Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ
Team Udayavani, Feb 24, 2024, 12:32 AM IST
ಕಡಬ: ಮನೆಯ ಬಳಿ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿರುವ ಆರೋಪದಲ್ಲಿ ಕಡಬ ಪೊಲೀಸರು ನಾಲ್ವರನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ.
ದೂರಿನ ವಿವರ: ಮರ್ದಾಳ ಶಿವಾಜಿನಗರ ನಿವಾಸಿ ದಿ| ಇಲ್ಯಾಸ್ ಅವರ ಪುತ್ರ ಫಯಾಜ್ ಪೊಲೀಸರಿಗೆ ದೂರು ನೀಡಿದವರು. ಗುರುವಾರ ಸಂಜೆ ನನ್ನ ತಾಯಿ ಮತ್ತು ಸಹೋದರರೊಂದಿಗೆ ಮನೆಯಲ್ಲಿದ್ದಾಗ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ನ ಮನೆ ಯಾವುದು ಎಂದು ಕೇಳಿದರು.
ನಾವು ಇದು ರಿಯಾಝ್ನ ಮನೆ ಅಲ್ಲ ಎಂದರೂ ಮಹಿಳೆ ಅಳುತ್ತಾ ನಿಂತಳು. ಆಗ ನಮ್ಮ ತಾಯಿ ಆಕೆಯನ್ನು ಸಮಾಧಾನಿಸಿ ಮನೆ ಪಕ್ಕದ ಇಬ್ರಾಹಿಂ ಎಂಬ ಹುಡುಗನ ಜತೆ ಆಕೆಯನ್ನು ಮರ್ದಾಳ ಬಸ್ ನಿಲ್ದಾಣಕ್ಕೆ ಬಿಟ್ಟು ಬರುವಂತೆ ತಿಳಿಸಿದ್ದರು.
ಅದರಂತೆ ಇಬ್ರಾಹಿಂ ಮಹಿಳೆಯನ್ನು ಸ್ಕೂಟರ್ನಲ್ಲಿ ಕುಳ್ಳಿರಿಸಿಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಆರೋಪಿಗಳಾದ ಜಿನಿತ್ ಕುಮಾರ್, ಉಮೇಶ್, ವಿನುತ್, ನಾಗೇಶ್ ಹಾಗೂ ಶ್ರೀಕರ ಸೇರಿದಂತೆ 10ರಿಂದ 15 ಮಂದಿ ನನ್ನನ್ನು° ಕರೆದು ಸ್ಕೂಟರ್ನಲ್ಲಿ ಹೋದ ಮಹಿಳೆಯ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಆ ವೇಳೆ ಸ್ಥಳದಲ್ಲಿದ್ದ ನನ್ನ ತಾಯಿ ಸಫಿಯಾ ಅಡ್ಡ ಬಂದಿದ್ದು, ಅವರಿಗೂ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು