‘ದೇವರ ಆಶೀರ್ವಾದ, ಚಿನ್ನ ಗೆದ್ದೆ’


Team Udayavani, Oct 15, 2018, 3:29 PM IST

15-october-13.gif

ಸುಬ್ರಹ್ಮಣ್ಯ: ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ಸನ್ನಿಧಾನದಲ್ಲಿ ಉರುಳು ಸೇವೆ ಸಲ್ಲಿಸುತ್ತೇನೆ ಎಂದು ಹರಕೆ ಹೊತ್ತುಕೊಂಡಿದ್ದೆ. ಅದರಂತೆ ಏಷ್ಯನ್‌ ಗೇಮ್ಸ್‌ನ ರಿಲೇಯಲ್ಲಿ ಚಿನ್ನದ ಪದಕವನ್ನು ಭಾರತೀಯ ತಂಡ ಪಡೆದುಕೊಂಡಿದೆ. ಮಿಕ್ಸೆಡ್‌ ರಿಲೇಯಲ್ಲಿ ಬೆಳ್ಳಿ ಪದಕ ಪಡೆದಿದ್ದೇವೆ. ದೇವರಲ್ಲಿ ಹೇಳಿಕೊಂಡ ಹರಕೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ. ಹರಕೆ ತೀರಿಸಿದ ಬಳಿಕ ಸಂತೃಪ್ತಿಗೊಂಡಿದ್ದೇನೆ ಎಂದು ಅಂತಾರಾಷ್ಟ್ರೀಯ ಆ್ಯತ್ಲೀಟ್‌ ಎಂ.ಆರ್‌. ಪೂವಮ್ಮ ಹೇಳಿದರು. ರವಿವಾರ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದ ಅವರು, ಬಳಿಕ ಶ್ರೀ ದೇವರ ದರುಶನ ಪಡೆದು, ಶೇಷ ಸೇವೆ ನೆರವೇರಿಸಿದರು. ಬಳಿಕ ಶ್ರೀ ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ದರ್ಶನ ಮಾಡಿದರು.

ಪತ್ರಕರ್ತರ ಜತೆ ಮಾತನಾಡಿದ ಪೂವಮ್ಮ, ನಾನು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಭಕ್ತೆ. ಪ್ರತೀ ವರ್ಷ ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತೇನೆ. ಸ್ಪರ್ಧೆ ವೇಳೆ ಗಾಯಗಳು ಉಂಟಾಗದೆ ಚಿನ್ನ ಗೆಲ್ಲುವಂತಾದರೆ ಉರುಳು ಸೇವೆ ಮಾಡುತ್ತೇನೆ ಎಂದು ಹರಕೆ ಹೇಳಿಕೊಂಡಿದ್ದೆ. ದೇವರ ಆಶೀರ್ವಾದದಿಂದ ಚಿನ್ನ ಗೆಲ್ಲುವಂತಾಗಿದೆ‌ ಎಂದರು.

ಏಷ್ಯನ್‌ ಚಾಂಪಿಯನ್‌ಷಿಪ್‌ ಮತ್ತು ಜಾಗತಿಕ ಕ್ರೀಡಾಕೂಟ ಮುಂದೆ ನಡೆಯಲಿದೆ. ಅದಕ್ಕೆ ತರಬೇತಿ ಪಡೆಯುತ್ತಿದ್ದೇನೆ. ಮುಂದಿನ ತಿಂಗಳ 23ರಿಂದ ಪಟಿಯಾಲದಲ್ಲಿ ನಡೆಯುವ ತರಬೇತಿಗೆ ತೆರಳುತ್ತಿರುವೆ. ಈ ಬಾರಿ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತವು ಅತ್ಯುತ್ತಮ ಸಾಧನೆ ಮಾಡಿದೆ. ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಸಾಧನೆ ಮಾಡಿದ ನಂತರ ಸರಕಾರವು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಸರಕಾರ 40 ಲಕ್ಷ ರೂ. ನೀಡಿದೆ. ಮುಂದೆ ಈ ಮೊತ್ತವನ್ನು ಅಧಿಕಗೊಳಿಸಿ ನಿವೇಶನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.

ಪೂವಮ್ಮ ಅವರನ್ನು ದೇವಸ್ಥಾನದ ಶಿಷ್ಟಾಚಾರ ಅಧಿಕಾರಿ ಕೆ.ಎಂ. ಗೋಪಿನಾಥ್‌ ನಂಬೀಶ್‌, ಶಿಷ್ಟಾಚಾರ ವಿಭಾಗದ ಪ್ರಮೋದ್‌ ಕುಮಾರ್‌ ಎಸ್‌., ಹರೀಶ್‌ ಕೇನ್ಯ ಸ್ವಾಗತಿಸಿದರು. ರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಶಿವರಾಮ್‌ ಯೇನೆಕಲ್ಲು, ಪೂವಮ್ಮ ಅವರ ತಂದೆ ರಾಜು, ತಾಯಿ ಜಾಜಿ, ಸಹೋದರ ಮಂಜು, ಸಹೋದರಿ ನಿಖಿತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.