ಅಲೆಕ್ಕಾಡಿ: ಚಿಣ್ಣರ ಸೆಳೆಯುವ ಮಕ್ಕಳ ಮನೆ
ಮಗು ಸ್ನೇಹಿ ಶಿಕ್ಷಣದ ಪರಿಕಲ್ಪನೆಯ ಪೂರ್ವ ಪ್ರಾಥಮಿಕ ಶಾಲೆ ಆರಂಭ
Team Udayavani, Jun 7, 2019, 5:50 AM IST
ಬೆಳ್ಳಾರೆ: ಖಾಸಗಿಯಂತೆ ಸರಕಾರಿ ಶಾಲೆಗಳಲ್ಲೂ ಎಲ್.ಕೆ.ಜಿ., ಯು.ಕೆ.ಜಿ. ಮಾದರಿಯ ಪೂರ್ವ ಪ್ರಾಥಮಿಕ ಶಿಕ್ಷಣ ಈ ವರ್ಷದಿಂದ ಆರಂಭಗೊಂಡಿದೆ. ಒಂದನೇ ತರಗತಿಗೆ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ತಾಲೂಕಿನ ಮುರುಳ್ಯ ಅಲೆಕ್ಕಾಡಿ ಶಾಲೆಯಲ್ಲಿ ಮಕ್ಕಳ ಹೆತ್ತವರೇ ಮುತುವರ್ಜಿ ವಹಿಸಿ “ಮಕ್ಕಳ ಮನೆ’ ಆರಂಭಿಸಿದ್ದಾರೆ. ಆಕರ್ಷಕ ವಿನ್ಯಾಸ, ಸ್ಮಾರ್ಟ್ ಕ್ಲಾಸ್, ಆಟದ ಮೈದಾನ ಮಕ್ಕಳನ್ನು ಕೈಬೀಸಿ ಕರೆಯುತ್ತಿದೆ. ಸಮವಸ್ತ್ರ, ಶೂ, ಪುಸ್ತಕ, ಶಿಕ್ಷಣ ಶುಲ್ಕ ಎಲ್ಲವನ್ನೂ ಮಕ್ಕಳಿಗೆ ಉಚಿತವಾಗಿ ನೀಡಿ ಖರ್ಚನ್ನು ಹೆತ್ತವರೇ ಭರಿಸಿ ಮಕ್ಕಳ ಮನೆ ಆರಂಭಿಸಿರುವುದು ಇಲ್ಲಿನ ವಿಶೇಷ.
25ಕ್ಕೂ ಹೆಚ್ಚು ಚಿಣ್ಣರ ದಾಖಲಾತಿ
ಅಲೆಕ್ಕಾಡಿ ಮುರುಳ್ಯ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮನೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ 25ಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದು, ಇನ್ನೂ 10 ವಿದ್ಯಾಥಿಗಳು ಹೆಸರು ನೋಂದಾಯಿಸಿದ್ದಾರೆ. ಸುಮಾರು 6 ಲಕ್ಷ ರೂ.ವೆಚ್ಚದ ಈ ಯೋಜನೆಗೆ ಸಹಕರಿಸಲು ಊರವರು ಹಾಗೂ ಹೆತ್ತವರು ಮುಂದೆ ಬಂದಿರುವುದು ವಿಶೇಷ. ಎಣ್ಮೂರು, ಎಡಮಂಗಲ, ಮುರುಳ್ಯ, ನಿಂತಿಕಲ್ಲು, ಬಾಳಿಲ ಭಾಗದ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ.
ಎಲ್ಲವೂ ಉಚಿತ
ಸರಕಾರಿ ಶಾಲೆಯನ್ನು ಖಾಸಗಿ ಶಾಲೆಯ ಮಾದರಿಯಲ್ಲಿ ರೂಪುಗೊಳಿಸಿರುವ ಹೆತ್ತವರು ಹಾಗೂ ದಾನಿಗಳು ಮಕ್ಕಳಿಗೆ ಹೊರೆಯಾಗದಂತೆ ಸಂಪೂರ್ಣ ಉಚಿತ ಶಿಕ್ಷಣ ನೀಡಲು ಮುಂದಾಗಿದ್ದಾರೆ. 4 ವರ್ಷ 5 ತಿಂಗಳು ತುಂಬಿದ ಮಕ್ಕಳನ್ನು ಇಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಇಲ್ಲಿ ದಾಖಲಾತಿ ಪಡೆಯುವ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಿ ದಾನಿಗಳ ನೆರವಿನಿಂದ ಊಟ ಇನ್ನಿತರ ಖರ್ಚುವೆಚ್ಚಗಳನ್ನು ಭರಿಸಲು ನಿರ್ಧರಿಸಲಾಗಿದೆ.
ಹೀಗಿದೆ ಮಕ್ಕಳ ಮನೆ
ಮಕ್ಕಳ ಮನೆಯ ಒಳಹೊಕ್ಕರೆ ಇದು ಸರಕಾರಿ ಶಾಲೆಯೋ ಎಂಬ ಸಂಶಯ ಬಾರದಿರದು. ಚಿಣ್ಣರ ಸೆಳೆಯಲು ಆಕರ್ಷಕ ಗೋಡೆ ಚಿತ್ತಾರವನ್ನು ರಚಿಸಲಾಗಿದೆ. ವಿವಿಧ ಪ್ರಾಣಿ, ಪಕ್ಷಿ, ತರಕಾರಿ, ಅಕ್ಷರಗಳನ್ನು ಮಕ್ಕಳ ಮನೆಯ ಗೋಡೆಗಳಲ್ಲಿ ಆಕರ್ಷಕವಾಗಿ ಚಿತ್ರಿಸಲಾಗಿದೆ. ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾಧ್ಯಮದ ಮೂಲಕ ಕಲಿಯಲು ಎಲ್.ಇ.ಡಿ. ಅಳವಡಿಸಲಾಗಿದೆ. ಸಾಮಾಜಿಕ ಸಂದೇಶವುಳ್ಳ ಕಥಾ ಪುಸ್ತಕಗಳ ಗ್ರಂಥಾಲಯವಿದೆ. ರೇಡಿಯೋ ಮತ್ತು ದುರದರ್ಶನದ ಮೂಲಕ ಪಾಠ ಕೇಳಲು ವ್ಯವಸ್ಥೆ ಮಾಡಲಾಗಿದೆ. ಚಿಣ್ಣರ ಆಟದ ಮೈದಾನವನ್ನೂ ವಿಶೇಷವಾಗಿ ರಚಿಸಲಾಗಿದೆ. ಪಠ್ಯ ಪೂರಕ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗಿದ್ದು, ಗುಣಮಟ್ಟದ ಶಿಕ್ಷಣ ನೀಡಲು ತರಬೇತಿ ಪಡೆದ ಒಬ್ಬರು ಶಿಕ್ಷಕಿ ಹಾಗೂ ಸಹಾಯಕಿಯನ್ನು ನೇಮಿಸಲಾಗಿದೆ. ಒಟ್ಟಿನಲ್ಲಿ ಮಗು ಸ್ನೇಹಿ ಶಿಕ್ಷಣದ ಪರಿಕಲ್ಪನೆಯಲ್ಲಿ ಮಕ್ಕಳ ಮನೆಯನ್ನು ವಿನ್ಯಾಸಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ