ಚಾರ್ಮಾಡಿ ಮತಗಟ್ಟೆ ಮುಂಭಾಗ ತಡರಾತ್ರಿ ಉದ್ವಿಗ್ನ ಪರಿಸ್ಥಿತಿ, ಲಾಠಿ ಚಾರ್ಜ್

ಅಧಿಕಾರಿಗಳ ವಿಳಂಬ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ಕಾರ್ಯಕರ್ತರು

Team Udayavani, May 11, 2023, 9:44 AM IST

tdy-4

ಬೆಳ್ತಂಗಡಿ: ಎಲ್ಲೆಡೆ ಶಾಂತ ಮತದಾನ ನಡೆಯಬೇಕೆಂಬ ಚುನಾವಣಾ ಆಯೋಗದ ಯೋಚನೆ ಉಲ್ಟಾ ಹೊಡೆದಿದ್ದು, ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮತಗಟ್ಟೆಯಲ್ಲಿ ಅಧಿಕಾರಿಗಳು ಮತದಾನ ಪ್ರಕ್ರಿಯೆಯಲ್ಲಿ ವಿಳಂಬವಾಗಿದ್ದನ್ನು ಪ್ರಶ್ನಿಸಿದ ಘಟನೆ ನಡೆದಿದ್ದು, ಜನ ನಿಯಂತ್ರಿಸಲು ಬುಧವಾರ ತಡರಾತ್ರಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ನಡೆದಿದೆ.

ಚಾರ್ಮಾಡಿ ಚೆಕ್ ಪೋಸ್ಟ್ ಸಮೀಪವಿರುವ ಮತಗಟ್ಟೆ ಸಂಖ್ಯೆ 21, 22, 23 ರಲ್ಲಿ ರಾತ್ರಿ 8.30 ಆದರೂ ಮತದಾನವಾಗಿರಲಿಲ್ಲ. ಬಳಿಕ ಮತದಾನ ಪ್ರಕ್ರಿಯೆ ಪೂರ್ಣಗೊಂಡರೂ ಅಧಿಕಾರಿಗಳು ಮತಗಟ್ಟೆ ಒಳಗೆ ಎರಡು ತಾಸು ವಿಳಂಬ ಮಾಡಿರುವುದನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿ ಅಧಿಕಾರಿಗಳು ಹೊರಡುವ ವೇಳೆ ತಡೆದರು. ಇದರಿಂದ ಪರಿಸ್ಥಿತಿ ಹದಗೆಟ್ಟಿತ್ತು. ಬಳಿಕ ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಯಿತು. ರಾತ್ರಿ ಸುಮಾರು 11.30 ಗಂಟೆಯಾದರು ಇವಿಎಂ ಮತಯಂತ್ರಗಳನ್ನು ಕಳುಹಿಸಿಕೊಡಲು ಸೇರಿದ್ದ ಜನ ಆಕ್ರೊಶ ವ್ಯಕ್ತಪಡಿಸಿದ್ದಲ್ಲದೆ ಕಲ್ಲು ತೂರಾಟಕ್ಕೆ ಮುಂದಾಗಿದ್ದರು. ರಾತ್ರಿ 500 ಕ್ಕೂ ಅಧಿಕ ಮಂದಿ ಜಮಾಯಿಸಿದ್ದರು.

ಬಳಿಕ ಸೇರಿದ್ದ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಬಳಿಕ ಪೊಲೀಸ್ ಬಂದೋಬಸ್ತ್ ನಲ್ಲಿ ರಾತ್ರಿ ಸುಮಾರು 12 ಗಂಟೆಗೆ ಮತ ಪೆಟ್ಟಿಗೆಗಳನ್ನು ಉಜಿರೆ ಸ್ಟ್ರಾಂಗ್ ರೂಮ್ ಗೆ ರವಾನಿಸಿದ ಘಟನೆ ನಡೆಯಿತು.

ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು, ಚೆಕ್ ಪೋಸ್ಟ್ ಬಳಿ ನಿಂತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ಘಟನೆ ನಡೆಯಿತು‌. ಉದ್ವಿಗ್ನ ಪರಿಸ್ಥಿತಿ ಉಂಟಾದ ಪರಿಣಾಮ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಯಿತು.

ಇದೇ ಮತಗಟ್ಟರಯಲ್ಲಿ ಮುಂಜಾನೆ 7:30 ರ ಸುಮಾರಿಗೆ 15 ಮತವಾಗಿದ್ದಾಗ ಇವಿಎಂ ಹಾಳಾಗಿತ್ತುಮ. ಬಳಿಕ ಹೊಸ ಇವಿಎಂ ಯಂತ್ರ ತರಿಸಲಾಗಿತ್ತು. ಎರಡನೇ ಯಂತ್ರ ತರಿಸಿ ಮತದಾನ ಆರಂಭವಾದಾಗ 10 ಗಂಟೆಯಾಗಿತ್ತು. 6 ಗಂಟೆ ಬಳಿಕ ಮತದಾರರನ್ನು ಗೇಟ್ ಒಳಕ್ಕೆ ಬಿಟ್ಟಿರಲಿಲ್ಲ. ಆದರೆ ಗೇಟ್ ಒಳಕ್ಕೆ ನೂರಾರು ಮತದಾರರು ಸರತಿ ಸಾಲಿನಲ್ಲಿ ನಿಂತಿ ರಾತ್ರಿ 8.30 ಕ್ಕೆ ಮತದಾನ ಪ್ರಕ್ರಿಯೆ ಮುಗಿದಿತ್ತು. ಕೈಕೊಟ್ಟ ವಿದ್ಯುತ್ ಅಭಾವ ಎದುರಾಗಿದ್ದರಿಂದ ಮತದಾನ ಬಳಿಕದ ಪ್ರಕ್ರಿಯೆ ನಡೆಸಲು ಸಿಬಂದಿಗಳು ಎರಡು ತಾಸು ತೆಗೆದುಕೊಂಡಿದ್ದರಿಂದ ರಾತ್ರಿ 10 ಗಂಟೆಯಾದರು ಮತಪೆಟ್ಟಿಗೆ ಸಾಗಿಸಿರಲಿಲ್ಲ. ಈ ವಿಚಾರ ಸ್ಟ್ರಾಂಗ್ ರೂಮ್ ಗೂ ತಿಳಿಸಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಈ‌ ಮಧ್ಯೆ ಪಕ್ಷದ ಏಜೆಂಟರನ್ನು ಹೊರಕ್ಕೆ ಕಳುಹಿಸಿದ್ದರು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಡೆದು ಮಾತಿನ ಚಕಮಕಿಗೆ ಕಾರಣವಾದ್ದರಿಂದ ಪರಿಸ್ಥಿತಿ ಶಾಂತಗೊಳಿಸಲು ಲಾಠಿ ಚಾರ್ಜಾ ಮಾಡಬೇಕಾಯಿತು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.