ಗಮನ ಸೆಳೆದ ಮಕ್ಕಳ ಪರಿಸರ ರಕ್ಷಣೆ ಬೀದಿ ನಾಟಕ


Team Udayavani, Jun 7, 2019, 5:50 AM IST

f-33

ಸುಬ್ರಹ್ಮಣ್ಯ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಕೈಕಂಬ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಬೀದಿ ನಾಟಕ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿದರು.

ಕೈಕಂಬ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಕಂಬ ಒಕ್ಕೂಟದ ಆಶ್ರಯದಲ್ಲಿ ಗುರುವಾರ “ಪರಿಸರ ಕಡೆಗೆ ನಮ್ಮ ನಡಿಗೆ’ ಘೋಷವಾಕ್ಯದ ಜತೆಗೆ “ಸ್ವಚ್ಛಮೇವ ಜಯತೇ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಸಿ ನೆಡುವ ಮೂಲಕ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೈಕಂಬ ಒಕ್ಕೂಟದ ಅಧ್ಯಕ್ಷ ಲೋಕನಾಥ್‌ ಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಶಾಲಾ ಮಕ್ಕಳು ಗುಂಡ್ಯ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಪರಿಸರ ಉಳಿಸಿ ಎನ್ನುವ ಘೋಷಣೆಗಳನ್ನು ಮೊಳಗಿಸಿ ಜಾಥಾ ನಡೆಸಿದರು. ಬಳಿಕ ವಿದ್ಯಾರ್ಥಿಗಳಿಂದ ಕೈಕಂಬ ಜಂಕ್ಷನ್‌ನಲ್ಲಿ ಬೀದಿ ನಾಟಕ ಪ್ರದರ್ಶನ ನಡೆಯಿತು.

ನಮ್ಮ ಪರಿಸರವನ್ನು ಸ್ವಚ್ಛವಾಗಿಸಿಡೋಣ, ವಿಷಯುಕ್ತ ಆಹಾರ ಕೈಬಿಟ್ಟು ಶುದ್ಧ ಆಹಾರ ಸೇವಿಸುವುದು ಅಗತ್ಯ. ಪರಿಸರ ಮಾಲಿನ್ಯ ರಹಿತವಾಗಿ ಇರಿಸುವುದರಿಂದ ರೋಗ ರುಜಿನಗಳು ಬಾಧಿಸಲಾರವು. ಶುಚಿತ್ವ ಕಾಪಾಡುವ ಮೂಲಕ ಸುಂದರ ಬದುಕು ಕಟ್ಟಿಕೊಳ್ಳಬೇಕು. ಮೂಢನಂಬಿಕೆಯಿಂದ ದೂರವಿದ್ದು ಸ್ವಚ್ಛ ಸುಂದರ ಜೀವನ ಶೈಲಿಯಿಂದ ಸಮಾಜ ಜತೆಗೆ ದೇಶದ ಸಮಗ್ರತೆಗೆ ನಾವೆಲ್ಲರೂ ಕೈ ಜೋಡಿಸಬೇಕು ಎನ್ನುವ ಸಂದೇಶವಿರುವ ಬೀದಿ ನಾಟಕ ಗಮನ ಸೆಳೆಯಿತು. ಹೆದ್ದಾರಿಯಲ್ಲಿ ತೆರಳುತ್ತಿದ್ದವರೆಲ್ಲ ವಾಹನ ನಿಲ್ಲಿಸಿ ಬೀದಿ ನಾಟಕವನ್ನು ವೀಕ್ಷಿಸಿದ್ದು ವಿಶೇಷವಾಗಿತ್ತು. ತೋಟಗಾರಿಕೆ ಇಲಾಖೆಯಿಂದ ನೀಡಲಾಗಿದ್ದ ವಿವಿಧ ಜಾತಿಯ ಸಸಿಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾನಿರತ ವಿನೋದ್‌, ಎಸ್‌ಡಿಎಂಸಿ ಅಧ್ಯಕ್ಷ ಮೋಹನ ಪಳ್ಳಿಗದ್ದೆ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೈಕಂಬ ಒಕ್ಕೂಟದ ಕಾರ್ಯದರ್ಶಿ ತುಳಿಸಿ, ಮುಖ್ಯ ಶಿಕ್ಷಕಿ ಪುಷ್ಪಾವತಿ ಕೆ.ಬಿ., ಶಿಕ್ಷಕಿಯರಾದ ಪವಿತ್ರಾ ಎ., ಅಂಬಿಕಾ ಎನ್‌., ವನಿತಾ ಕೆ., ಸಿದ್ದಲಿಂಗ ಸ್ವಾಮಿ ಬಿ.ಎಸ್‌., ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಸ್ತೆ ಬದಿ ಕಸ ಹಾಕಬೇಡಿ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುವ ರಾಜ್ಯ ಹೆದ್ದಾರಿ ಬದಿಯಲ್ಲೇ ಕೈಕಂಬ ಶಾಲೆಯಿದೆ. ಗುರುವಾರ ಬೀದಿ ನಾಟಕ ನಡೆಯುತ್ತಿದ್ದ ಸಂದರ್ಭ ಕೈಕಂಬ ಶಾಲೆಯ ವಿದ್ಯಾರ್ಥಿ ಬಬಿನ್‌, ಯಾತ್ರಾರ್ಥಿಗಳ ಬಳಿ “ಪ್ಲೀಸ್‌ ರಸ್ತೆ ಬದಿ ಕಸ ಬಿಸಾಕಬೇಡಿ’ ಎಂದು ಹೇಳುವ ಮೂಲಕ ಗಮನಸೆಳೆದ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.