ನಗರಸಭೆ ಅಧಿಕಾರಿಗಳಿಂದ ಹಣ್ಣಿನಂಗಡಿಗೆ ದಾಳಿ


Team Udayavani, Jun 25, 2019, 5:00 AM IST

30

ನಗರ: ನಗರದ ಗಾಂಧಿಕಟ್ಟೆಯ ಬಳಿಯ ಮುಖ್ಯರಸ್ತೆಯ ಬದಿ ಫುಟ್‌ಪಾತ್‌ನಲ್ಲಿರುವ ಹಣ್ಣಿನ ಅಂಗಡಿಗಳಲ್ಲಿ ಗ್ರಾಹಕರಿಗೆ ವಂಚಿಸಿ ಕೊಳೆತ ಹಣ್ಣುಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕ ದೂರಿನ ಮೇರೆಗೆ ನಗರಸಭೆ ಅಧಿಕಾರಿಗಳು ಸೋಮವಾರ ಕಾರ್ಯಾಚರಣೆ ನಡೆಸಿ ಪರಿಶೀಲಿಸಿದರು.

ನಗರದ ಹೃದಯಭಾಗದ ರಸ್ತೆ ಬದಿ ವ್ಯಾಪಾರ ನಡೆಸುತ್ತಿರುವ ಕೆಲವು ವ್ಯಾಪಾರಿಗಳು ಕೊಳೆತ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನುವ ಕುರಿತು ರಜೆಯಲ್ಲಿ ಊರಿಗೆ ಬಂದಿರುವ ಸೈನಿಕ ಕೆದಂಬಾಡಿ ನಿವಾಸಿ ಲಕ್ಷ್ಮೀಶ ಪಾಟಾಳಿ ಸ್ಥಳೀಯಾಡಳಿತ ನಗರಸಭೆಗೆ ದೂರು ನೀಡಿದ್ದರು.

ಫುಟ್‌ಪಾತ್‌ ಸ್ಥಳವನ್ನು ಅತಿಕ್ರಮಿಸಿಕೊಂಡು ಹಣ್ಣು ಕಳಪೆ ಹಾಗೂ ಕೊಳೆತ ಹಣ್ಣುಗಳನ್ನು ಮಾರಾಟ ಮಾಡಿ ವಂಚಿಸುತ್ತಿರುವ ಕುರಿತು ಅಂಗಡಿಯವರಲ್ಲಿ ಪ್ರಶ್ನಿಸಿದ ಸಂದರ್ಭ ಉಡಾಫೆಯ ಮಾತುಗಳನ್ನಾಡುವುದು ಮತ್ತು ಈ ಕುರಿತು ಕ್ರಮ ಕೈಗೊಳ್ಳಬೇಕಾದ ನಗರಸಭೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು.

ಕಾರ್ಯಾಚರಣೆ
ಸಾರ್ವಜನಿಕ ದೂರನ್ನು ಆಧರಿಸಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಹಾಗೂ ಪರಿಸರ ಅಭಿಯಂತರ ಗುರುಪ್ರಸಾದ್‌ ಶೆಟ್ಟಿ ನೇತೃತ್ವದಲ್ಲಿ ಹಣ್ಣಿನ ಅಂಗಡಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ರಂಬೂಟಾನ್‌, ಮೂಸಂಬಿ ಸಹಿತ ಕೆಲವು ಕೊಳೆತ ಹಣ್ಣುಗಳನ್ನು ಮಾರಾಟ ಮಾಡುತ್ತಿರುವುದು ಹಾಗೂ ಅಂಗಡಿಗಳ ಬಳಿ ಸ್ವತ್ಛತೆ ಕಾಪಾಡಿಕೊಳ್ಳದೇ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ಅಂಗಡಿಗಳನ್ನು ತೆರವುಗೊಳಿಸಬೇಕು. ಉದ್ಯಮ ಪರವಾನಿಗೆಯನ್ನು ಪಡೆದೇ ವ್ಯಾಪಾರ ನಡೆಸಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಹೊಟೇಲ್‌ಗೆ ದಾಳಿ
ಅನಂತರ ಪಕ್ಕದ ಲಿಬರ್ಟಿ ಹೊಟೇಲ್‌ಗೆ ದಾಳಿ ನಡೆಸಿದ ಅಧಿಕಾರಿಗಳು ಸ್ವತ್ಛತೆಗೆ ನಿರ್ಲಕ್ಷ್ಯ ವಹಿಸಿರುವುದನ್ನು ಕಂಡು ಎಚ್ಚರಿಕೆ ನೀಡಿದರು. ಮಳೆಗಾಲದಲ್ಲಿ ಹೊಟೇಲ್‌ಗ‌ಳಲ್ಲಿ ಕಡ್ಡಾಯವಾಗಿ ಗ್ರಾಹಕರಿಗೆ ಬಿಸಿ ನೀರು ಕೊಡಬೇಕು. ಆದರೆ ಈ ಹೊಟೇಲ್‌ನಲ್ಲಿ ನೀಡುತ್ತಿಲ್ಲ. ಈ ಹಿಂದೆಯೂ ಹೊಟೇಲ್‌ನವರಿಗೆ ಎಚ್ಚರಿಕೆ ನೀಡಲಾಗಿದೆ. ಸರಿಪಡಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ನಿರೀಕ್ಷಕ ರಾಮಚಂದ್ರ ಎಚ್ಚರಿಕೆ ನೀಡಿದರು.

ನೋಟಿಸ್‌ ನೀಡುತ್ತೇವೆ
ಇಲ್ಲಿ ಉದ್ಯಮ ಪರವಾನಿಗೆ ಪಡೆಯದೆ ಹಣ್ಣಿನ ವ್ಯಾಪಾರ ನಡೆಸಲಾಗುತ್ತಿದೆ. ಕೊಳೆತ ಹಣ್ಣುಗಳನ್ನು ಮಾರಾಟ ಮಾಡುತ್ತಿರುವುದು ಹಾಗೂ ಸ್ವತ್ಛತೆಗೆ ಗಮನಹರಿಸದಿರುವುದು ಕಂಡುಬಂದಿದೆ. ಈ ಅಂಗಡಿಯವರಿಗೆ ನೋಟಿಸ್‌ ನೀಡಲಾಗುವುದು. ಅನಂತರ ಕಾನೂನು ಕ್ರಮದ ಕುರಿತೂ ಯೋಚಿಸಲಾಗುತ್ತಿದೆ.
– ರಾಮಚಂದ್ರ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.