ರೈಲು ಹಳಿ ಕಾಯುವ ಕಾರ್ಮಿಕರಿಗೆ ಆಗಂತುಕರ ಆತಂಕ

ಶಿರಾಡಿ ಘಾಟಿ ಪ್ರದೇಶದಲ್ಲಿ ಎಎನ್‌ಎಫ್ ಶೋಧ

Team Udayavani, Jul 27, 2019, 5:23 AM IST

v-47

ಸುಬ್ರಹ್ಮಣ್ಯ: ಬೆಂಗಳೂರು- ಮಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮೇರಿ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳಿಂದ ರೈಲ್ವೇ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿರುವ ಬೆನ್ನಲ್ಲೇ ಈ ಭಾಗದಲ್ಲಿ ಆಗಂತುಕರ ಭಯ ಕಾಡಲಾರಂಭಿಸಿದೆ.

ಎಡಕುಮೇರಿ ಸುರಂಗ ಮಾರ್ಗದ ಸಮೀಪ ಕರ್ತವ್ಯ ನಿರತ ರೈಲ್ವೇ ಕಾರ್ಮಿಕ ರಾಜು ಎಂಬವರಿಗೆ ಅಪರಿಚಿತರಿಬ್ಬರು ಬೆದರಿಕೆ ಹಾಕಿದ ಘಟನೆ ಜು.22ರಂದು ರಾತ್ರಿ ನಡೆದಿದೆ. ಘಟನೆ ಬಳಿಕ ಈ ಭಾಗದ ಅರಣ್ಯಗಳಲ್ಲಿ ಎಎನ್‌ಎಫ್ ಶೋಧ ಕಾರ್ಯಾಚರಣೆ ಆರಂಭಿಸಿದೆ.

ಈ ಅಪರಿಚಿತರು ನಕ್ಸಲರು ಎನ್ನುವ ಶಂಕೆ ವ್ಯಕ್ತಗೊಂಡಿದ್ದು, ಪಶ್ಚಿಮ ಘಟ್ಟ ಭಾಗದಲ್ಲಿ ನಕ್ಸಲರು ತಮ್ಮ ಚಟುವಟಿಕೆ ಆರಂಭಿಸಿದ್ದಾರೆಯೇ ಎನ್ನುವ ಅನುಮಾನ ಹುಟ್ಟಿಕೊಂಡಿದೆ.

ಪಿಸ್ತೂಲು ಇತ್ತು?
ಬೆದರಿಕೆ ಒಡ್ಡಿದ ಇಬ್ಬರು ಅಪರಿಚಿತರ ಬಳಿ ಪಿಸ್ತೂಲು ಇತ್ತು ಎನ್ನುವುದನ್ನು ಸಿಬಂದಿ ರಾಜು ಪೊಲೀಸರ ಗಮನಕ್ಕೆ ತಂದಿದ್ದಾನೆ. ಅಪರಿಚಿತ ವ್ಯಕ್ತಿಗಳಿಬ್ಬರು ಹಿಂದಿಯಲ್ಲಿ ಸಂವಹನ ನಡೆಸುತ್ತಿದ್ದರು ಎನ್ನಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಹಾಸನ, ಸಕಲೇಶಪುರ ಪೊಲೀಸರು, ಅರಣ್ಯ ಇಲಾಖೆ ಸಿಬಂದಿ ಮತ್ತು ರೈಲ್ವೇ ಇಲಾಖೆ ಸಿಬಂದಿ ಅಪರಿಚಿತರ ಶೋಧಕ್ಕೆ ಮುಂದಾಗಿದ್ದಾರೆ.

ಈ ಹಿಂದೆಯೂ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದಿದ್ದರಿಂದ ಬೆಳ್ತಂಗಡಿ ಬೆಟಾಲಿಯನ್‌ನ 24 ಮಂದಿ ಯೋಧರ ಎರಡು ತಂಡ ಸಂಪಾಜೆ, ಬಿಸಿಲೆ, ಸುಬ್ರಹ್ಮಣ್ಯ, ನಾಗರಕೊಲ್ಲಿ ಭಾಗದಲ್ಲಿ ಶೋಧ ಆರಂಭಿಸಿದೆ. ಶುಕ್ರವಾರ ಬಿಸಿಲೆ, ಭಾಗ್ಯ, ಎಡಕುಮೇರಿ, ಕಾಗಿನೆರಿಕಟ್ಟೆ, ಮಣಿಬಂಡ ಮೊದಲಾದೆಡೆ ಶೋಧಿಸಲಾಗಿದೆ.

ಗಸ್ತು ನಿರತ ರೈಲ್ವೇ ಸಿಬಂದಿಗೆ ಬೆದಿಕೆ ಒಡ್ಡಿದ ಅಪರಿಚಿತರು ನಕ್ಸಲರೇ ಅಥವಾ ಬೇಟೆಗಾರರೇ, ಚಾರಣಿಗರೇ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ರೈಲ್ವೇ ಕಾರ್ಮಿಕ ರಾಜು ನೀಡಿದ ಮಾಹಿತಿ ಆಧರಿಸಿ ತನಿಖೆ ನಡೆಯುತ್ತಿದೆ. ಮುನ್ನೆಚ್ಚರಿಕೆ ಸಲುವಾಗಿ ಎರಡೂ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.