ಅನಾಥವಾಗಿ ಪತ್ತೆಯಾದ ನಾಗರಹಾವಿನ ಮೊಟ್ಟೆಗೆ ಕೃತಕ ಶಾಖ: ಹೊರಬಂದ ಮರಿಗಳು ಮತ್ತೆ ಕಾಡಿಗೆ


Team Udayavani, May 25, 2021, 11:01 AM IST

ಅನಾಥವಾಗಿ ಪತ್ತೆಯಾದ ನಾಗರಹಾವಿನ ಮೊಟ್ಟೆಗೆ ಕೃತಕ ಶಾಖ

ಪುತ್ತೂರು : ಅನಾಥವಾಗಿದ್ದ ನಾಗರ ಹಾವಿನ ಮೊಟ್ಟೆಗಳಿಗೆ ಕೃತಕ ಶಾಖ ನೀಡಿ ಮರಿ ಮಾಡಿ ಅರಣ್ಯಕ್ಕೆ ಬಿಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪರಿಸರ ಪ್ರೇಮಯಾಗಿರುವ ಯುವಕ ತೇಜಸ್ ಕಳೆಸ ಹಲವಾರು ವರ್ಷಗಳಿಂದ ಕಾಡು ಪ್ರಾಣಿ- ಪಕ್ಷಿಗಳನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸುಮಾರು 5 ಸಾವಿರಕ್ಕೂ ಮಿಕ್ಕಿದ ನಾಗರಹಾವುಗಳನ್ನು ಇವರು ಈಗಾಗಲೇ ರಕ್ಷಿಸಿ ಸುರಕ್ಷಿತ ತಾಣಕ್ಕೆ ಅವುಗಳನ್ನು ಸೇರಿಸುವ ಕೆಲಸ ಮಾಡಿದ್ದಾರೆ.

ಇದೇ ರೀತಿ ಇತ್ತೀಚಿಗೆ ಪುತ್ತೂರಿನ ಡಾ. ರಮೇಶ್ ಎನ್ನುವವರ ಮನೆಯಲ್ಲಿ 8 ಮೊಟ್ಟೆಗಳು ಪತ್ತೆಯಾಗಿತ್ತು. ಮನೆ ಮಂದಿ ಇದನ್ನು ತೇಜಸ್ ಗಮನಕ್ಕೆ ತಂದಿದ್ದರು. ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದ ತೇಜಸ್ ಈ ಮೊಟ್ಟೆಗಳು ನಾಗರಹಾವಿನ ಮೊಟ್ಟೆಗಳೆನ್ನುವುದನ್ನು ಖಾತರಿಪಡಿಸಿಕೊಂಡಿದ್ದರು.

ಮೊಟ್ಟೆಗಳನ್ನು ಹಾಗೆಯೇ ಬಿಟ್ಟಲ್ಲಿ ಮೊಟ್ಟೆ ಹೊಡೆದು ಹೋಗುವ ಸಾಧ್ಯತೆಯನ್ನು ಮನಗಂಡಿದ್ದ ತೇಜಸ್ ಅರಣ್ಯ ಅಧಿಕಾರಿಗಳ ಸಮ್ಮತಿಯ ಮೇರೆಗೆ ಮೊಟ್ಟೆಗಳನ್ನು ತನ್ನ ಮನೆಗೆ ತಂದು ಕೃತಕ ಶಾಖ ನೀಡುವ ವ್ಯವಸ್ಥೆಯನ್ನು ಮಾಡಿದ್ದರು. 57 ದಿನಗಳ ಬಳಿಕ ಎಲ್ಲಾ 8 ಮೊಟ್ಟೆಗಳಿಂದ ಮರಿಗಳು ಹೊರಬಂದಿದ್ದು, ಇದೀಗ ಈ‌ ಮರಿಗಳು ಸ್ವತಂತ್ರವಾಗಿ ಬದುಕಲು ಅವಕಾಶ ಕಲ್ಪಿಸಿದ್ದಾರೆ. ಪುತ್ತೂರು ಹೊರವಲಯದ ಅರಣ್ಯಕ್ಕೆ ಎಲ್ಲಾ ಮರಿಗಳನ್ನು ಬಿಡುವ ಮೂಲಕ ರಕ್ಣಣೆ ಒದಗಿಸಿದ್ದಾರೆ.

ಎಳವೆಯಿಂದಲೇ ಪರಿಸರ ಹಾಗೂ ಪ್ರಾಣಿ-ಪಕ್ಷಿಗಳ ಮೇಲೆ ಅಪಾರ‌ ಕಾಳಜಿ ಹೊಂದಿರುವ ತೇಜಸ್ ಕಾಲೇಜು ದಿನಗಳಲ್ಲೇ ಹಾವುಗಳ ಹಾಗೂ ಕಾಡಿನಿಂದ ನಾಡಿಗೆ ಬರುವ ಸಣ್ಣ ಪ್ರಾಣಿಗಳ ರಕ್ಷಣೆ ಕಾರ್ಯದಲ್ಲಿ ನಿರತರಾಗಿದ್ದರು. ಜಿಂಕೆ, ಬರಿಂಕ, ಕೆಂಚಳಿಲು ಸೇರಿದಂತೆ ಹಲವು ಪ್ರಾಣಿಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ತೇಜಸ್ ಹಾವುಗಳನ್ನು ಹಿಡಿಯುವದಲ್ಲೂ ನಿಸ್ಸೀಮರಾಗಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಯಾವ ಭಾಗದಲ್ಲೂ ಮನೆಗೆ ಅಥವಾ ಇತರ ಜನವಸತಿ ಪ್ರದೇಶಗಳಿಗೆ ವಿಷಕಾರಿ ಹಾವುಗಳು ಕಾಣಿಸಿಕೊಂಡಲ್ಲಿ ತೇಜಸ್ ಗೆ ಕರೆ ಬರುವುದು ಸಾಮಾನ್ಯವಾಗಿದೆ. ಇಂಥ ವಿಷಕಾರಿ ಹಾವುಗಳನ್ನು ತನ್ನ ಚಾಕಚಕ್ಯತೆಯಿಂದ ಸಲೀಸಾಗಿ ಹಿಡಿದು ಅವುಗಳನ್ನು ಅರಣ್ಯ ಇಲಾಖೆಯ ಒಪ್ಪಿಗೆಯ ಬಳಿಕ ಕಾಡಿಗೆ ಬಿಡುವ ಕೆಲಸವನ್ನು ಮಾಡುತ್ತಿದ್ದಾರೆ.

ಹಾವುಗಳ ರಕ್ಷಣೆಯ ಸಂದರ್ಭದಲ್ಲಿ ಹಲವು ರೀತಿಯ ತೊಂದರೆಗಳನ್ನೂ ತೇಜಸ್ ಅನುಭವಿಸಿದ್ದಾರೆ. ಒಂದು ಬಾರಿ ನಾಗರಹಾವೊಂದನ್ನು ರಕ್ಷಿಸುವ ವೇಳೆ ಹಾವು ಅವರ ಕೈಗೆ ಕಚ್ಚಿದ ಪರಿಣಾಮ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಆ ಬಳಿಕ ಹಾವು ಹಿಡಿಯುವ ಕಾರ್ಯವನ್ನು ನಿಲ್ಲಿಸಲು ತೀರ್ಮಾನಿಸಿದ್ದ ತೇಜಸ್ ಗೆ ಹಲವರು ವಿಷಕಾರಿ ಹಾವುಗಳಿಂದಾಗಿ ತೊಂದರೆಯೊಳಗಾಗುವುದನ್ನು ಮನಗಂಡು ಮತ್ತೆ ಹಾವು ಹಿಡಿಯುವ ಹವ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.