ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ
Team Udayavani, May 31, 2020, 5:24 AM IST
ಬಂಟ್ವಾಳ: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್ ಇಲಾಖೆ ವತಿಯಿಂದ ಚ್ಯವನಪ್ರಾಶ್ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಇದನ್ನು ವಿತರಿಸಲಾಗುವುದು ಎಂದರು.
ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ 351 ಆಶಾ ಕಾರ್ಯಕರ್ತೆಯರಿಗೂ ಆಯುಷ್ ಇಲಾಖೆ ವತಿಯಿಂದ ಇದನ್ನು ವಿತರಿಸಲಾಗುತ್ತದೆ. ಈ ಲೇಹ್ಯದಲ್ಲಿ ನೆಲ್ಲಿಕಾಯಿ, ಅಮೃತಬಳ್ಳಿ, ಅಶ್ವಗಂಧ, ಯಷ್ಟಿಮಧು, ತುಪ್ಪ, ಜೇನುತುಪ್ಪ ಇತ್ಯಾದಿ ಜೀವನೀಯ ಅಷ್ಟ ವರ್ಗ ದ್ರವ್ಯಗಳನ್ನೊಳಗೊಂಡಿದೆ ಎಂದು ಡಾ| ಮಣಿಕರ್ಣಿಕ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!