Bantwal ನಾವೂರಿನ ಪೊಯ್ಲೋಡಿ: ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ
Team Udayavani, Nov 26, 2023, 8:53 PM IST
ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ನಾವೂರು ಗ್ರಾಮದ ಪೊಯ್ಲೋಡಿಯಲ್ಲಿ ಹೆದ್ದಾರಿ ಬದಿ ನಿಂತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದು ವ್ಯಕ್ತಿಯ ಜತೆಗೆ ಬೈಕ್ ಸವಾರ ಗಾಯಗೊಂಡ ಘಟನೆ ಘಟನೆ ನ. 24ರ ರಾತ್ರಿ ನಡೆದಿದೆ.
ಘಟನೆಯಲ್ಲಿ ನಾವೂರು ಗ್ರಾಮ ನಿವಾಸಿ ರವಿ ಹಾಗೂ ಸ್ಕೂಟರ್ ಸವಾರ ಪ್ರಥಮ್ ಗಾಯಗೊಂಡವರು. ಗಂಭೀರ ಗಾಯಗೊಂಡಿರುವ ರವಿ ಅವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ರವಿ ಅವರ ಅಣ್ಣ ಬೇಬಿ ಸುವರ್ಣ ಈ ಕುರಿತು ದೂರು ನೀಡಿದ್ದು, ಸವಾರ ಪ್ರಥಮ್ ಅವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.