![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
Badagannur ದಿಢೀರ್ ಅಸ್ವಸ್ಥ: ವ್ಯಕ್ತಿ ಸಾವು
Team Udayavani, Dec 10, 2023, 12:19 AM IST
![Badagannur ದಿಢೀರ್ ಅಸ್ವಸ್ಥ: ವ್ಯಕ್ತಿ ಸಾವು](https://www.udayavani.com/wp-content/uploads/2023/12/Brahmavar-2-620x372.jpg)
ಬಡಗನ್ನೂರು: ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಮಾಡಿ (45) ಡಿ. 9ರಂದು ದಿಢೀರ್ ಅಸ್ವಸ್ಥಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಡಿ. 8ರಂದು ಮೈಂದನಡ್ಕದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾಟವೊಂದರಲ್ಲಿ ಭಾಗವಹಿಸಿ ರಾತ್ರಿ ಮನೆಗೆ ಬಂದಿದ್ದ ಅವರು ದಿಢೀರ್ ರಕ್ತವಾಂತಿ ಮಾಡಲಾರಂಭಿಸಿದ್ದರು. ಡಿ. 9ರಂದು ಬೆಳಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಬಡಗನ್ನೂರು ಗ್ರಾಮ ಪಂಚಾಯತ್ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಒಂದು ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಕೋಟಿ ಚೆನ್ನಯ ಯುವಕ ಮಂಡಲ ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು ಚಿರಪರಿಚಿತರಾಗಿದ್ದರು.
ಕೆಲವು ತಿಂಗಳ ಹಿಂದೆ ಗುರುಪ್ರಸಾದ್ ರೈ ಕುದ್ಮಾಡಿ ಅವರ ಮನೆಗೆ ದರೋಡೆಕೋರರು ನುಗ್ಗಿ ತಾಯಿ, ಮಗನನ್ನು ಕಟ್ಟಿ ಹಾಕಿ ನಗದು, ಚಿನ್ನಾಭರಣ ದರೋಡೆ ಮಾಡಿದ್ದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.