Bantwal;ಆಟವಾಡಲು ಹೋಗಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವು
Team Udayavani, Jan 18, 2024, 11:01 PM IST
ಬಂಟ್ವಾಳ: ನೆರೆ ಹೊರೆಯ ಸಂಬಂಧಿಕ ಮಕ್ಕಳ ಜತೆ ನೇತ್ರಾವತಿ ನದಿ ಕಿನಾರೆಗೆ ಆಟವಾಡಲು ಹೋಗಿ ಬಾಲಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಾವೂರು ಗ್ರಾಮದ ಕೂಡಿಬೈಲು ಬಳಿಯ ನೆಕ್ಕಿಲಾರುನಲ್ಲಿ ನಡೆದಿದೆ.
ನಾವೂರು ಗ್ರಾಮದ ಕೂಡಿಬೈಲು ನಿವಾಸಿ ಪುಟ್ಟಣ್ಣ ನಾಯಕ್ ಅವರ ಪುತ್ರ ಪ್ರಜ್ವಲ್ ನಾಯಕ್ (14) ಮೃತ ಬಾಲಕ. ನಾಲ್ಕೈದು ಜನ ಮಕ್ಕಳು ನದಿ ಬದಿಗೆ ಆಟವಾಡಲು ತೆರಳಿದ್ದು, ಈ ವೇಳೆ ಆತ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ತತ್ಕ್ಷಣ ಜತೆಗಿದ್ದವರು ಆತನ ರಕ್ಷಣೆಗೆ ಮುಂದಾದರೂ, ಈ ಭಾಗದಲ್ಲಿ ನದಿಯಲ್ಲಿ ಸಾಕಷ್ಟು ಆಳವಿದ್ದ ಹಿನ್ನೆಲೆಯಲ್ಲಿ ಆತ ಏಕಾಏಕಿ ಮುಳುಗಿದ್ದಾನೆ.
ಪುಟ್ಟಣ್ಣ ನಾಯಕ್ ಅವರ ಇಬ್ಬರು ಮಕ್ಕಳಲ್ಲಿ ಕಿರಿಯವನಾಗಿರುವ ಪ್ರಜ್ವಲ್ ಬಂಟ್ವಾಳ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಆತನ ಅಕ್ಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ