Bantwal ನೆರೆಮನೆಯ ವ್ಯಕ್ತಿಗೆ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ; ದೂರು
Team Udayavani, Sep 5, 2023, 12:27 AM IST
ಬಂಟ್ವಾಳ: ಮೇರಮಜಲಿನಲ್ಲಿ ನೆರೆಮನೆಯ ವ್ಯಕ್ತಿಗೆ ಆರೋಪಿಯೋರ್ವ ಅವಾಚ್ಯ ಶಬ್ದಗಳಿಂದ ಬೈದು ಮರದ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಸೆ. 2ರಂದು ರಾತ್ರಿ ನಡೆದಿದೆ.
ಮೇರಮಜಲು ನಿವಾಸಿ ಸಂತೋಷ ಪ್ರಕರಣ ಆರೋಪಿಯಾಗಿದ್ದು, ಈತನ ನೆರೆಮನೆಯ ವ್ಯಕ್ತಿ ದಯಾನಂದ ಅವರಿಗೆ ಹಲ್ಲೆ ನಡೆಸಿದ್ದಾನೆ. ದಯಾನಂದ ಹಾಗೂ ಅವರ ಪತ್ನಿಗೆ ರೇಷನ್ ಅಕ್ಕಿಯ ವಿಚಾರದಲ್ಲಿ ಅಗಾಗ ಜಗಳವಾಗುತ್ತಿತ್ತು.
ಇದೇ ವಿಚಾರಕ್ಕೆ ಸಂಬಂಧಿಸಿ ಆರೋಪಿ ಸಂತೋಷನು ದಯಾನಂದರಿಗೆ ಬೈಯುತ್ತಿದ್ದ.
ಇದೇ ವಿಚಾರದ ಮುಂದುವರಿದ ಭಾಗವಾಗಿ ಸೆ. 2ರಂದು ರಾತ್ರಿ ಆರೋಪಿಯು ದಯಾನಂದರ ಮನೆಗೆ ಅಕ್ರಮ ಪ್ರವೇಶ ಮಾಡಿ ಅವ್ಯಾಚವಾಗಿ ಬೈದು, ದೊಣ್ಣೆಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ದಯಾನಂದ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ