ಕಡಬ: ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆಗೋಡೆಗೆ ಕಾರು ಢಿಕ್ಕಿ; ಇಬ್ಬರು ಸಾವು
Team Udayavani, Jun 6, 2022, 5:01 PM IST
ಕಡಬ: ಕಡಬ ಠಾಣಾ ವ್ಯಾಪ್ತಿಯ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎನ್ನುವಲ್ಲಿ ಸೋಮವಾರ ಬೆಂಗಳೂರು ಮೂಲದ ಯಾತ್ರಿಕರು ಪ್ರಯಾಣಿಸುತ್ತಿದ್ದ ಹುಂಡೈ ಐ 20 ಕಾರೊಂದು ಕಿರು ಸೇತುವೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ದೇವರ ದರ್ಶನಕ್ಕೆ ಬಂದಿದ್ದರು
ಕಾರಿನಲ್ಲಿದ್ದ ಬೆಂಗಳೂರಿನ ರಾಮ ನಗರ ನಿವಾಸಿಗಳಾದ ನಾಗೇಶ್ (32) ಹಾಗೂ ತೇಜು ಯಾನೆ ತೇಜಸ್ವಿನಿ (14) ಮೃತಪಟ್ಟವರು. ಕಾರಿನ ಚಾಲಕ ರವಿ (30), ರಜನಿ (24), ರಂಜಿತ್ (24), ಅಚಿಂತ್ಯಾ (6) ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಒಟ್ಟು ಏಳು ಜನ ಕಾರಿನಲ್ಲಿ ರಾಮನಗರದಿಂದ ಸುಬ್ರಹ್ಮಣ್ಯಕ್ಕೆ ದೇವರ ದರ್ಶನಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆಗೋಡೆಗೆ ಕಾರು ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ನಾಗೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ತೇಜಸ್ವಿನಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ