ಎಳನೀರಿನಿಂದ ಮಲವಂತಿಗೆಗೆ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ, 15,000ಕ್ಕೂ ಅಧಿಕ ಗಿಡಕ್ಕೆ ಹಾನಿ


Team Udayavani, Nov 5, 2022, 9:19 AM IST

ಎಳನೀರಿನಿಂದ ಮಲವಂತಿಗೆಗೆ ವ್ಯಾಪಿಸಿದ ಅಡಿಕೆ ಎಲೆಚುಕ್ಕಿ

ಬೆಳ್ತಂಗಡಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಕೊಲೆಟೋಟ್ರಿಕಮ್‌ ಗ್ಲೋಯೋನ್ಪೊರಿಯೊಯಿಡ್ಸ್‌ ಎಂಬ ಶಿಲೀಂಧ್ರದಿಂದ ಉಂಟಾದ ಅಡಿಕೆ ಎಲೆಚುಕ್ಕಿ ರೋಗ ಇದೀಗ ಬೆಳ್ತಂಗಡಿ ತಾಲೂಕಿನ ಎಳನೀರಿನ ಕೆಳಭಾಗಕ್ಕೂ ಹರಡಿದೆ.

ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ 2,0534.50 ಹೆಕ್ಟೇರ್‌ ಪ್ರದೇಶದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಈಗಾಗಲೇ ಬಾಧಿಸಿದೆ. ಈ ಮಧ್ಯೆ ಸಂಸೆ ಆಸುಪಾಸಿನ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ವ್ಯಾಪ್ತಿಯ ಬಡಾಮನೆ, ಗುತ್ಯಡ್ಕ, ಬಂಗಾರಪಲ್ಕೆ, ಕುಕ್ಕಡದ 150ರಿಂದ 200 ಎಕ್ರೆಗೂ ಅಧಿಕ ಅಡಿಕೆ ಕೃಷಿಗೆ ಎಲೆ ಚುಕ್ಕಿರೋಗ ಬಾಧಿಸಿ ರೈತರು ಸಂಪೂರ್ಣ ಅಡಿಕೆ ಕೃಷಿಯನ್ನೇ ಕಳೆದುಕೊಂಡಿದ್ದಾರೆ. ಎಳನೀರು ಪ್ರದೇಶ ದಟ್ಟ ಕಾಡಿನ ಮಧ್ಯೆ ಇರುವುದರಿಂದ ಅತೀ ಸೂಕ್ಷ್ಮವಾಗಿ ಪರಿಗಣಿಸಬೇಕೆಂದು ವಿಜ್ಞಾನಿಗಳೇ ತಿಳಿಸಿದ್ದರು.

15,000ಕ್ಕೂ ಅಧಿಕ ಅಡಿಕೆ ಗಿಡಕ್ಕೆ ಹಾನಿ
ಎಳನೀರು ಭಾಗದಿಂದ 6 ಕಿ.ಮೀ. ಕೆಳಗಿರುವ ಮಲವಂತಿಗೆ ಗ್ರಾಮದ ಹೊಳೆಕೆರೆ, ಕೆಮ್ಮಟೆ, ಕುಕ್ಕಿಮಾರು, ಬಾಳೆಹಿತ್ಲು, ಓಣಿಯೇಲು, ನೇತ್ರಕೊಡಂಗೆ, ಪೈಯೆ, ಕೂರ ಸುತ್ತಮುತ್ತಲಿನ 25 ಕೃಷಿಕರ 40 ಎಕರೆಯಲ್ಲಿ ಒಂದೂವರೆ ತಿಂಗಳಿಂದ ಎಲೆಚುಕ್ಕಿ ರೋಗದ ಲಕ್ಷಣ ಕಂಡುಬಂದಿದೆ. ಈ ಗ್ರಾಮದ ಸಮೀಪದ ಮಿತ್ತಬಾಗಿಲು, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲೂ ಅಡಿಕೆ ತೋಟ ಇದ್ದು ಆತಂಕ ಎದುರಾಗಿದೆ.

4 ಕೋ.ರೂ. ಘೋಷಿಸಿದ್ದ ಸರಕಾರ
ಕಳೆದ ತಿಂಗಳಷ್ಟೇ ಸರಕಾರವು ರೋಗ ನಿಯಂತ್ರಣಕ್ಕೆ ಶಿಲೀಂಧ್ರ ನಾಶಕಗಳನ್ನು ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ.ಗಳಂತೆ ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪರಣೆಗೆ 4 ಕೋ.ರೂ. ಅನುದಾನ ನೀಡಲು ಸಮ್ಮತಿಸಿತ್ತು. ಅದರಲ್ಲಿ ಬೆಳ್ತಂಗಡಿ ತಾಲೂಕಿನ ಎಳನೀರು ಭಾಗದ 150 ಕುಟುಂಬಗಳ ಪೈಕಿ 59 ಕುಟುಂಬಗಳ 69 ಹೆಕ್ಟೇರ್‌ ಪ್ರದೇಶವನ್ನು ಸೇರಿತ್ತು.

ಅಧಿಕ ತೇವಾಂಶವೇ ಕಂಟಕ
ಅಡಿಕೆ ಮರಗಳಿಗೆ ಸಮರ್ಪಕವಾಗಿ ಬಿಸಿಲು, ಮಳೆ ಬೀಳಬೇಕು. ಆದರೆ ಮಲವಂತಿಗೆಯ ಸುತ್ತ ರಾಷ್ಟ್ರೀಯ ಉದ್ಯಾನವನವಿರುವುದರಿಂದ ವರ್ಷಪೂರ್ತಿ ನೀರಿನ ಹರಿವಿರುತ್ತದೆ. ತೇವಾಂಶ ಹೆಚ್ಚಿರುವುದರಿಂದ ಎಲೆಚುಕ್ಕಿ ರೋಗ ಬೇಗನೆ ಹರಡುತ್ತಿದೆ. ಹಿಂಗಾರ, ಎಲೆಗಳು ಕೆಂಪುಬಣ್ಣಕ್ಕೆ ತಿರುಗಿ ಮರಗಳು ಸಾಯಲಾರಂಭಿಸಿವೆ. ಸರಕಾರ ಇದರ ಗಂಭೀರತೆಯನ್ನು ಮನಗಾಣಬೇಕಿದೆ ಎಂದು ಮಲವಂತಿಗೆ ಕೆಮ್ಮಟಿಯ ಕೃಷಿಕ ಸೀನಪ್ಪ ಗೌಡ ಆಗ್ರಹಿಸಿದ್ದಾರೆ.

ನಿವಾರಣೆ ಹೇಗೆ?
ಮುಂದಿನ ಎರಡು ವರ್ಷಗಳಲ್ಲಿ ಎಲೆಚುಕ್ಕಿ (ರೆಡ್‌ ಮೈಟ್‌) ರೋಗ ಸಂಪೂರ್ಣ ಹತೋಟಿಗೆ ತರುವ ಸಲುವಾಗಿ ಸರಕಾರ ಗಂಭೀರ ಚಿಂತನೆ ನಡೆಸಿದೆ. ಇದಕ್ಕಾಗಿ ರೈತರು ಹೆಕ್ಸ್‌ಕೊನೊಜಾಲ್‌ (Hexconozole)ಅಥವಾ ಪ್ರೊಪಿಕೊಜಾಲ್‌ (Propicozole)ದ್ರಾವಣವನ್ನು ಒಂದು ಲೀಟರ್‌ ನೀರಿಗೆ 1 ಎಂ.ಎಲ್‌. ನಷ್ಟು ಬೆರೆಸಿ ಸೋಗೆ ಪೂರ್ತಿ ಆವರಿಸುವಂತೆ ಸಿಂಪಡಿಸುವಂತೆ ಸಲಹೆ ನೀಡಲಾಗಿದೆ ಎಂದು ಬೆಳ್ತಂಗಡಿಯ ಹಿರಿಯ ತೋಟಗಾರಿಕೆ ನಿರ್ದೇಶಕ ಕೆ.ಎಸ್‌. ಚಂದ್ರಶೇಖರ್‌ ತಿಳಿಸಿದ್ದಾರೆ.

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.