ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯ,ಎಂಜಿನಿಯರ್‌ ಪದವೀಧರನ ಕೃಷಿ ಯಶೋಗಾಥೆ

Team Udayavani, Oct 20, 2021, 5:03 AM IST

ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ಸವಣೂರು: ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಕೃಷಿಕರೊಬ್ಬರೊಬ್ಬರು ಯಶಸ್ವಿಯಾಗಿದ್ದಾರೆ.

ಹಿಂದಾರು ನಿವಾಸಿ ಜಯಗುರು ಆಚಾರ್‌ ಈ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ. ಕೃಷಿಗೆ ಸೆಗಣಿ ಬಳಕೆ ಸಾಂಪ್ರದಾಯಿಕ ವಿಧಾನ. ಆದರೆ ಸೆಗಣಿಯನ್ನು ಸಂಸ್ಕರಿಸಿ ಬಳಸುವ ಮೂಲಕ ಭೂಮಿಯ ಫಲವತ್ತತೆಯನ್ನೂ ಹೆಚ್ಚಿಸಿಕೊಳ್ಳಬಹುದು ಎಂದು ಅವರು ತೋರಿಸಿಕೊಟ್ಟಿದ್ದಾರೆ.

ಸೆಗಣಿ ಹುಡಿ ತಯಾರಿ ಹೇಗೆ?
ಹಟ್ಟಿಯಿಂದ ಸೆಗಣಿ ಸಂಗ್ರಹಿಸಿ ತೊಟ್ಟಿಗೆ ಹಾಕಿ, ಪಂಪ್‌ ಮೂಲಕ ಸೆಗಣಿಯಿಂದ ನೀರಿನ ಅಂಶವನ್ನು ಬೇರ್ಪಡಿಸುವ ಯಂತ್ರಕ್ಕೆ ಹಾಯಿಸಲಾಗುತ್ತದೆ. ಆ ಯಂತ್ರದಲ್ಲಿ ಒಂದು ಕಡೆ ಸೆಗಣಿಯ ಹುಡಿ ತಯಾರಾದರೆ, ಇನ್ನೊಂದು ಕಡೆ ಸೆಗಣಿಯ ನೀರಿನಂಶ ಪ್ರತ್ಯೇಕಗೊಂಡು ಟ್ಯಾಂಕ್‌ನಲ್ಲಿ ಶೇಖರಣೆಗೊಳ್ಳುತ್ತದೆ. ತೋಟಕ್ಕೆ ಬಳಸಿ ಉಳಿದ ಸೆಗಣಿ ಹುಡಿ ಗೊಬ್ಬರವನ್ನು ತಲಾ 40 ಕೆ.ಜಿ.ಯ ಪ್ಯಾಕೆಟ್‌ ಮಾಡಿ ಮಾರಾಟ ಮಾಡುತ್ತಿದ್ದಾರೆ.

ಉಪ ಉತ್ಪನ್ನಗಳು
ಸೆಗಣಿ ಹುಡಿ ಗೊಬ್ಬರದ ಜತೆಗೆ ಗೋಮೂತ್ರ, ದನಗಳನ್ನು ತೊಳೆದ ನೀರು, ಸೆಗಣಿ ನೀರು ಸೇರಿಸಿ ಸ್ಲರಿ ತಯಾರಿಸಲಾಗುತ್ತಿದೆ. ಟ್ಯಾಂಕ್‌ ಮೂಲಕ ಸ್ಲರಿಯನ್ನು ತೋಟದಲ್ಲಿರುವ ಅಡಿಕೆ, ತೆಂಗು, ತರಕಾರಿ ತೋಟಕ್ಕೆ ಬಳಸುವ ಜತೆಗೆ ಪರಿಸರದ ತೋಟಗಳಿಗೂ ಟ್ಯಾಂಕರ್‌ ಮೂಲಕ ಪೂರೈಸುತ್ತಿದ್ದಾರೆ. ಸೆಗಣಿ ಹುಡಿಯಂತೆ ಸ್ಲರಿಗೂ ಬೇಡಿಕೆ ಇದೆ.

ಕಳೆದೆರಡು ವರ್ಷಗಳಿಂದ ಪೂರ್ಣ ಪ್ರಮಾಣದಲ್ಲಿ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ಜಯಗುರು ಅವರ ಮನೆಯಲ್ಲಿ 130 ಗೋವುಗಳಿವೆ. ದಿನಕ್ಕೆ 750 ಲೀ. ಹಾಲನ್ನು ಡಿಪೋಗೆ ನೀಡುತ್ತಿದ್ದಾರೆ. ಸೆಗಣಿಯನ್ನು ಹುಡಿ ಗೊಬ್ಬರ ಮಾಡುವುದರಿಂದ ಸಾಗಾಣಿಕೆಯೂ ಸುಲಭ. ವಾಸನೆ ಇರುವುದಿಲ್ಲ, ತೋಟಕ್ಕೆ ಸುಲಭವಾಗಿ ಹಾಕಬಹುದು. ಜತೆಗೆ ಗೋನಂದಾಜಲವನ್ನೂ ಬಳಸುತ್ತಿದ್ದು, ಇವೆಲ್ಲದರ ಬಳಕೆಯಿಂದ ಇಳುವರಿ ಅಧಿಕವಾಗಿದೆ.

ಇದನ್ನೂ ಓದಿ:ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

ಗೋ ಆಧಾರಿತ ಕೃಷಿ ಕ್ರಾಂತಿ
ಕಂಪೆನಿಯೊಂದರಲ್ಲಿ ಎಂಜಿನಿಯರಿಂಗ್‌ ಆಗಿದ್ದ ಜಯಗುರು 2019ರಲ್ಲಿ ವೃತ್ತಿಗೆ ವಿದಾಯ ಹೇಳಿ ತಂದೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್‌ ಅವರು ನಡೆಸುತ್ತಿದ್ದ ಹೈನುಗಾರಿಕೆಯಲ್ಲಿ ಕೈಜೋಡಿಸಿದರು. ಬಳಿಕ ತನ್ನ ಕೃಷಿ ಭೂಮಿಯನ್ನು ರಾಸಾಯನಿಕ ಮುಕ್ತ ಮಾಡಬೇಕೆಂಬ ಕನಸಿನಂತೆ ಅದರಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ದ್ರವ ರೂಪದ ಗೊಬ್ಬರ ತಯಾರಿಸುವ ಪ್ರಯೋಗ ಆರಂಭಿಸಿರುವುದಲ್ಲದೆ ಆ ಮೂಲಕ ಗೋ ಆಧಾರಿತ ಕೃಷಿ ಕ್ರಾಂತಿಗೆ ಮುಂದಡಿಯಿಟ್ಟಿದ್ದಾರೆ.

ಫಲವತ್ತತೆ ಅಧಿಕ
ನಾನು ತೋಟಕ್ಕೆ ಯಾವುದೇ ರಾಸಾಯನಿಕ ಗೊಬ್ಬರ ಹಾಕುತ್ತಿಲ್ಲ. ಸೆಗಣಿ ಹುಡಿ ಗೊಬ್ಬರ ಸಾಗಾಟವೂ ಸುಲಭ. ವಾಸನೆ ಇರುವುದಿಲ್ಲ. ತೋಟಕ್ಕೆ ಸುಲಭವಾಗಿ ಬಳಸಬಹುದು. ಗೋನಂದಾಜಲವನ್ನೂ ಬಳಸುತ್ತಿದ್ದು, ಇವೆಲ್ಲರ ಬಳಕೆಯಿಂದ ತೋಟದಲ್ಲಿ ಇಳುವರಿ ಹೆಚ್ಚಳಗೊಂಡಿದೆ. ಭೂಮಿಯ ಫಲವತ್ತತೆ ಅ ಧಿಕವಾಗಿದೆ. ಇಳುವರಿ ಹೆಚ್ಚಿರುವುದಲ್ಲದೆ ಅಡಿಕೆ ಕೊಳೆರೋಗವೂ ದೂರವಾಗಿದೆ.
-ಜಯಗುರು ಆಚಾರ್‌ ಹಿಂದಾರು,
ಯುವ ಕೃಷಿಕ

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.