ಮುಸ್ಲಿಂ ಯುವಕನಿಂದ ಕಾಳಿ ಮಾತೆಯ ಆರಾಧನೆ : ಸಾಮರಸ್ಯ ಸಾರುತ್ತಿದ್ದಾನೆ ರಮ್ಲಾನ್


Team Udayavani, Apr 14, 2021, 5:54 PM IST

fgef

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಎಂದಾಕ್ಷಣ ಕೆಲವರಿಗೆ ನೆನಪಾಗುವುದು ಕೋಮು ದಳ್ಳುರಿ, ಪರಸ್ಪರ ದ್ವೇಷ, ಜಾತಿಯಾಧಾರಿತ ಗಲಭೆ. ಆದರೆ, ಧಾರ್ಮಿಕವಾಗಿ ಪ್ರಾಮುಖ್ಯತೆ ಹೊಂದಿರುವ ಈ ಜಿಲ್ಲೆಯ ಕೆಲವು ಕಡೆ ಕೋಮು ಸಾಮರಸ್ಯ ಮೇಳೈಸುವ ಘಟನೆಗಳು ನಡೆಯುತ್ತಿರುತ್ತದೆ. ಇದಕ್ಕೆ ಜೀವಂತ ಸಾಕ್ಷಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಸವಣಾಲು ಗ್ರಾಮ.

ಹೌದು, ಸವಣಾಲಿನದಲ್ಲಿರುವ ಇತಿಹಾಸ ಪ್ರಸಿದ್ಧ ಕಾಳಿಕಾಬೆಟ್ಟದ ಶ್ರೀ ದುರ್ಗಾ ಕಾಳಿಕಾಂಬ ಕ್ಷೇತ್ರದಲ್ಲಿ ಕಾಳಿಕಾಂಬೆಯ ಸ್ಥುತಿಯನ್ನು ಅದೇ ಗ್ರಾಮದ ಮುಸ್ಲಿಂ ಸಮುದಾಯದ ರಮ್ಲಾನ್ ರಚಿಸಿ, ಗಾಯನ ಮಾಡಿ ಕಾಳಿಕಾಂಬೆಗೆ ಅರ್ಪಣೆ ಮಾಡಿದ್ದಾನೆ.

ಕಾಳಿಕಾಂಬ ದೇಗುಲದ ಪಕ್ಕದಲ್ಲೇ ವಾಸವಾಗಿರುವ ರಮ್ಲಾನ್ ಕಾಳಿಕಾಮಾತೆಯ ಪರಮ ಭಕ್ತ. ಶ್ರೀ ದುರ್ಗಾ ಕಾಳಿಕಾಂಬ ಕ್ಷೇತ್ರದ ಪ್ರತಿಯೊಂದು ಕಾರ್ಯಕ್ರಮದಲ್ಲೂ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ ಸಾಮರಸ್ಯ ಸಾರುತ್ತಿದ್ದಾನೆ.‌ ಮುಸಲ್ಮಾನನಾದರೂ ದುರ್ಗೆಯ ಆರಾಧನೆಯನ್ನು ಮುಕ್ತ ಮನಸ್ಸಿನಿಂದ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾನೆ.

‘ಮಹಿಮೆದ ಕಾರಣಿಕ ಕ್ಷೇತ್ರ ಕಾಳಿಕಾಬೆಟ್ಟ’ ಎಂಬ ಭಕ್ತಿಗೀತೆ ರಮ್ಲಾನ್ ಸುಂದರ ಕಂಠದಲ್ಲಿ ಸುಶ್ರಾವ್ಯವಾಗಿ ಮೂಡಿ ಬಂದಿದೆ. ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿರುವ ಈತ ಹೇಳಿರುವ ದುರ್ಗೆಯ ಕುರಿತಾದ ಗೀತೆಯನ್ನು ಎಸ್.ಕೆ.ಕ್ರಿಯೇಷನ್ ಎಂಬ ಯೂಟ್ಯೂಬ್ ಪೇಜ್ ನಲ್ಲಿ ನೋಡಬಹುದಾಗಿದೆ.

ಇನ್ನು ಸವಣಾಲಿನ ಶ್ರೀ ಕಾಳಿಕಾಂಬ ಕ್ಷೇತ್ರ 1200 ವರ್ಷಗಳ ಇತಿಹಾಸವುಳ್ಳ ಪುಣ್ಯ ಪ್ರಸಿದ್ಧ ಕ್ಷೇತ್ರ. ಸುತ್ತಲೂ ಕಾಡಿನಿಂದ ಆವೃತ್ತವಾದ ನೈಸರ್ಗಿಕವಾಗಿ ಅದ್ಭುತ ಸೌಂದರ್ಯ ಹೊಂದಿದೆ. ದುರ್ಗಾ ದೇವತೆ, ಕಾಳಿಕಾಂಬ ದೇವತೆಯನ್ನು ಇಲ್ಲಿ ಪ್ರಧಾನವಾಗಿ ಪೂಜಿಸಲಾಗುತ್ತದೆ. ಅಲ್ಲದೆ ಗಣಪತಿ, ಶ್ರೀಧರ ಸ್ವಾಮಿ, ಶಿವ ದಕ್ಷಿಣ ಮೂರ್ತಿ, ರಣಗುಲಿಗ, ಶ್ರೀ ನಾಗರಾಜ, ಭೈರವರನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಇದೆ ಕಾರಣಿಕ ದೇವಸ್ಥಾನದೆಡೆಗೆ ರಮ್ಲಾನ್ ಅಪಾರ ಭಕ್ತಿಯಿಟ್ಟು ಈ ಗಾಯನ ಸ್ತುತಿಸಿ ಸಾಮರಸ್ಯಕ್ಕೊಂದು ಅಪರೂಪದ ಮೆರುಗು ತಂದಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.