Aranthodu ಕಿಂಡಿ ಅಣೆಕಟ್ಟಿನ ಸ್ಲ್ಯಾಬ್ ಕುಸಿದು ದಂಪತಿಗೆ ಗಾಯ
Team Udayavani, Jan 31, 2024, 12:15 AM IST
ಅರಂತೋಡು: ಅರಂತೋಡು ಗ್ರಾಮದ ದೇರಾಜೆ ಸಮೀಪ ಕಳುಬೈಲು ಎಂಬಲ್ಲಿ ಸುಮಾರು 45 ವರ್ಷಗಳ ಹಿಂದಿನ ಕಿಂಡಿ ಆಣೆಕಟ್ಟಿನ ಸ್ಲ್ಯಾಬ್ ಮುರಿದು ಬಿದ್ದು ದಂಪತಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದ್ದು ತಡವಾಗಿ ವರದಿಯಾಗಿದೆ.
ದೇರಾಜೆ ಕಳುಬೈಲು ನಿವಾಸಿ ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ತಮ್ಮ ರಬ್ಬರ್ ತೋಟಕ್ಕೆ ಕೆಲಸಕ್ಕೆ ಹೋಗಿ ಮರಳಿ ಈ ಕಿಂಡಿ ಆಣೆಕಟ್ಟಿನ ಮೂಲಕ ನಡೆದು ಬರುತ್ತಿದ್ದ ಸಂದರ್ಭ ಆಣೆಕಟ್ಟಿನ ಸ್ಲ್ಯಾಬ್ ಏಕಾಏಕಿ ಮುರಿದು ಬಿದ್ದಿದೆ.
ಈ ವೇಳೆ ಅವರಿಬ್ಬರು ಸುಮಾರು 15 ಅಡಿಗಳ ಆಳಕ್ಕೆ ಬಿದ್ದು ಗಾಯಗೊಂಡರು. ತತ್ಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಅವರನ್ನು ಅಲ್ಲಿಂದ ಮೇಲೆತ್ತಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯಿಂದ ವೇದಾವತಿಯವರ ಕಾಲು ಮುರಿತಕ್ಕೊಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಪ್ರಕಾಶರವರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು