ಸಮರ್ಪಕ ತ್ಯಾಜ್ಯ ವಿಂಗಡನೆ: ನಗರಸಭೆಯಿಂದ ಜಾಗೃತಿ
ಪೌರಾಯುಕ್ತೆ ರೂಪಾ ಶೆಟ್ಟಿ ನೇತೃತ್ವದಲ್ಲಿ ಆಯೋಜನೆ
Team Udayavani, Jul 24, 2019, 5:00 AM IST
ನಗರ: ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಂಗಡನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ನಗರಸಭಾ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಅವರ ನೇತೃತ್ವದಲ್ಲಿ ಮುಂದುವರೆದಿದೆ. ತ್ಯಾಜ್ಯ ವಿಲೇವಾರಿಯೇ ದೊಡ್ಡ ಸವಾಲಾಗಿರುವ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆಯ ಕುರಿತಂತೆ ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯ ಎಂದು ವಿಂಗಡಿಸಿ ತ್ಯಾಜ್ಯ ಸಂಗ್ರಾಹಕರಿಗೆ ನೀಡಬೇಕೆನ್ನುವ ನಿಯಮ ಜಾರಿಯಲ್ಲಿದೆ. ಆದರೆ ಬಹುತೇಕ ನಿವಾಸಿಗಳು ತ್ಯಾಜ್ಯವನ್ನು ವಿಂಗಡಿಸದೆ ಕಸ ಸಂಗ್ರಾಹಕರಿಗೆ ನೀಡುತ್ತಿರುವುದು ಪ್ರಧಾನ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ನಗರಸಭಾ ಅಧಿಕಾರಿಗಳು ಹಲವು ಕಡೆಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
ತ್ಯಾಜ್ಯ ವಿಂಗಡನೆಯ ಪಾಠ
ಮಂಗಳವಾರ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಹಾಗೂ ಹಿರಿಯ ಆರೋಗ್ಯ ನಿರೀಕ್ಷಕಿ ಶ್ವೇತಾ ಕಿರಣ್ ತಂಡ ಕೆಮ್ಮಿಂಜೆಯ ವಸತಿ ಸಮುಚ್ಚಯದ ನಿವಾಸಿಗಳ ಸಭೆ ನಡೆಸಿ ತ್ಯಾಜ್ಯ ವಿಂಗಡನೆಯ ಪಾಠ ಮಾಡಿದರು. ಮನೆಯಲ್ಲಿ ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕ ಬುಟ್ಟಿಗಳಲ್ಲಿ ಸಂಗ್ರಹಿಸಬೇಕು. ಈ ಅಭ್ಯಾಸವನ್ನು ರೂಢಿಸಿಕೊಳ್ಳದಿದ್ದರೆ ನಗರಸಭೆಗೆ ತ್ಯಾಜ್ಯ ಸಂಗ್ರಹಣೆಗೆ ಕಷ್ಟವಾಗುತ್ತದೆ. ಅಲ್ಲದೇ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ನಗರ ಸಭೆಯು ಸಂಸ್ಕರಿಸುತ್ತಿರುವುದರಿಂದ ಹಸಿ ತ್ಯಾಜ್ಯ, ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ನೀಡಬೇಕು ಎಂದು ತಿಳಿಸಿದರು.
ಮನೆಮನೆ ಅಭಿಯಾನ
ನಗರಸಭಾ ವ್ಯಾಪ್ತಿಯ 31 ವಾರ್ಡ್ ಗಳಲ್ಲಿಯೂ ಕಸ ವಿಂಗಡನೆಯ ಕುರಿತು ಮನೆ ಮನೆ ಅಭಿಯಾನವನ್ನು ಪುತ್ತೂರು ನಗರಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸ್ವಯಂಸೇವಾ ಸಂಘಟನೆಗಳ ಸಹಕಾರದೊಂದಿಗೆ ನಗರದ ಎಲ್ಲ ಮನೆ ಹಾಗೂ ಉದ್ಯಮಗಳಿಗೆ ತ್ಯಾಜ್ಯ ವಿಂಗಡನೆಯ ಕುರಿತು ಮಾಹಿತಿ ಕರ ಪತ್ರಗಳನ್ನು ವಿತರಿಸಲಾಗಿದೆ. ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡುವ ಕುರಿತು ನಗರಸಭೆಯು ನಾಗರಿಕರಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕಡ್ಡಾಯ ಜಾರಿ
ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಿ ತ್ಯಾಜ್ಯ ಸಂಗ್ರಾಹಕರಿಗೆ ನೀಡಬೇಕೆಂಬ ನಿಯಮವನ್ನು ನಗರಸಭಾ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಜಾರಿ ಮಾಡಲಾಗಿದೆ. ಎಲ್ಲರೂ ಈ ನಿಯಮವನ್ನು ಪಾಲಿಸುವಂತೆ ಸೂಚಿಸಲಾಗಿದೆ.
– ರೂಪಾ ಟಿ. ಶೆಟ್ಟಿ, ಪೌರಾಯುಕ್ತರು, ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು