ಸುಳ್ಯ: ನಿಂದನಾತ್ಮಕ ಬರಹ ಹಂಚಿಕೊಂಡ ಆರೋಪ; ಡಿವೈಎಸ್ಪಿ ಭೇಟಿ
Team Udayavani, May 26, 2023, 6:55 AM IST
ಸುಳ್ಯ: ಇಲ್ಲಿಯ ಜಯನಗರದ ಯುವಕನೋರ್ವ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಬಗ್ಗೆ ಹಂಚಿಕೊಂಡ ನಿಂದನಾತ್ಮಕ ಬರಹವನ್ನು ಅಳಿಸುವಂತೆ ಶಾಸಕರ ಅಭಿಮಾನಿ ಬಳಗದ ಸದಸ್ಯರು ಆಗ್ರಹಿಸಿದ ಸಂದರ್ಭದಲ್ಲಿ ಸುಳ್ಯ ಪೊಲೀಸರು ಪ್ರಕರಣವನ್ನು ಇತ್ಯರ್ಥ ಪಡಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಜಯನಗರದ ಯುವಕ ತನ್ನ ಫೇಸ್ಬುಕ್ನಲ್ಲಿ ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಬರಹವನ್ನು ಹಂಚಿಕೊಂಡಿದ್ದನ್ನು ಕಂಡ ಶಾಸಕರ ಅಭಿಮಾನಿ ಬಳಗದ ಸದಸ್ಯರು, ಸಂಬಂಧಪಟ್ಟವನಿಗೆ ಮೊಬೈಲ್ ಕರೆ ಮಾಡಿ ಬರಹವನ್ನು ಅಳಿಸುವಂತೆ ಸೂಚಿಸಿದರು. ಅವನು ಒಪ್ಪದಿದ್ದಾಗ, ಪುತ್ತೂರಿನಿಂದ ಯುವಕನಲ್ಲಿಗೆ ತೆರಳಿದ ಬಳಗದ ಸದಸ್ಯರು, ಬರಹ ಅಳಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಪರಸ್ಪರ ಮಾತಿನ ಚಕಮಕಿ ನಡೆದು, ಜನರೂ ಜಮಾಯಿಸತೊಡಗಿದರು.
ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಿ ಬಳಗದ ಸದಸ್ಯರನ್ನು ಹಾಗೂ ಬರಹ ಪ್ರಕಟಿಸಿದವನನ್ನೂ ಠಾಣೆಗೆ ಕರೆದೊಯ್ದರು. ಠಾಣೆಗೆ ಆಗಮಿಸಿದ ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ.ಕುಮಾರ್ ವಿಚಾರಣೆ ನಡೆಸಿ ಪ್ರಕರಣ ಇತ್ಯರ್ಥ ಪಡಿಸಿದರು. ಯುವಕ ಬರಹವನ್ನು ಅಳಿಸಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್