ಬಂಟ್ವಾಳ: ಬಿಜೆಪಿ ವಿಜಯೋತ್ಸವ
Team Udayavani, Jun 9, 2019, 6:00 AM IST
ಬಂಟ್ವಾಳ: ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ವಿಜಯೋತ್ಸವ ಮೆರವಣಿಗೆ ಜೂ.8 ರಂದು ಸಂಜೆ ಬಿ.ಸಿ.ರೋಡ್ ಪೊಳಲಿ ದ್ವಾರದಿಂದ ಆರಂಭವಾಗಿ ಬಂಟ್ವಾಳ ಕಾಲೇಜು ರಸ್ತೆ ಜಂಕ್ಷನ್ನಲ್ಲಿ ಸಮಾಪನಗೊಂಡಿತು.
ರಥದ ಮಾದರಿಯಲ್ಲಿ ಹೂಗಳಿಂದ ಅಲಂಕರಿಸಿದ ತೆರೆದ ವಾಹನದಲ್ಲಿ ನಿಂತು ಸಂಸದರು, ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ಬಿಜೆಪಿ ನೇತಾರ ಶ್ರೀಕಾಂತ ಶೆಟ್ಟಿ ಮತದಾರರಿಗೆ ಕೃತಜ್ಞತೆ ಸಮರ್ಪಣೆ ಮಾಡಿದರು.
ಬಿ.ಸಿ.ರೋಡ್ ಕೈಕಂಬ ಪೊಳಲಿ ದ್ವಾರದಿಂದ ಸಿಡಿಮದ್ದಿನ ಅಬ್ಬರದೊಂದಿಗೆ ಆರಂಭವಾದ ಮೆರವಣಿಗೆಯು ಡಿ.ಜೆ. ಕುಣಿತದ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿಸ್ತಿನಿಂದ ಸಾಗಿಬಂತು. ಮೆರವಣಿಗೆಯಲ್ಲಿ ಚೆಂಡೆ ವಾದನ, ಕೀಲು ಕುದುರೆ, ಗೊಂಬೆ ಬಳಗ, ಬಣ್ಣದ ಕೊಡೆಗಳ ಸಾಲು ಸಾಥ್ ನೀಡಿತ್ತು.
ಮೆರವಣಿಗೆಯು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಬಸ್ತಿಪಡು³, ಬಂಟ್ವಾಳ ಕೆಳಗಿನ ಪೇಟೆ, ಬಂಟ್ವಾಳ ಪೇಟೆ, ಜಕ್ರಿಬೆಟ್ಟು, ಬಂಟ್ವಾಳ ಬೈಪಾಸ್ ಜಂಕ್ಷನ್ಗೆ ತಲುಪುವ ಮೂಲಕ ಸಮಾಪನಗೊಂಡಿತು. ರಾತ್ರಿ ಇಲ್ಲಿನ ಸಮಾಜ ಭವನದಲ್ಲಿ ಊಟದ ವ್ಯವಸ್ಥೆ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಜಿ.ಪಂ. ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ. ಪೂಜಾರಿ, ರವೀಂದ್ರ ಕಂಬಳಿ, ಸುಲೋಚನಾ ಜಿ.ಕೆ. ಭಟ್, ಜಿ. ಆನಂದ, ಪ್ರಭಾಕರ ಪ್ರಭು, ಪ್ರಮುಖರಾದ ರಾಮ್ದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ದಿನೇಶ್ ಅಮೂrರು, ಪುಷ್ಪರಾಜ ಶೆಟ್ಟಿ, ದಿನೇಶ್ ಭಂಡಾರಿ, ರಂಜಿತ್ ಮೈರ, ಸುದರ್ಶನ ಬಜ, ಪುರುಷ ಸಾಲ್ಯಾನ್ ನೆತ್ತೆರಕೆರೆ, ವಜ್ರನಾಥ ಮಡ್ಲಮಜಲು, ಶ್ರೀಧರ ಶೆಟ್ಟಿ, ಸಂಧ್ಯಾವೆಂಕಟೇಶ, ನಾರಾಯಣ ಶೆಟ್ಟಿ ಕೊಲ್ಯ ಸಹಿತ ಪಕ್ಷ ಪ್ರಮುಖರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ