ಬೆಳ್ತಂಗಡಿ: ಭ್ರಷ್ಟಾಚಾರ ಆರೋಪದ ಮೇರೆಗೆ ಕಳಿಯ ಗ್ರಾ.ಪಂ.ಗೆ ಎಸಿಬಿ ದಾಳಿ
Team Udayavani, Jul 4, 2020, 12:09 PM IST
ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಎಸಿಬಿ ಇನ್ಸ್ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ. ತಂಡ ಶನಿವಾರ ದಾಳಿ ನಡೆಸಿ ದಾಖಲೆಗಳ ಪರೀಶೀಲನೆ ನಡೆಸಿದೆ.
ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94C ಹಕ್ಕು ಪತ್ರ ನೀಡಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ದೂರಲಾಗಿತ್ತು. ಈ ಕುರಿತು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು.
ಅಧಿಕಾರಿಗಳು ದಾಖಲೆ ಪರೀಶೀಲನೆ ನಡೆಸಿದ್ದು ಈ ಕರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್, ಶ್ಯಾಮ್ ಸುಂದರ್ , ಹರಿ ಪ್ರಸಾದ್, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ