ಶಿಕ್ಷಕನಿಂದ ಹಲ್ಲೆ ಆರೋಪ,ದೃಶ್ಯ ವೈರಲ್
Team Udayavani, Feb 9, 2018, 10:59 AM IST
ಪುಂಜಾಲಕಟ್ಟೆ: ಬಾಲಕಿಗೆ ಶಿಕ್ಷಕ ಹಲ್ಲೆ ನಡೆಸಿದ್ದೆಂಬ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ಆರೋಪ ವೈರಲ್ ಆದ ಘಟನೆ ಗುರುವಾರ ಸಂಭವಿಸಿದೆ.
ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆಯ ಮದ್ರಸದ ಧರ್ಮ ಗುರು 9ರ ಹರೆಯದ ವಿದ್ಯಾರ್ಥಿನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪ ವಾಟ್ಸಾಪ್ನಲ್ಲಿ ಪ್ರಸಾರವಾಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸುದ್ದಿ ತಿಳಿದ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ. ಆದರೆ ಬಾಲಕಿಯ ಮನೆಯವರು ಹಲ್ಲೆ ನಡೆಸಿರುವುದನ್ನು ಅಲ್ಲಗೆಳೆದಿದ್ದಾರೆ. ಬಾಲಕಿ ಮದ್ರಸಕ್ಕೆ ಗೈರು ಹಾಜರಾಗಿರುವುದಕ್ಕೆ ಶಿಕ್ಷಕ ಕಿವಿ ಹಿಂಡಿ ಗದರಿಸಿದ್ದರು. ಈ ಬಗ್ಗೆ ಅವರಲ್ಲಿ ಮಾತುಕತೆ ನಡೆಸಲಾಗಿದೆ. ಆದರೆ ವಾಟ್ಸಾಪ್ನಲ್ಲಿ ಇರುವ ಫೋಟೋ ತನ್ನ ಮಗಳದ್ದಲ್ಲ ಎಂದು ಬಾಲಕಿಯ ತಂದೆ ಸುಲೈಮಾನ್ ಅವರು ಹೇಳಿದ್ದಾರೆಂದು ಪುಂಜಾಲಕಟ್ಟೆ ಠಾಣಾಧಿಕಾರಿ ರಾಮ ನಾಯ್ಕ ತಿಳಿಸಿದ್ದಾರೆ. ತನಿಖೆ ವೇಳೆ ಧರ್ಮಗುರು ಅಬ್ದುಲ್ ಕರೀಂ ಸ್ಥಳದಲ್ಲಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…