ಬೆಳ್ತಂಗಡಿ: ಅಡಿಕೆ ಕಳ್ಳರ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Team Udayavani, Dec 24, 2020, 9:45 AM IST
ಬೆಳ್ತಂಗಡಿ: ಅಡಿಕೆ ಬೆಲೆ ದಾಖಲೆ ಮಟ್ಟಕ್ಕೆ ಏರುತ್ತಲೆ ಕಳ್ಳ ಕಾಕರ ಹಾವಳಿ ಹೆಚ್ಚಾಗಿದ್ದು ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು.
ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು ಠಾಣೆಯಲ್ಲಿ ಡೆಪಾಸಿಟ್ ಇಟ್ಟಿರುವುದರಿಂದ ಕಳ್ಳಕಾಕರಿಗೆ ವರದಾನ ವಾದಂತಿದೆ. ಗುರುವಾರ ಬೆಳಗ್ಗೆ ಮಚ್ಚಿನ ಪುಂಚಪಾದೆಯಲ್ಲಿ ಅಡಿಕೆ ಗೋಣಿ, ಅಡಿಕೆ ಸುಲಿಯುವ ಮಣೆ ಎಲ್ಲವೂ ಪತ್ತೆಯಾಗಿದೆ.
ಕರಾಟೆ ಕಿಟ್ಟ ಎಂಬುವರು ಒಬ್ಬನನ್ನು ಹಿಡಿದು, ಪೊಲೀಸರಿಗೆ ಹಾಗೂ ಸ್ಥಳೀಯರಿಗೆ ತಿಳಿಸಿದ್ದು, ಓರ್ವ ತಪ್ಪಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಕುರಿತು ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಡಿಕೆ ಕಳ್ಳರನ್ನು ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ