ಅಚ್ಚರಿ ಮೂಡಿಸಿದ ಘಟನೆ; ಸಂಗಮ ಕ್ಷೇತ್ರ ಪಜಿರಡ್ಕಕ್ಕೆ ಬಂದ ಬಸವ

ಯಾರಿಗೂ ಯಾವುದೇ ತೊಂದರೆ ನೀಡಿಲ್ಲ ಮತ್ತು ಇದರ ವಾರಸುದಾರರು ಯಾರೆಂದು ತಿಳಿಯಲ್ಪಟ್ಟಿಲ್ಲ.

Team Udayavani, Jan 17, 2023, 3:08 PM IST

ಅಚ್ಚರಿ ಮೂಡಿಸಿದ ಘಟನೆ; ಸಂಗಮ ಕ್ಷೇತ್ರ ಪಜಿರಡ್ಕಕ್ಕೆ ಬಂದ ಬಸವ

ಬೆಳ್ತಂಗಡಿ: ಕಲ್ಮಂಜ ಗ್ರಾಮಕ್ಕೆ ಒಳಪಟ್ಟ ಇತಿಹಾಸ ಪ್ರಸಿದ್ಧ ಮಾಗಣೆ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕ ಬ್ರಹ್ಮಕಲಶೋತ್ಸವ ದಿನ ನಿಗದಿಯಾಗುತ್ತಿದ್ದಂತೆ ಕ್ಷೇತ್ರಕ್ಕೆ ಬಸವನ ಆಗಮನವಾಗಿರುವುದು ಅಚ್ಚರಿ ಮೂಡಿಸಿದೆ.

ಜ. 31ರಿಂದ ಫೆ. 6ರ ವರೆಗೆ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್‌ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ನಿಗದಿಯಾಗಿದೆ. ಎಲ್ಲೆಡೆ ಸಿದ್ಧತೆಗಳು ನಡೆಯುತ್ತಿರುವಾಗಲೇ ಪಜಿರಡ್ಕ ದೇವಸ್ಥಾನಕ್ಕೆ ಹತ್ತಿರದ ಪ್ರದೇಶಗಳಲ್ಲಿ ಈವರೆಗೆ ಕಂಡಿರದ ವಾರಸುದಾರರಿಲ್ಲದ ಬಸವ ರಾತ್ರಿ ಹೊತ್ತು ಓಡಾಡುವುದು ಗೋಚರಿಸಿದೆ.

ಸುಮಾರು ಎರಡು-ಮೂರು ತಿಂಗಳಿನಿಂದ ಬಸವ ಊರಿನಲ್ಲಿ ಓಡಾಟ ನಡೆಸುತ್ತಿದ್ದರೂ, ಯಾರಿಗೂ ಈ ಬಗ್ಗೆ ಗೋಚರಕ್ಕೆ ಬಂದಿರಲಿಲ್ಲ. ಆದರೆ ಬ್ರಹ್ಮಕಲಶೋತ್ಸವ ಸಮೀಪಿಸುತ್ತಿರುವಂತೆ ದೇವಸ್ಥಾನದ ಸುತ್ತಮುತ್ತ ಮನೆಗಳಿಗೆ ಹೋಗಿ ಅಲ್ಲಿ ಹುಲ್ಲು ಆಹಾರ ಸೇವಿಸುತ್ತಾ ಸುತ್ತಾಡುತ್ತಿದೆ. ಆದರೆ ಈವರೆಗೆ ಇದು ಯಾರಿಗೂ ಯಾವುದೇ ತೊಂದರೆ ನೀಡಿಲ್ಲ ಮತ್ತು ಇದರ ವಾರಸುದಾರರು ಯಾರೆಂದು ತಿಳಿಯಲ್ಪಟ್ಟಿಲ್ಲ. ಇದೀಗ ಅದಕ್ಕೆ ನಂದಿ ಎಂದು ಭಕ್ತರು ಹೆಸರು ಇರಿಸಿದ್ದಾರೆ.

100 ವರ್ಷಗಳ ಹಿಂದೆ ಸಂಭವಿಸಿತ್ತು ಪ್ರವಾಹ
ಸಂಗಮ ಕ್ಷೇತ್ರ ಪಜಿರಡ್ಕಕ್ಕೆ 800 ವರ್ಷಗಳ ಇತಿಹಾಸವಿದೆ. ಇದು ನೇತ್ರಾವತಿ ಮತ್ತು ಮೃತ್ಯುಂಜಯ ನದಿ ಸಂಗಮ ಕ್ಷೇತ್ರವಾಗಿದೆ. ಹಿಂದೆ ಕ್ಷೇತ್ರದಲ್ಲಿ ಬಸವ ಉತ್ಸವ ರಥೋತ್ಸವಗಳು ನಡೆಯುತ್ತಿತ್ತಂತೆ. ಆದರೆ 1923ರಲ್ಲಿ ಪ್ರವಾಹ ಸಂಭವಿಸಿ ಕ್ಷೇತ್ರದ ರಥ ಸೇರಿದಂತೆ ಬಹುತೇಕ ಸೊತ್ತುಗಳು ನೀರಿನಲ್ಲಿ ಕೊಚ್ಚಿಹೋಗಿದ್ದವು ಎಂಬ ಉಲ್ಲೇಖವಿದೆ. ಬಳಿಕ ರಥೋತ್ಸವ ನಿಂತು ಹೋಗಿತ್ತಂತೆ. 2019ರಲ್ಲಿ ಮತ್ತೆ ದೇವಸ್ಥಾನ ಪ್ರವಾಹಕ್ಕೆ ತುತ್ತಾಗಿತ್ತು. ಮೊದಲನೆಯ ಪ್ರವಾಹ ಸಂಭವಿಸಿ ಪ್ರಸಕ್ತ 100 ವರ್ಷದ ಬಳಿಕ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿರುವ ಸಂದರ್ಭ ಬಸವ ಕಂಡುಬಂದಿರುವುದು ಕಾಕತಾಳೀಯ ಎಂಬಂತಾಗಿದೆ.

ಅಚ್ಚರಿ ಮೂಡಿಸಿದ ಘಟನೆ
ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಇಂತಹದ್ದೊಂದು ವಿಶೇಷ ನಡೆದಿದ್ದು ಕುತೂಹಲ ಮೂಡಿಸಿದೆ. ಈ ಬಸವ ಯಾರಿಗೂ ತೊಂದರೆ ಮಾಡುತ್ತಿಲ್ಲ. ಆದರೆ ಎಲ್ಲಿಂದ ಬಂದಿದೆ ಎಂಬುದು ತಿಳಿದಿಲ್ಲ. ಬ್ರಹ್ಮಕಲಶೋತ್ಸವ ಸಂದರ್ಭ ಈ ಘಟನೆ ಊರಿನ ಮಂದಿಗೆ ಅಚ್ಚರಿ ಮೂಡಿಸಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ತುಕರಾಮ್‌ ಸಾಲ್ಯಾನ್‌ ಉದಯವಾಣಿ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.