ಕುಕ್ಕೆಗೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ… ಪತ್ನಿ-ಮಗುವಿಗೆ ತುಲಾಭಾರ ಸೇವೆ
Team Udayavani, May 12, 2023, 7:00 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತ ಗುರುವಾರ ಭೇಟಿ ನೀಡಿದರು.
ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪತ್ನಿ-ಮಗುವಿನ ತುಲಾಭಾರ ಸೇವೆ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀವತ್ಸಾ, ಪ್ರಸನ್ನ ದರ್ಬೆ, ವನಜಾ ವಿ. ಭಟ್, ಶೋಭಾ ಗಿರಿಧರ್, ಮನೋಹರ್ ರೈ ಉಪಸ್ಥಿತರಿದ್ದರು.