ಪ್ರಗತಿಯಲ್ಲಿ ಬಿ.ಮೂಡ ಕಾಲೇಜು ಕಟ್ಟಡ ಕಾಮಗಾರಿ

1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Feb 10, 2021, 2:44 PM IST

B. Mooda college building work in progress

ಬಂಟ್ವಾಳ: ನಗರ ಭಾಗದ ಸನಿಹದಲ್ಲೇ ಇದ್ದು, ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿರುವ ಬಿ.ಮೂಡ ಸರಕಾರಿ ಪ.ಪೂ. ಕಾಲೇಜಿನ ಕೊಠಡಿಗಳ ಕೊರತೆ ನೀಗಿಸುವ ನಿಟ್ಟಿನಲ್ಲಿ ಮಂಜೂರುಗೊಂಡಿರುವ 1 ಕೋ.ರೂ.ಗಳ ನೂತನ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಒಂಭತ್ತು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

558.3 ಚ.ಮೀ. ವಿಸ್ತೀರ್ಣದ ಜಿ ಪ್ಲಸ್‌ ವನ್‌ ನೂತನ ಕಟ್ಟಡದಲ್ಲಿ ಮೂರು ತರಗತಿ ಕೊಠಡಿಗಳು ಹಾಗೂ 2 ಪ್ರಯೋಗಾಲಯ ಕೊಠಡಿಗಳು ನಿರ್ಮಾಣಗೊಳ್ಳಲಿದೆ. ಬಿ.ಸಿ.ರೋಡ್‌ನಿಂದ ಗೂಡಿನಬಳಿ ರಸ್ತೆಯಲ್ಲಿ ಬಂಟ್ವಾಳ ರೈಲ್ವೇ ನಿಲ್ದಾಣದ ಪಕ್ಕದಲ್ಲಿ ಕಾಲೇಜಿದ್ದು, ನಗರ ಪ್ರದೇಶದಲ್ಲೇ ಇರುವುದರಿಂದ ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಹೀಗಾಗಿ ಕಾಲೇಜಿಗೆ ಹೆಚ್ಚಿನ ಕೊಠಡಿಗಳ ಬೇಡಿಕೆ ಇದ್ದು, ಕೆಲವು ತಿಂಗಳ ಹಿಂದೆ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಶಿಲಾನ್ಯಾಸ ನೆರವೇರಿಸಿದ್ದರು.

ಡಿಸೆಂಬರ್‌ನಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಪ್ರಸ್ತುತ ತಳಪಾಯದ ಕಾಮಗಾರಿ ಪ್ರಗತಿಯಲ್ಲಿದೆ. ಪಿಲ್ಲರ್‌ಗಳಿಗೆ ಕಬ್ಬಿಣದ ರಾಡ್‌ ಅಳವಡಿಕೆ ಪೂರ್ಣಗೊಂಡಿದೆ. ಲೋಕೋಪಯೋಗಿ ಇಲಾಖೆಯ ಮೂಲಕ ಜೆ.ಡಿ.ಸುವರ್ಣ ಕನ್‌ಸ್ಟ್ರಕ್ಷನ್ಸ್‌ ಸಂಸ್ಥೆಯು ಕಾಲೇಜು ಕಟ್ಟಡದ ಕಾಮಗಾರಿ ನಿರ್ವಹಿಸುತ್ತಿದೆ.

ತಲಾ 279.15 ಚ.ಮೀ.ನ 2 ಮಹಡಿನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ತಳ ಮಹಡಿ ಹಾಗೂ ಮೇಲೆ ಒಂದು ಮಹಡಿಯನ್ನು ಒಳಗೊಂಡಿದ್ದು, ಎರಡೂ ಕೂಡ ತಲಾ 279.15 ಚದರ ಮೀಟರ್‌ ವಿಸ್ತೀರ್ಣವನ್ನು ಒಳಗೊಂಡಿರುತ್ತದೆ. ಎರಡರಲ್ಲಿಯೂ 2 ಮೀ. ಅಗಲದಲ್ಲಿ ಕಾರಿಡಾರ್‌ ನಿರ್ಮಾಣವಾಗಲಿದೆ.

ತಳ ಮಹಡಿಯಲ್ಲಿ 9 ಮೀ.x6.5 ಮೀ.ನ ಮೂರು ತರಗತಿ ಕೊಠಡಿಗಳು ನಿರ್ಮಾ ಣವಾಗಲಿವೆ. ಮೇಲಿನ ಮಹಡಿಯಲ್ಲಿ ಕಾಲೇಜಿನ ಎರಡು ಪ್ರಯೋಗಾಲಯ ಕೊಠಡಿಗಳು ನಿರ್ಮಾಣವಾಗಲಿದ್ದು, ಒಂದು 13.615 ಮೀ. x 6.5 ಮೀ. ಹಾಗೂ ಮತ್ತೂಂದು 9 ಮೀ. x 6.5 ಮೀ. ವಿಸ್ತೀರ್ಣವನ್ನು ಒಳಗೊಂಡಿರುತ್ತದೆ. ಜತೆಗೆ 4.38 ಮೀ. 6.5 ಮೀ. ವಿಸ್ತೀರ್ಣದ ಮಹಿಳೆಯರ ಶೌಚಾಲಯವೂ ನಿರ್ಮಾಣಗೊಳ್ಳಲಿದೆ. ಎರಡೂ ಮಹಡಿಗಳಲ್ಲಿ ಮೆಟ್ಟಿಲುಗಳ ಸ್ಟೇರ್‌ಕೇಸ್‌ ನಿರ್ಮಾಣವಾಗಲಿದೆ. ಪುರುಷರ ಶೌಚಾಲಯ ಪ್ರತ್ಯೇಕವಾಗಿ ನಿರ್ಮಾಣವಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಸಾಮಾನ್ಯ ಹೆರಿಗೆಗೂ ಸಿಜೇರಿಯನ್‌ ಮಾಡಿಸಲು ವೈದ್ಯರ ಸೂಚನೆ!

ತಳ ಭಾಗ ಒಸರಿನ ಪ್ರದೇಶ

ಪ್ರಸ್ತುತ ಕಾಲೇಜು ಕಟ್ಟಡವು ಗೂಡಿನಬಳಿ ರಸ್ತೆಗಿಂತ ತಳ ಭಾಗದಲ್ಲಿ ಇದ್ದು, ಜತೆಗೆ ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾರಣ ತಳಭಾಗವು ಒಸರಿನಿಂದ ಕೂಡಿದೆ. ಕಟ್ಟಡಕ್ಕೆ ಪಿಲ್ಲರ್‌ಗಳನ್ನು ಎಬ್ಬಿಸುವುದಕ್ಕೆ ಪಾಯ ತೆಗೆಯುವ ವೇಳೆ ನೀರು ಸಿಕ್ಕಿತ್ತು. ಹೀಗಾಗಿ ಕಾಮಗಾರಿಯ ವೇಗಕ್ಕೆ ತಡೆ ಬಿದ್ದಿದೆ. ನೀರಿನ ಪ್ರದೇಶದಲ್ಲಿ ನಿರೀಕ್ಷೆಯಂತೆ ಕಾಮಗಾರಿ ನಡೆಸುವುದು ಅಸಾಧ್ಯವಾಗಿರುವ ಜತೆಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಗುತ್ತಿಗೆಯ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.