದರಿಂದ ಅಭಿವೃದ್ಧಿ ತೊಡಕಾಗಿತ್ತು. ಆದರೆ ಇದೀಗ ಶಾಸಕ ಹರೀಶ್‌ ಪೂಂಜ ಹಾಗೂ ಸ್ಥಳೀಯರ ಮುತುವರ್ಜಿಯಿಂದ ಕಾಂಕ್ರೀಟ್‌ ರಸ್ತೆ ಪೂರ್ಣಗೊಂಡು ಉದ್ಘಾಟನೆಗೆ ಸಜ್ಜಾಗಿದೆ.

ಮುಖ್ಯರಸ್ತೆಯಿಂದ ಗುರಿಪಳ್ಳ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶತಮಾನದ ಬೇಡಿಕೆಯಾಗಿತ್ತು. ರಸ್ತೆ ವ್ಯವಸ್ಥೆ ಇಲ್ಲದೆ ಈ ಭಾಗದ ಸಾವಿರಾರು ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದರು. ಈ ಕುರಿತು ಅನೇಕ ಶಾಸಕರು ರಸ್ತೆ ನಿರ್ಮಾಣಕ್ಕೆ ಹಲವು ವರ್ಷಗಳಿಂದ ಪ್ರಯತ್ನಿಸಿದ್ದರು. ಆದರೆ ರಸ್ತೆಯ ಆರಂಭದ ಭಾಗ ಮುಂಡಾಜೆಯ ಗುಂಡಿ ಮನೆತನದ ಕಿರಣ್‌ ಖಾಡಿಲ್ಕರ್‌ ಅವರ ಪಟ್ಟಾ ಸ್ಥಳವಾಗಿತ್ತು. ಹೀಗಾಗಿ ಇತ್ತೀಚೆಗೆ ಶಾಸಕ ಹರೀಶ್‌ ಪೂಂಜ, ಬಿಜೆಪಿ ರೈತಮೋರ್ಚ ತಾಲೂಕು ಅಧ್ಯಕ್ಷ ಜಯಂತ ಗೌಡ ಗುರಿಪಳ್ಳ ಮತ್ತಿತರರು ಮಾತುಕತೆ ನಡೆಸಿದ್ದರು. ಇದರ ಫಲವಾಗಿ ಮಾಲಕರು ಕೆಲ ಷರತ್ತಿನ ಮೇರೆಗೆ ಅಭಿವೃದ್ಧಿಗೆ ಒಪ್ಪಿಗೆ ಸೂಚಿಸಿದ್ದರು.

ಇದನ್ನೂ ಓದಿ:ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಅ.2ರಂದು ರಸ್ತೆಗೆ ಶಾಸಕ ಹರೀಶ್‌ ಪೂಂಜ, ಜಾಗದ ಮಾಲಕ ಕಿರಣ್‌ ಖಾಡಿಲ್ಕರ್‌ ಶಿಲಾನ್ಯಾಸ ನೆರವೇರಿಸಿ ಕಾಮಗಾರಿ ಆರಂಭವಾಗಿತ್ತು. ಹತ್ತು ದಿನಗಳೊಳಗೆ ಕಾಮಗಾರಿ ಪೂರ್ಣಗೊಂಡಿದೆ. ಶತಮಾನದ ಕನಸಾಗಿದ್ದ ರಸ್ತೆ ಕಾಮಗಾರಿಗೆ ಊರವರು ಹೆಚ್ಚಿನ ಉತ್ಸಾಹ ತೋರಿದ್ದರಲ್ಲದೆ ಶಿಲಾನ್ಯಾಸಕ್ಕೆ ನೂರಾರು ಜನ ಭಾಗವಹಿಸಿದ್ದರು. ಸ್ಥಳೀಯರು, ಜನಪ್ರತಿನಿಧಿಗಳು ಕಾಮಗಾರಿ ಸಂಪೂರ್ಣ ಸಹಕಾರ ನೀಡಿದ್ದಾರೆ.

ಅ.31ರಂದು ಉದ್ಘಾಟನೆ
ಗ್ರಾಮಸ್ಥರ ಅನೇಕ ದಶಕಗಳ ಕನಸು ಜಾಗದ ಮಾಲಕ ಕಿರಣ್‌ ಖಾಡಿಲ್ಕರ್‌ ಸಹಕಾರದಲ್ಲಿ ಸಾಕಾರಗೊಂಡಿದೆ. 12 ಅಡಿ ಅಗಲದ 140 ಮೀಟರ್‌ ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ. ಸುಸಜ್ಜಿತ ರಸ್ತೆಯಿಂದ ಇಂದಬೆಟ್ಟು, ಗುರಿಪಳ್ಳ, ಕನ್ಯಾಡಿ ಸುತ್ತಮುತ್ತ ಮಂದಿಗೆ ಅನುಕೂಲ ಕಲ್ಪಿಸಿದಂತಾಗಿದೆ.
-ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.