ಅರಂತೊಟು: ಅಪರೂಪದ ಸಾರಿಬಾಳ ಹಾವು ರಕ್ಷಣೆ
ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ,ಇಲಿ
Team Udayavani, Dec 7, 2022, 2:53 PM IST
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಾಳ (ಫಾರೆಸ್ಟ್ ಕ್ಯಾಟ್ ಸ್ನೇಕ್) ಹಾವು ಪತ್ತೆಯಾಗಿದ್ದು ಇದನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ. ಇಲ್ಲಿನ ದೀಪಕ್ ಎಂಬುವರ ಮನೆಯಲ್ಲಿ ಸುಮಾರು 5 ಅಡಿ ಉದ್ದದ ಸಾರಿಬಾಳ ಹಾವು ಕೋಳಿಯನ್ನು ನುಂಗುತ್ತಿದ್ದ ಸಮಯ ಅದನ್ನು ಕಂಡ ಮನೆಯವರು ಉರಗಮಿತ್ರ ಸ್ನೇಕ್ ಅಶೋಕ್ ಲಾೖಲ ಅವರಿಗೆ ಮಾಹಿತಿ ನೀಡಿದ್ದಾರೆ.ಅವರು ಅದನ್ನು ರಕ್ಷಿಸಿದ್ದಾರೆ.
ಫಾರೆಸ್ಟ್ ಕ್ಯಾಟ್ಸ್ನೇಕ್ (ಸಾರಿಬಾಳ) ಹೆಚ್ಚಾಗಿ ಗುಜರಾತ್, ಕೇರಳ ಹಾಗೂ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶದ ಕಾಡುಗಳಲ್ಲಿ ಕಂಡು ಬರುತ್ತದೆ. ಇವು ಜನವಸತಿ ಪ್ರದೇಶದಲ್ಲಿ ಕಂಡುಬರುವುದು ತೀರಾ ವಿರಳ. ರಾತ್ರಿ ಸಮಯ ಹೆಚ್ಚಿನ ಸಂಚಾರ ನಡೆಸುವ ಇವುಗಳ ಪ್ರಮುಖ ಆಹಾರ ಸಣ್ಣ ಪಕ್ಷಿ, ಮೊಟ್ಟೆ,ಇಲಿ, ಬಾವಲಿ ಇತ್ಯಾದಿಯಾಗಿದೆ.
ಇವುಗಳಲ್ಲೂ ಎರಡು ಪ್ರಭೇದಗಳಿದ್ದು ಬೂದು ಬಣ್ಣ ಹಾಗೂ ಕಪ್ಪು ಚುಕ್ಕೆ, ಇನ್ನೊಂದು ಪ್ರಭೇದ ಕಪ್ಪು ಚುಕ್ಕೆಗಳೊಂದಿಗೆ ತಿಳಿಕೆಂಪು, ಕಂದು ಬಣ್ಣವನ್ನು ಹೊಂದಿರುತ್ತದೆ. ಇದು ವಿಷ ರಹಿತ ಹಾವಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ