ಎಪಿಎಂಸಿ ರೈಲ್ವೇ ಅಂಡರ್‌ಪಾಸ್‌ ಕೇಂದ್ರ ಸರಕಾರ ಅನುಮೋದನೆ

ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆ

Team Udayavani, Mar 1, 2020, 4:32 AM IST

rilway-underpass

ಪುತ್ತೂರು: ಎಪಿಎಂಸಿ ಸಾಮಾನ್ಯ ಸಭೆ ಅಧ್ಯಕ್ಷ ದಿನೇಶ್‌ ಮೆದು ಅಧ್ಯಕ್ಷತೆಯಲ್ಲಿ ನಡೆಯಿತು.

ಪುತ್ತೂರು: ಎಪಿಎಂಸಿ ರೈಲ್ವೇ ಅಂಡರ್‌ಪಾಸ್‌ ಯೋಜನೆಗೆ ಕೇಂದ್ರದ ಅನುಮೋದನೆ ಸಿಕ್ಕಿದೆ. ಇನ್ನು ರಾಜ್ಯ ಸರಕಾರ ಎಷ್ಟು ಹಣ ವಿನಿಯೋಗಿಸುತ್ತದೆ ಎಂದು ನೋಡಿ ಉಳಿದ ಹಣವನ್ನು ಎಪಿಎಂಸಿ ಭರಿಸಲಿದೆ. ಆದರೆ ಎಪಿಎಂಸಿ ರಸ್ತೆಯ ಸುತ್ತಮುತ್ತ ಅಂಗಡಿ, ಮನೆಗಳಿಂದ ತೆರಿಗೆ ಸಂಗ್ರಹ ಮಾಡುತ್ತಿರುವ ಪುತ್ತೂರು ನಗರಸಭೆ ಯೋಜನೆಗೆ ಅನುದಾನ ನೀಡುತ್ತಿಲ್ಲ. ನಗರಸಭೆಯಿಂದ ಅನುದಾನ ಇಲ್ಲ ಎಂದು ಆಡಳಿತಾ ಧಿಕಾರಿ ತಿಳಿಸಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ಹೇಳಿದರು. ಫೆ. 29ರಂದು ನಡೆದ ಎಪಿಎಂಸಿ ಸಾಮಾನ್ಯ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರದಿಂದ ಎಪಿಎಂಸಿ ರೈಲ್ವೇ ಅಂಡರ್‌ಪಾಸ್‌ ಬ್ರಿಡ್ಜ್ಗೆ ಅನುಮೋದನೆ ಸಿಕ್ಕಿದೆ. ಮುಂದೆ ಮೂಲ ಸೌಕರ್ಯ ಇಲಾಖೆಯಿಂದ ಅನುದಾನ ಸಿಗಲಿದೆ. ಅದಕ್ಕೆ ಸರಕಾರ ಎಷ್ಟು ಹಣ ವಿನಿ ಯೋಗಿಸಲಿದೆ ಎಂದು ನೋಡಿ ಉಳಿದ ಹಣ ಎಪಿಎಂಸಿ ಭರಿಸಲಿದೆ. ಮುಂದಿನ ವಾರ ರೈಲ್ವೇ ಮೈಸೂರು ವಿಭಾಗೀಯ ಕೇಂದ್ರಕ್ಕೆ ಎಪಿಎಂಸಿ ನಿಯೋಗ ಹೋಗಿ ಅವರಿಗೆ ಎಪಿಎಂಸಿ ಕಡೆಯಿಂದ ಅನು ದಾನದ ಪತ್ರ ಕೊಡಲಿದ್ದೇವೆ ಎಂದರು.

ಮೈಸೂರಿನ ವಿಭಾಗೀಯ ಕಚೇರಿ ಯಿಂದ ರಾಜ್ಯ ಮೂಲ ಸೌಕರ್ಯ ಇಲಾಖೆಗೆ ಅಂದಾಜು ಪಟ್ಟಿ ಹೋಗಲಿದೆ. ಈ ನಡುವೆ ಸಂಸದರು, ಶಾಸಕರ ಉಪಸ್ಥಿತಿಯಲ್ಲಿ ರಾಜ್ಯದಿಂದ ಹೆಚ್ಚಿನ ಅನುದಾನ ನೀಡುವ ಕುರಿತು ಮಾತುಕತೆ ನಡೆಸಲಾಗುವುದು ಎಂದರು.

ನಗರಸಭೆ ವಿರುದ್ಧ ಅಸಮಾಧಾನ
ಸಾರ್ವಜನಿಕ ಉಪಯೋಗ ಅಭಿವೃದ್ಧಿ ದೃಷ್ಟಿಯಿಂದ ಯೋಜನೆ ರೂಪಿಸಿದರೂ ಪುತ್ತೂರು ನಗರಸಭೆ ಅನುದಾನ ನೀಡಿಲ್ಲ. ಎಪಿಎಂಸಿ ರಸ್ತೆ ಎಪಿಎಂಸಿ ಸುಪರ್ದಿಯಲ್ಲಿದ್ದರೂ ಅದರ ಬಹುತೇಕ ಉಪಯೋಗ ಪಡೆಯುವುದು ನಗರಸಭೆ. ರಸ್ತೆ ಬದಿಯ ಅಂಗಡಿ, ಮನೆಗಳಿಂದ ತೆರಿಗೆ ಸಂಗ್ರಹ ಮಾಡುವುದು ನಗರಸಭೆ. ಆದರೆ ಯೋಜನೆಗೆ ನಗರಸಭೆ ಅನುದಾನ ಇಲ್ಲ ಎಂದು ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಎಪಿಎಂಸಿ ಸದಸ್ಯರು ಧ್ವನಿಗೂಡಿಸಿದರು.

18-19ರ ಕ್ರಿಯಾ ಯೋಜನೆ ಪೂರ್ಣ
ಕಳೆದ 2018-19ನೇ ಸಾಲಿನ ಕ್ರಿಯಾಯೋಜನೆ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಗೋದಾಮಿನಲ್ಲಿ ಶೀಟ್‌ ಅಳವಡಿಸುವ ಕೆಲಸ ಮಾತ್ರ ಬಾಕಿ ಇದೆ. ಅದನ್ನು ತಿಂಗಳೊಳಗೆ ಪೂರ್ಣಗೊಳಿಸಿಕೊಡಲಾಗುವುದು ಎಂದು ಗುತ್ತಿಗೆದಾರರು ತಿಳಿಸಿದ್ದಾರೆ ಎಂದವರು ಮಾಹಿತಿ ನೀಡಿ, ಮುಂದೆ ಉದ್ಘಾಟನ ಕಾರ್ಯಕ್ರಮ ನೆರವೇರಿಸಲು ಸದಸ್ಯರಿಂದ ಅಧ್ಯಕ್ಷರು ಸಲಹೆ ಪಡೆದರು.

ಸಣ್ಣ ವ್ಯಾಪಾರಿಗಳಿಗೆ ಹೊಡೆತ
ದೊಡ್ಡ ಉದ್ಯಮದಿಂದಾಗಿ ಸಣ್ಣ ವ್ಯಾಪಾರಿಗಳಿಗೆ ಹೊಡೆತ ಉಂಟಾಗಿದೆ. ಅಲ್ಲದೆ ದೊಡ್ಡ ಉದ್ಯಮಗಳಿಂದ ವ್ಯವಹಾರದ ಹಣ ಬೇರೆ ಕಡೆ ಹೋಗುತ್ತದೆ. ಸಣ್ಣ ವ್ಯಾಪಾರಿಗಳಿಂದ ವ್ಯವಹರಿಸಿದ ಹಣ ಪರಿಸರದಲ್ಲೆ ರೊಟೇಶನ್‌ ಆಗುತ್ತದೆ ಎಂದು ನಿರ್ದೇಶಕ ಶಕೂರ್‌ ಅವರು ಸಭೆಯಲ್ಲಿ ಪ್ರಸ್ತಾವಿಸಿದರು. ರಿಲಾಯನ್ಸ್‌ನಲ್ಲಿ ಸೀಯಾಳವನ್ನು ಕೃಷಿಕರಿಂದ ಪಡೆಯುವ ಹಣಕ್ಕಿಂತಲೂ ಕಡಿಮೆ ಇಟ್ಟು ಮಾರಾಟ ಮಾಡುವ ಮೂಲಕ ಸಣ್ಣ ವ್ಯಾಪಾರಿಗಳಿಗೆ ಹೊಡೆತ ಕಾಣುತ್ತಿದೆ ಎಂದು ಹೇಳಿದರು. ಈ ಕುರಿತು ನಿರ್ದೇಶಕರು ಚರ್ಚಿಸಿದರು. ಅಧ್ಯಕ್ಷರು ಮಾತನಾಡಿ, ಅದು ಗ್ರಾಹಕರನ್ನು ತಮ್ಮ ಕಡೆ ಎಳೆಯುವ ಸ್ಪರ್ಧೆ ಆಗಿರಬಹುದು ಎಂದರು.

ಉತ್ತಮ ನೀರಿನ ಪೈಪ್‌ ಅಳವಡಿಸಿ
ಪ್ರಾಂಗಣದಲ್ಲಿರುವ ನೀರು ಪೂರೈಕೆಯ ಪೈಪ್‌ಲೈನ್‌ ವಿಸ್ತರಣೆ ಮತ್ತು ಹಳೆಯ ಪೈಪ್‌ಲೈನ್‌ ಬದಲಾವಣೆ ಸೇರಿದಂತೆ ದುರಸ್ತಿ ಕಾರ್ಯದಲ್ಲಿ ಟೆಂಡರ್‌ದಾರರಿಗೆ ಉತ್ತಮ ಗುಣಮಟ್ಟದ ಪೈಪ್‌ ಹಾಕಲು ಸೂಚಿಸಬೇಕು. ನೀರಿನ ಬಳಕೆ ಮಿತ ಮತ್ತು ನೀರು ಸೋರಿಕೆಯಾಗದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಕಾಮಗಾರಿ ಉತ್ತಮ ಆಗಿರಬೇಕೆಂದು ನಿರ್ದೇಶಕಿ ಪುಲಸಾö ರೈ ಸಭೆಯಲ್ಲಿ ಪ್ರಸ್ತಾವಿಸಿದರು. ಎಲ್ಲವೂ ಉತ್ತಮ ಗುಣಮಟ್ಟದ ಪೈಪ್‌ ಅಳವಡಿಸುವ ಕುರಿತು ಸೂಚನೆ ನೀಡಬೇಕೆಂದು ಕಾರ್ಯದರ್ಶಿಯವರಿಗೆ ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ಉಪಾಧ್ಯಕ್ಷ ಎನ್‌.ಎಸ್‌. ಮಂಜುನಾಥ್‌, ನಿರ್ದೇಶಕ ಕುಶಾಲಪ್ಪ ಗೌಡ, ತೀರ್ಥಾನಂದ ದುಗ್ಗಳ, ಮೇದಪ್ಪ ಗೌಡ, ಬೂಡಿಯರ್‌ ರಾಧಾಕೃಷ್ಣ ರೈ, ಕೃಷ್ಣಕುಮಾರ್‌ ರೈ ಉಪಸ್ಥಿತರಿದ್ದರು. ಪ್ರಭಾರ ಕಾರ್ಯದರ್ಶಿ ರಾಮಚಂದ್ರ ಸಭಾ ವಿಷಯದ ಟಿಪ್ಪಣಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.