ಬೆಳ್ಳಿ ಹಬ್ಬ ವರ್ಷ, ಪುಸ್ತಕ ಭಿಕ್ಷೆ ಯೋಜನೆಗೆ ಚಾಲನೆ


Team Udayavani, Feb 1, 2019, 6:26 AM IST

february-7.jpg

ಬಂಟ್ವಾಳ : ಹಿರಿಯರ ಹೆಜ್ಜೆಯ ಮೌಲ್ಯ ಗುರುತಿಸಿ ಮುನ್ನಡೆಯಬೇಕು. ಜೀವನದಲ್ಲಿ ದೊಡ್ಡ ಕನಸುಗಳನ್ನು ಕಂಡು ಅದನ್ನು ಸಾಕ್ಷಾತ್ಕಾರಗೊಳಿಸುವ ಛಲ ಇರಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ತಿಳಿಸಿದರು.

ಅವರು ಜ. 30ರಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬೆಳ್ಳಿ ಹಬ್ಬ ವರ್ಷಾಚರಣೆ ಮತ್ತು ಪುಸ್ತಕ ಭಿಕ್ಷೆ ಯೋಜನೆಗೆ ಆರಂಭಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಸಂಸ್ಕೃತಿ ಗ್ರಾಮ ರಚನೆಗೆ ಅವಶ್ಯವಾದ ಜಮೀನು ಒದಗಿಸಲು ಜಿಲ್ಲಾಧಿಕಾರಿ ಅವರಲ್ಲಿ ಪ್ರೊ| ತುಕಾರಾಮ್‌ ಪೂಜಾರಿ ಸಹಿತ ಮಾತನಾಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಡಾ| ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಾತನಾಡಿ, ತುಳುನಾಡಿನ ಇತಿಹಾಸ ತಿಳಿಸುವ ವಸ್ತುಗಳನ್ನು ಇಲ್ಲಿ ಪ್ರತ್ಯಕ್ಷ ಕಾಣಲು ಸಾಧ್ಯವಾಗಿದೆ. ಮುಂದಿನ ಪೀಳಿಗೆಗೆ ಇದು ಮೌಲ್ಯಯುತ ಕೊಡುಗೆ ಎಂದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಮಾತನಾಡಿ, ತುಳು ಬದುಕು ವಸ್ತು ಸಂಗ್ರಹಾಲಯ ತುಳುನಾಡಿನ ಚರಿತ್ರೆಯ ಪ್ರತಿಬಿಂಬ. ಅದನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ. ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ| ತುಕಾರಾಮ್‌ ಪೂಜಾರಿ ಅಪೇಕ್ಷೆಯಂತೆ ಸಂಸ್ಕೃತಿ ಗ್ರಾಮದ ಅಪೇಕ್ಷೆ ಈಡೇರುವುದಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಾಹಿತಿ ಆಗುಂಬೆ ನಟರಾಜ್‌ ಮಾತನಾಡಿ, ಇತಿಹಾಸದ ದೃಷ್ಟಿ ಯಲ್ಲಿ ರಾಣಿ ಅಬ್ಬಕ್ಕನಿಗೆ ಸಾಕಷ್ಟು ಪ್ರಾಧಾನ್ಯ ನೀಡಿಲ್ಲ. ನೈಜ ಇತಿಹಾಸ ಅರಿತುಕೊಂಡು ಸ್ವಾಭಿಮಾನಿ ಜ್ಞಾನವಂತ ಶೀಲವಂತರಾಗಿ ಬದುಕಬೇಕು ಎಂದು ಕರೆ ನೀಡಿದರು.ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ| ಕ್ಸೇವಿಯರ್‌ ಡಿ’ಸೋಜಾ ಅವರು ಅಧ್ಯಯನ ಕೇಂದ್ರದ ಅಧ್ಯಕ್ಷರ ಸಾಧನೆಯನ್ನು ಅಭಿನಂದಿಸಿದರು.

ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಟಾರ್‌ ತುಳು ಬದುಕು ವಸ್ತುಸಂಗ್ರಹಾಲಯ ಬೆಳೆದು ಬಂದ ದಾರಿಯನ್ನು ತಿಳಿಸಿದರು.ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಪ್ರೊ| ತುಕಾರಾಮ್‌ ಪೂಜಾರಿ ಸ್ವಾಗತಿಸಿ, ಪ್ರಸ್ತಾವಿಸಿದರು. ಕೇಂದ್ರ ಕಾರ್ಯದರ್ಶಿ ಡಾ| ಆಶಾಲತಾ ಸುವರ್ಣ ವಂದಿಸಿದರು. ನ್ಯಾಯವಾದಿ ನವನೀತ ಹಿಂಗಾಣಿ ನಿರೂಪಿಸಿದರು.

ಸಂಸ್ಕೃತಿ ಗ್ರಾಮದ ಕನಸು
ತುಳುನಾಡಿನಲ್ಲಿ ಸಾಂಸ್ಕೃತಿಕ ಇತಿಹಾಸವನ್ನು ಭೌತಿಕ ವಸ್ತುವಿನ ಆಧಾರದಲ್ಲಿ ಕಟ್ಟುವ ಕೆಲಸ ಆಗಬೇಕಾಗಿದೆ. ನಮ್ಮಲ್ಲಿ ಮೌಕಿಕ ಇತಿಹಾಸ ಸಮೃದ್ಧ್ದವಾಗಿದ್ದು, ಅದರ ಅಧ್ಯಯನ ಕಾರ್ಯ ನಡೆಯಬೇಕು. ತುಳುನಾಡಿಗೆ ಒಂದು ಸಂಸ್ಕೃತಿ ಗ್ರಾಮದ ಕನಸಿದ್ದು, ಅದನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಬೇಕಾಗಿದೆ. ಎಸ್‌.ಯು. ಫಣಿಯಾಡಿ ಗ್ರಂಥಾಲಯಕ್ಕೆ ಹತ್ತು ಸಾವಿರ ಪುಸ್ತಕ ಸಂಗ್ರಹಿಸುವ ಪುಸ್ತಕ ಭಿಕ್ಷೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
– ಪ್ರೊ| ತುಕಾರಾಮ ಪೂಜಾರಿ,
ಅಧ್ಯಕ್ಷರು, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.