Aranthodu; 4 ಜಾನುವಾರುಗಳು ಚಿರತೆಗೆ ಬಲಿ
ಅರಂತೋಡಿನಲ್ಲಿ 1 ದನದ ಕರು, 3 ಆಡುಗಳ ಸಾವು
Team Udayavani, Jan 9, 2024, 1:16 AM IST
ಅರಂತೋಡು: ಸುಳ್ಯ ತಾಲೂಕಿನ ಅರಂತೋಡು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ಘಟನೆಯೂ ಅಲ್ಲಲ್ಲಿ ವರದಿಯಾಗುತ್ತಿದೆ.
ಅರಂತೋಡು ಗ್ರಾಮದ ಅಡ್ಕಬಳೆಯಲ್ಲಿ ಶನಿವಾರ 3 ಆಡುಗಳನ್ನು ಬಲಿ ಪಡೆದಿದ್ದ ಚಿರತೆ ಅದೇ ಮನೆಯ 2 ವರ್ಷದ ಕರುವೊಂದನ್ನು ರವಿವಾರ ಕೊಂದು ಹಾಕಿದೆ.
ಅಡ್ಕಬಳೆಯ ಲೀಲಾವತಿ ಕರುವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದು, ಸಂಜೆಯಾದರೂ ಅದು ಮರಳಿ ಬಾರದ ಕಾರಣ ತೋಟಕ್ಕೆ ಹೋಗಿ ಹುಡುಕಿದಾಗ ಅರ್ಧ ತಿಂದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಚಿರತೆ ದಾಳಿಯಿಂದ ಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ರಾತ್ರಿ ಅವರದ್ದೇ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಆಡುಗಳ ಮೇಲೆ ದಾಳಿ ನಡೆಸಿದ ಚಿರತೆ 1 ಆಡನ್ನು ಭಕ್ಷಿಸಿ, 2 ಆಡುಗಳನ್ನು ಕೊಂದು ಹಾಕಿತ್ತು. ಸುಳ್ಯ ತಾ|ನ ಅರಂತೋಡು, ಮರ್ಕಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು ಜನರು ಓಡಾಡಲು ಭಯಪಡುವಂತಾಗಿದೆ.
ಸಾಕು ಪ್ರಾಣಿಗಳನ್ನು ಬಲಿ ಪಡೆದಿರುವ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು