ಬಿ.ಸಿ. ರೋಡ್‌, ಬಂಟ್ವಾಳ ಪೇಟೆ ರಸ್ತೆಗಳಲ್ಲಿ ಹೊಂಡ

 ಸುಗಮ ವಾಹನ ಸಂಚಾರಕ್ಕೆ ಸಮಸ್ಯೆ ; ಶೀಘ್ರ ದುರಸ್ತಿಗೆ ಆಗ್ರಹ

Team Udayavani, Jan 23, 2020, 11:29 PM IST

kaa-38

ಬಂಟ್ವಾಳ : ಗ್ರಾಮೀಣ ಭಾಗ ಗಳಲ್ಲಿ ಸಾಮಾನ್ಯವಾಗಿ ರಸ್ತೆಗಳಲ್ಲಿ ಹೊಂಡ ಬಿದ್ದರೆ ಅದರ ದುರಸ್ತಿಗೆ ಕ್ರಮ ಕೈಗೊಳ್ಳುವುದು ಕಡಿಮೆ. ಆದರೆ ಪ್ರಸ್ತುತ ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಂಟ್ವಾಳ, ಬಿ.ಸಿ. ರೋಡ್‌ ಪೇಟೆಯ ರಸ್ತೆಗಳಲ್ಲಿ ಹೊಂಡ ಸೃಷ್ಟಿಯಾಗಿದ್ದರೂ, ಕನಿಷ್ಠ ತೇಪೆ ಕಾರ್ಯವೂ ಆಗಿಲ್ಲ ಎಂಬ ಆರೋಪಗಳಿವೆ.

ಬಂಟ್ವಾಳ ನಗರದಲ್ಲಿ ಸಾಗುವ ಮುಖ್ಯ ರಸ್ತೆಯ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಹೊಂಡಗಳು ಸೃಷ್ಟಿಯಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಿ.ಸಿ. ರೋಡ್‌-ಕೈಕುಂಜೆ ರಸ್ತೆಯ ಬಿ.ಸಿ. ರೋಡ್‌ ಜಂಕ್ಷನ್‌ನಲ್ಲೇ ಸಾಕಷ್ಟು ಹೊಂಡಗಳು ಸೃಷ್ಟಿ ಯಾಗಿದ್ದು, ವಾಹನಗಳು ಎದುಬಿದ್ದು ಸಾಗುತ್ತಿವೆ. ಇದರ ಜತೆಗೆ ಇತರ ಒಳರಸ್ತೆಗಳ ಹೊಂಡಗಳಿಗೂ ಮುಕ್ತಿ ನೀಡಬೇಕಿದೆ.

ಬಿ.ಸಿ. ರೋಡ್‌ ಜಂಕ್ಷನ್‌ನಿಂದ ಮಿನಿ ವಿಧಾನಸೌಧದವರೆಗೂ ಸಾಕಷ್ಟು ಹೊಂಡ ಗಳಿವೆ. ತಾ.ಪಂ. ಸಂಪರ್ಕ ರಸ್ತೆಯಲ್ಲೂ ಹೊಂಡ ಸೃಷ್ಟಿಯಾಗಿದೆ. ಶಾಶ್ವತ ಪರಿಹಾರಕ್ಕೆ ಯೋಜನೆ ರೂಪು ಗೊಂಡಿದ್ದರೂ ತಾತ್ಕಾಲಿಕ ಪರಿ ಹಾರ ನೀಡುವ ನಿಟ್ಟಿನಲ್ಲಿ ಕನಿಷ್ಠ ತೇಪೆ ಕಾರ್ಯವನ್ನಾದರೂ ಮಾಡಬೇಕಿದೆ ಎಂದು ಸಾರ್ವ ಜನಿಕರು ಆಗ್ರಹಿಸುತ್ತಿದ್ದಾರೆ.

ಬಂಟ್ವಾಳ ಬೈಪಾಸ್‌ ಮೂಲಕ ಸಾಗುವ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ನಡೆ ಯುತ್ತಿರುವುದರಿಂದ, ಹೆದ್ದಾರಿಯಲ್ಲಿ ಸಾಗ ಬೇಕಿರುವ ಹೆಚ್ಚಿನ ಸಂಖ್ಯೆಯ ವಾಹನಗಳು ಬಂಟ್ವಾಳ ಪೇಟೆ ಮೂಲಕವೇ ಸಾಗುತ್ತಿರುವುದರಿಂದ ಹೊಂಡ ಮುಚ್ಚಲು ಶೀಘ್ರ ಕ್ರಮ ಕೈಗೊಳ್ಳಬೇಕಿದೆ.

ಮಳೆಗಾಲದ ದುರಸ್ತಿಯಾಗಿಲ್ಲ !
ಕಳೆದ ಮಳೆಗಾಲದಲ್ಲೇ ಈ ಹೊಂಡಗಳು ಕಂಡುಬಂದಿದ್ದು, ಅದರಲ್ಲಿ ನೀರು ನಿಂತ ಪರಿಣಾಮ ವಾಹನಗಳು ಸಾಗುವ ವೇಳೆ ನೀರು ಎರಚಿ ಪಾದಾಚಾರಿಗಳು ಒದ್ದೆಯಾದ ಘಟನೆಯೂ ಸಂಭವಿಸಿತ್ತು. ನೀರು ನಿಂತು ಹೊಂಡಗಳಿರುವುದು ತಿಳಿಯದೆ ವಾಹನ ಚಾಲಕರು, ಸವಾರ ರಿಗೂ ತೊಂದರೆಯುಂಟಾಗಿತ್ತು.

ಸಾಮಾನ್ಯವಾಗಿ ಮಳೆ ಕಾರಣದಿಂದ ಹಾನಿಯಾದ ರಸ್ತೆಗಳಿಗೆ ತೇಪೆ ಕಾರ್ಯ ನಡೆಯುತ್ತದೆಯಾದರೂ ಇಲ್ಲಿ ತೇಪೆ ಕಾರ್ಯವೂ ನಡೆದಿಲ್ಲ. ಹೆದ್ದಾರಿ ಸಮಸ್ಯೆ ಗಳಿಗೆ ಮುಕ್ತಿ ಸಿಕ್ಕರೂ ನಗರ ಒಳಭಾಗದ ರಸ್ತೆಗಳಲ್ಲಿ ತೊಂದರೆ ಸಾಕಷ್ಟಿದೆ. ಈ ಕುರಿತು ಪುರಸಭೆ ಗಮನಹರಿಸಬೇಕಿದೆ ಎಂದು ಜನತೆ ಅಭಿಪ್ರಾಯಿಸುತ್ತಿದ್ದಾರೆ.

ರಸ್ತೆಯಲ್ಲೇ ಮ್ಯಾನ್‌ಹೋಲ್‌
ಬಿ.ಸಿ. ರೋಡ್‌ನಿಂದ ಬಂಟ್ವಾಳ ಪೇಟೆಗೆ ಸಾಗುವ ರಸ್ತೆಯಲ್ಲಿ ಮೇಲ್ಭಾಗಕ್ಕೆ ಕಾಣುವ ರೀತಿಯಲ್ಲಿ ರಸ್ತೆಯಲ್ಲೇ ಮ್ಯಾನ್‌ಹೋಲ್‌ಗ‌ಳಿದ್ದು, ಇದೂ ವಾಹನಗಳ ಸಂಚಾರಕ್ಕೆ ತೊಂದರೆ ನೀಡುತ್ತಿದೆ. ರಸ್ತೆಯ ಹೊಂಡಗಳು, ಮ್ಯಾನ್‌ಹೋಲ್‌ಗ‌ಳು ದೊಡ್ಡ ವಾಹನಗಳ ಸಂಚಾರಕ್ಕೆೆR ತೊಂದರೆ ನೀಡದೇ ಇದ್ದರೂ ಸಣ್ಣ ವಾಹನಗಳಿಗೆ ಸಾಕಷ್ಟು ತೊಂದರೆ ನೀಡುತ್ತಿವೆ. ಪೈಪ್‌ ಕಾಮಗಾರಿ ವೇಳೆ ರಸ್ತೆಯನ್ನು ಅಗೆದು ಹಾಗೇ ಬಿಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅನುದಾನ ಬಂದರೆ ದುರಸ್ತಿ
ಅನುದಾನ ಬಂದ ತತ್‌ಕ್ಷಣ ದುರಸ್ತಿಗೆ ಕ್ರಮ ಕೈಗೊಳ್ಳುತ್ತೇವೆ. ಪ್ರಸ್ತುತ ಯಾವುದೇ ಅನುದಾನಗಳು ಬಂದಿಲ್ಲ. ಶಾಸಕರ ನಗರ ಸುಂದರೀಕರಣ ಯೋಜನೆಯಲ್ಲಿ ಬಿ.ಸಿ. ರೋಡ್‌ನ‌ ಕೈಕುಂಜೆ ರಸ್ತೆಯ ಪ್ರಾರಂಭದ ಭಾಗಕ್ಕೆ 2 ಕೋ. ರೂ.ಗಳ ಕ್ರಿಯಾಯೋಜನೆ ಆಗಿದೆ ಎನ್ನಲಾಗುತ್ತಿದೆ. ಅನುದಾನ ಬಂದರೆ ರಸ್ತೆಗಳ ಹೊಂಡಗಳಿಗೆ ತೇಪೆ ಹಾಕುವ ಕಾರ್ಯ ಮಾಡಲಾಗುವುದು.
 - ಲೀನಾ ಬ್ರಿಟ್ಟೋ, ಮುಖ್ಯಾಧಿಕಾರಿ, ಬಂಟ್ವಾಳ ಪುರಸಭೆ

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.