ಬೆಳ್ತಂಗಡಿ : ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಔಷಧ ವಿತರಣೆ
Team Udayavani, Nov 23, 2022, 10:26 AM IST
ಬೆಳ್ತಂಗಡಿ : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ, ಉಡುಪಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯದಿಂದ ಬಾಧಿಸಿರುವ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರವು 4 ಕೋಟಿ ರೂ. ಅನುದಾನ ಘೋಷಿಸಿದ ಬೆನ್ನಲ್ಲೇ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಶಿಲೀಂಧ್ರ ನಾಶಕ ಔಷಧ ವಿತರಿಸಲಾಗುತ್ತಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿ ಸುಮಾರು 20,534.50 ಹೆಕ್ಟೇರ್ನಲ್ಲಿ ಎಲೆಚುಕ್ಕಿ ರೋಗ ಬಾಧಿಸಿತ್ತು. ಔಷಧ ಖರೀದಿಸಲು ಪ್ರತೀ ಹೆಕ್ಟೇರ್ಗೆ 4 ಸಾವಿರ ರೂ.ಗಳಂತೆ 1.50 ಹೆಕ್ಟೇರ್ ವರೆಗೆ ರೈತರಿಗೆ ಸಹಾಯಧನ ನೀಡಲು ಅಂದಾಜು 8 ಕೋ.ರೂ. ಅಗತ್ಯವಿದೆ. ಆರಂಭದಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಮೊದಲನೇ ಸಿಂಪರಣೆಗೆ 4 ಕೋ.ರೂ. ಆವಶ್ಯಕತೆ ಮನಗಂಡು ಸರಕಾರ ಅನುದಾನ ನೀಡಲು ಸಮ್ಮತಿಸಿದೆ.
ಕೇಂದ್ರದ ತಂಡ ಭೇಟಿ
ಪುತ್ತೂರು: ಎಲೆಚುಕ್ಕಿ ಹಾಗೂ ಹಳದಿ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ವಿಜ್ಞಾನಿಗಳ ವಿಶೇಷ ಅಧ್ಯಯನ ತಂಡವನ್ನು ಕಳುಹಿಸಿದೆ. ತಂಡವು ಸುಳ್ಯ, ಕಳಸ, ಶೃಂಗೇರಿ ಭಾಗಗಳಲ್ಲಿ ತೆರಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮರ್ಕಂಜದ ಮಾಪಲತೋಟ, ಬಲ್ಕಾಡಿ ಮತ್ತು ದಾಸರಬೈಲಿನ ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು