Aranthodu: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ
Team Udayavani, Aug 1, 2023, 12:52 PM IST
ಅರಂತೋಡು: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.1 ರಂದು ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ವರದಿಯಾಗಿದೆ.
ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ
ಬಾಲಕನ ತಾಯಿ ಶಮೀರಾ ಮಗಳ ಚಿಕಿತ್ಸೆಗಾಗಿ ಕ್ಯಾಲಿಕೆಟ್ ತೆರಳಿದ್ದರು. ಈ ಸಂದರ್ಭ ಬಾಲಕ ಮನೆಯಲ್ಲಿ ಒಬ್ಬನೆ ಇದ್ದು, ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ಅ.1 ರಂದು ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ ನಿಂತಿಕಲ್ಲಿನ ಸಂಸ್ಥೆಯಲ್ಲಿ ಐಟಿಐಗೆ ದಾಖಲಾತಿ ಮಾಡಲಾಗಿತ್ತು. ಇಂದು ತರಗತಿ ಆರಂಭವಾಗಿ ಆತನು ತರಗತಿಗೆ ತೆರಳಬೇಕಾಗಿತ್ತು. ತರಗತಿಗೆ ತೆರಳಲು ತನಗೆ ಮನಸ್ಸಿಲ್ಲ ಎಂದು ಮನೆಯಲ್ಲಿ ಹೇಳಿಕೊಂಡಿದ್ದ. ಇದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು